ಜಿಎಸ್‌ಟಿ ನೋಂದಣಿಗೆ ಜ.15 ಡೆಡ್‌ಲೈನ್‌


Team Udayavani, Jan 3, 2017, 11:38 AM IST

gst-tax.jpg

ಬೆಂಗಳೂರು: ಒಂದು ದೇಶ, ಒಂದು ತೆರಿಗೆ ಹಾಗೂ ಒಂದೇ ಸೇವೆ ಕಲ್ಪನೆಯಡಿ ದೇಶದಲ್ಲಿ ಜಾರಿಯಾಗುತ್ತಿರುವ ಬಹುನಿರೀಕ್ಷಿತ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಪದ್ಧತಿಗೆ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದ್ದು, ಜ.15ರೊಳಗೆ ವರ್ತಕರು ನೋಂದಾಯಿಸಿಕೊಳ್ಳಬೇಕು ಎಂದು ವಾಣಿಜ್ಯ ತೆರಿಗೆ ಇಲಾಖೆಯ ಆಯುಕ್ತ ರಿತ್ವಿಕ್‌ ಪಾಂಡೆ ತಿಳಿಸಿದ್ದಾರೆ. 

ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್ಕೆಸಿಸಿಐ) ಸಹಯೋಗದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 6.16 ಲಕ್ಷ ನೋಂದಾಯಿತ ವರ್ತಕರಿದ್ದು, ವ್ಯಾಪಾರ ವಹಿವಾಟು ಸುಗಮವಾಗಿ ನಡೆಸುವ ಉದ್ದೇಶದಿಂದ ಮೌಲ್ಯವರ್ಧಿತ ತೆರಿಗೆಯಿಂದ (ವ್ಯಾಟ್‌) ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವರ್ಗಗೊಳ್ಳಬೇಕಿದೆ. ಜಿಎಸ್‌ಟಿಯಲ್ಲಿ ದಾಖಲಾಗಲು ವಾಣಿಜ್ಯ ತೆರಿಗೆ ಇಲಾಖೆಯು ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದರು. 

ವರ್ತಕರಿಗೆ ನೆರವಾಗುವ ದೃಷ್ಟಿಯಿಂದ ಜ.1ರಿಂದ ಜ.15ರವರೆಗೆ ರಾಜ್ಯದಲ್ಲಿನ ವ್ಯಾಟ್‌ ಕಚೇರಿಗಳಲ್ಲಿ ಇಲಾಖೆಯ 4-5 ಅಧಿಕಾರಿಗಳು ವಿಶೇಷವಾಗಿ ಕಾರ್ಯನಿರ್ವಹಿಸಲಿದ್ದಾರೆ. ವರ್ತಕರಿಗೆ ಜಿಎಸ್‌ಟಿ ನೋಂದಣಿ ಪ್ರಕ್ರಿಯೆಯಲ್ಲಿ ಸಹಾಯ ಮಾಡಲಿದ್ದು, ಅನುಮಾನಗಳನ್ನು ಬಗೆಹರಿಸಲಿದ್ದಾರೆ. ಜಿಎಸ್‌ಟಿ ಜಾರಿಯಾದ ಬಳಿಕ ಬಹುತೇಕ ವಸ್ತುಗಳ ಬೆಲೆಯಲ್ಲಿ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ನಿರೀಕ್ಷಿಸಲಾಗಿದೆ ಎಂದರು. 

2016-17ನೇ ಸಾಲಿನಲ್ಲಿ ರಾಜ್ಯ ಸರ್ಕಾರವು 51 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹದ ಗುರಿ ನೀಡಿದ್ದು, ಡಿಸೆಂಬರ್‌ ಅಂತ್ಯಕ್ಕೆ 38,700 ಕೋಟಿ ರೂ. ಸಂಗ್ರಹಿಸಲಾಗಿದೆ. ತೆರಿಗೆ ಸಂಗ್ರಹದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಶೇ.13ರಷ್ಟು ಹೆಚ್ಚಳವಾಗಿದೆ. ಇನ್ನು ಮೂರು ತಿಂಗಳುಗಳ ಕಾಲಾವಕಾಶ ಇದ್ದು, ಆ ವೇಳೆಗೆ ತೆರಿಗೆ ಸಂಗ್ರಹದ ಗುರಿ ತಲುಪಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ನೋಟು ಅಮಾನ್ಯದಿಂದ ತೆರಿಗೆ ಸಂಗ್ರಹದಲ್ಲಿ ಸಮಸ್ಯೆಯಾಗಿಲ್ಲ ಎಂದರು. 

ಸುದ್ದಿಗೋಷ್ಠಿಯಲ್ಲಿ ಎಫ್ಕೆಸಿಸಿಐ ಅಧ್ಯಕ್ಷ ಎಂ.ಸಿ.ದಿನೇಶ್‌, ಹಿರಿಯ ಉಪಾಧ್ಯಕ್ಷ ಕೆ.ರವಿ, ಉಪಾಧ್ಯಕ್ಷ ಸುಧಾಕರ ಶೆಟ್ಟಿ, ರಾಜ್ಯ ತೆರಿಗೆ ಸಮಿತಿ ಸಮಿತಿ ಅಧ್ಯಕ್ಷ ಬಿ.ಟಿ.ಮನೋಹರ್‌, ವಾಣಿಜ್ಯ ತೆರಿಗೆ ಇಲಾಖೆ ಹೆಚ್ಚುವರಿ ನಿರ್ದೇಶಕ ಬಿ.ವಿ.ರವಿ, ಜಂಟಿ ಆಯುಕ್ತ ಬಸವರಾಜ್‌ ಉಪಸ್ಥಿತರಿದ್ದರು.

20 ಲಕ್ಷ ರೂ. ವ್ಯವಹಾರ ನಿಗದಿ
ವ್ಯಾಟ್‌ ಪದ್ಧತಿಯಲ್ಲಿ ಆದಾಯ ಮಿತಿ 10 ಲಕ್ಷ ರೂ.ಗಿಂತ ಹೆಚ್ಚು ಹೊಂದಿ ರುವವರು ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕಿತ್ತು. ಆದರೆ, ಜಿಎಸ್‌ಟಿ ಪದ್ಧತಿಯಲ್ಲಿ 20 ಲಕ್ಷ ರೂ. ನಿಗದಿ ಮಾಡಲಾಗಿದೆ. 20 ಲಕ್ಷರೂ.ಗಿಂತ ಕಡಿಮೆ ವ್ಯವಹಾರ ನಡೆಸುವ ವರ್ತಕರ ನೋಂದಣಿ ಕಡ್ಡಾಯವಲ್ಲ.

ಆದರೂ, ಪಾರದರ್ಶಕ ವ್ಯವಹಾರದ ದೃಷ್ಟಿಯಿಂದ ನೋಂದಣಿ ಮಾಡಿಕೊಳ್ಳುವುದು ಸೂಕ್ತ. ಹೀಗಾಗಿ ಎಲ್ಲಾ ವರ್ತಕರು ಜಿಎಸ್‌ಟಿ ನೋಂದಣಿ ಮಾಡಿಕೊಳ್ಳಬೇಕು. ವರ್ತಕರ ಅನುಕೂಲಕ್ಕಾಗಿ ಕನ್ನಡ ಭಾಷೆಯಲ್ಲಿ ವಿಡಿಯೋವೊಂದನ್ನು ಸಿದ್ದಪಡಿಸಲಾ ಗಿದ್ದು, www.ctax.kar.nic.in ನಲ್ಲಿ ವೀಕ್ಷಿಸಬಹುದು.

ನೋಂದಣಿ ಪ್ರಕ್ರಿಯೆ ಹೀಗೆ?
ಈಗಾಗಲೇ ಎಫ್ಕೆಸಿಸಿಐ, ಕಾಸಿಯಾ ಮತ್ತು ಜಿಲ್ಲಾ ವಾಣಿಜ್ಯ ಮತ್ತು ವ್ಯಾಪಾರ ಸಂಸ್ಥೆಗಳ ಸಹಯೋಗದೊಂದಿಗೆ 60ಕ್ಕೂ ಹೆಚ್ಚು ಕಾರ್ಯಾಗಾರಗಳನ್ನು ಹಮ್ಮಿಕೊಳ್ಳಲಾಗಿದೆ. ಅಲ್ಲದೇ, ವರ್ತಕರಿಗೆ ಎಸ್‌ಎಂಎಸ್‌ ಮೂಲಕ ಮಾಹಿತಿ ನೀಡಲಾಗಿದ್ದು, ಅದರಲ್ಲಿ ವರ್ತಕರ ಯೂಸರ್‌ ಐಡಿ ಮತ್ತು ಪಾಸ್‌ವರ್ಡ್‌ಗಳನ್ನು ರವಾನಿಸಲಾಗಿದೆ.

www.gst.gov.in ವೆಬ್‌ಸೈಟ್‌ ಲಾಗಿನ್‌ ಆಗಿ ಯೂಸರ್‌ ಐಡಿ ಮತ್ತು ಪಾಸ್‌ವರ್ಡ್‌ ಮೂಲಕ ವೈಯಕ್ತಿಕ ಮತ್ತು ಕಂಪನಿಯ ವಿವರಗಳನ್ನು ಭರ್ತಿ ಮಾಡಬೇಕು. ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ ವೆಬ್‌ಸೈಟ್‌ ಮೂಲಕವೇ ನೋಂದಣಿ ಮಾಡಿಕೊಳ್ಳಲು ಅವಕಾಶ ಇದೆ. ವ್ಯಾಟ್‌ ಪಡೆದುಕೊಳ್ಳುವ ವೇಳೆ ಲಗತ್ತಿಸಿದ ದಾಖಲೆಗಳನ್ನು ಒದಗಿಸಬಹುದಾಗಿದೆ.

ಟಾಪ್ ನ್ಯೂಸ್

yogi-2

Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

Priyanka Gandhi

Election; ಪ್ರಧಾನಿ ಮೋದಿ ಯಾಕೆ ಮಂಗಳಸೂತ್ರ,ಧರ್ಮದ ಮೇಲೆ ಮತ ಕೇಳುತ್ತಾರೆ: ಪ್ರಿಯಾಂಕಾ ಗಾಂಧಿ

raghu bhat

Congress ಗಾಡ್ ಫಾದರ್ ಸಂಸ್ಕೃತಿ ಬಿಜೆಪಿಗೆ ಬಂದಿದೆ: ರಘುಪತಿ ಭಟ್

1-asasa

Cat ರಕ್ಷಣೆಗೆ ಭಾರೀ ಕಾರ್ಯಾಚರಣೆ ; ಕೊನೆಗೆ ಆಗಿದ್ದೆ ಬೇರೆ!: ವೈರಲ್ ವಿಡಿಯೋ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

7

ಇನ್‌ಸ್ಪೆಕ್ಟರ್‌ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್‌ ಸೆರೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

yogi-2

Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

1-wqewqewe

Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.