ದಿಲ್ಲಿಯಂತೆ ಇಲ್ಲೂ ಗಲ್ಲಿ ಕ್ಲಿನಿಕ್‌ !

ಬಜೆಟ್‌ನಲ್ಲಿ ಘೋಷಣೆ ಸಾಧ್ಯತೆ, ತ್ವರಿತ ಚಿಕಿತ್ಸೆಗೆ ಕಡಿಮೆ ವೆಚ್ಚದಲ್ಲಿ ಹೆಚ್ಚು ಜನರಿಗೆ ಅನುಕೂಲ

Team Udayavani, Feb 23, 2021, 11:15 AM IST

ದಿಲ್ಲಿಯಂತೆ ಇಲ್ಲೂ ಗಲ್ಲಿ ಕ್ಲಿನಿಕ್‌ !

ಬೆಂಗಳೂರು: ರಾಷ್ಟ್ರ ರಾಜಧಾನಿ ಮಾದರಿಯಲ್ಲಿಯೇ ರಾಜ್ಯ ರಾಜಧಾನಿಯಲ್ಲಿಯೂ ಸರ್ಕಾರಿ ಗಲ್ಲಿ ಕ್ಲಿನಿಕ್‌ಗಳು ಬರಲಿವೆ.

ಎಲ್ಲಾ ಅಂದುಕೊಂಡಂತೆ ಆದರೆ ಮಾ. 8 ರಂದು ಮಂಡಿಸಲಿರುವ ರಾಜ್ಯ ಬಜೆಟ್‌ನಲ್ಲಿಯೇ ಈ ಕುರಿತು ಘೋಷಣೆಯಾಗಲಿದೆ. ದೆಹಲಿ ಮಹಾನಗರದಲ್ಲಿ ಈಗಾಗಲೇ 450 ಕ್ಲಿನಿಕ್‌ಗಳು (ಮೊಹಲ್ಲಾ ಕ್ಲಿನಿಕ್‌) ಕಾರ್ಯನಿರ್ವಹಿಸುತ್ತಿವೆ. ಕಳೆದ ಐದು ವರ್ಷಗಳಿಂದ ಕೋಟ್ಯಂತರ ಸ್ಥಳೀಯರಿಗೆ ಉಚಿತ ರೋಗಪತ್ತೆ ಮತ್ತು ಚಿಕಿತ್ಸೆ ಪಡೆದಿದ್ದಾರೆ.

ಕಡಿಮೆ ಸಿಬ್ಬಂದಿ, ನಿರ್ವಹಣೆ ವೆಚ್ಚ ಹಾಗೂ ಸಾರ್ವಜನಿಕರಿಗೆ ಸಮೀಪದಲ್ಲಿ ತ್ವರಿತ ಚಿಕಿತ್ಸೆ ದೊರೆಯುತ್ತಿದೆ. ಇದೇ ಮಾದರಿಯಲ್ಲಿ ಬೆಂಗಳೂರಿನ 57 ಕಡೆಗಳಲ್ಲಿ ಆರಂಭಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಕೋವಿಡ್ ಸಂಕಷ್ಟದ ಸಂದರ್ಭಗಳನ್ನು ನಿರ್ವಹಣೆ ಮಾಡಲು ಮಹಾನಗರಗಳಲ್ಲಿ ಆರೋಗ್ಯ ಕೇಂದ್ರಗಳು ಸಂಖ್ಯೆ ಹೆಚ್ಚಿಸಬೇಕು. ಅದರಲ್ಲೂ ತ್ವರಿತ ಚಿಕಿತ್ಸೆ ಸಿಗುವ ಆರೋಗ್ಯ ಕೇಂದ್ರಗಳ ಅವಶ್ಯಕತೆ ಹೆಚ್ಚಿದೆ ಎಂಬುದನ್ನು ಸರ್ಕಾರ ಅರಿತಿದೆ. ಪ್ರಮುಖವಾಗಿ ನಗರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಇಲ್ಲದ ಕಡೆಗಳಲ್ಲಿ ಮತ್ತು ಸ್ಲಂಗಳು, ಬಡವರು ಹೆಚ್ಚಿರುವ ಕಡೆಗಳಲ್ಲಿ ಗಲ್ಲಿ ಕ್ಲಿನಿಕ್‌ಗಳನ್ನು ಆರಂಭಿಸುವ ಚಿಂತನೆ ನಡೆದಿದೆ.

ವಾರ್ಡ್‌ಗೆ ಒಂದು ಆರೋಗ್ಯ ಕೇಂದ್ರಕ್ಕೆ ಪ್ರಸ್ತಾವನೆ:

ಇನ್ನೊದೆಡೆ ಬಿಬಿಎಂಪಿ ವ್ಯಾಪ್ತಿಯಲ್ಲಿ 198 ವಾರ್ಡ್‌ ಇದ್ದು, 141 ಆರೋಗ್ಯ ಕೇಂದ್ರ ಮಾತ್ರ ಕಾರ್ಯ ನಿರ್ವಹಿಸುತ್ತಿವೆ. ಪ್ರತಿ ವಾರ್ಡ್‌ಗೆ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರ ಅವಶ್ಯಕವಿದ್ದು, ಈ ನಿಟ್ಟಿನಲ್ಲಿ ಹೊಸ 57 ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಅನುದಾನ ನೀಡಿ ಎಂದು ರಾಜ್ಯ ಸರ್ಕಾರಕ್ಕೆ ಈಗಾಗಲೇ ಬಿಬಿಎಂಪಿ ಪ್ರಸ್ತಾ ವನೆ ಸಲ್ಲಿಸಿದೆ. ಪ್ರಾಥಮಿಕ ಆರೋಗ್ಯಕೇಂದ್ರ ಇಲ್ಲದ ಕಡೆಗಳಲ್ಲಿಯೆ ಮೊದಲು ಗಲ್ಲಿ ಕ್ಲಿನಿಕ್‌ಗಳು ಆರಂಭವಾಗುವ ಸಾಧ್ಯತೆ ಇದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಡಿಮೆ ಸಿಬ್ಬಂದಿ, ಕಡಿಮೆ ವೆಚ್ಚ: ಸದ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 10ಕ್ಕೂ ಹೆಚ್ಚು ಸಿಬ್ಬಂದಿ ಇರಲಿದ್ದು, ದೊಡ್ಡ ಕಟ್ಟಡಗಳಿರುತ್ತವೆ. ಆದರೆ, ಗಲ್ಲಿ ಕ್ಲಿನಿಕ್‌ಗಳಲ್ಲಿ ಒಬ್ಬ ವೈದ್ಯ, ನರ್ಸ್‌, ಫಾರ್ಮಸಿಸ್ಟ್‌, ಗ್ರೂಪ್‌ ಡಿ ನೌಕರರಿರುತ್ತಾರೆ. ಮನೆ, ಸಣ್ಣ ಕಟ್ಟಡಗಳಲ್ಲಿಯೂ ಕಾರ್ಯಾರಂಭಿಸಬಹುದು. ಒಟ್ಟಾರೆ ನಿರ್ಮಾಣ ಮತ್ತು ನಿರ್ವಹಣೆ ವೆಚ್ಚವೂ ಕಡಿಮೆ. ಹೆಚ್ಚು ಜನರಿಗೆ ತಲುಪಬಹುದು. ಜತೆಗೆ ನಗರದ ಪ್ರಮುಖ ಆಸ್ಪತ್ರೆಗಳ ಹೊರೆಯನ್ನು ಕಡಿಮೆ ಮಾಡಲಿದ್ದು, ಹೆಚ್ಚುವರಿ ಚಿಕಿತ್ಸೆ ಇದ್ದರೆ ಮಾತ್ರವೇ ತೆರಳುವ ಅವಶ್ಯಕತೆ ಬೀಳುತ್ತದೆ.

ಈಗಾಗಲೇ ಬೆಂಗಳೂರಲ್ಲಿದೆ ಮೊಹಲ್ಲಾ ಕ್ಲಿನಿಕ್‌ :

ಆಮ್‌ಆದ್ಮಿ ಪಾರ್ಟಿಯು ದೆಹಲಿ ಮಾದರಿಯಲ್ಲಿ ಶಾಂತಿನಗರದ ಬಳಿ ಮೊಹಲ್ಲಾ ಕ್ಲಿನಿಕ್‌ ಅನ್ನು “ಆಮ್‌ ಆದ್ಮಿ ಕ್ಲಿನಿಕ್‌’ ಹೆಸರಿನಲ್ಲಿ ಆರಂಭಿಸಿದೆ. ನವೆಂಬರ್‌ನಿಂದ ಕಾರ್ಯಾರಂಭಿಸಿದ್ದು, ಉಚಿತವಾಗಿ ಚಿಕಿತ್ಸೆನೀಡುತ್ತಿದೆ. ನಿತ್ಯ 50 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಂದಿನ ಬಿಬಿಎಂಪಿ ಚುನಾವಣೆಯನ್ನು ಗುರಿಯಾಗಿಸಿಕೊಂಡು ಈ ಕ್ಲಿನಿಕ್‌ ಆರಂಭಿಸಲಾಗಿದೆ.

ಯಾವ ಚಿಕಿತ್ಸೆ ಸೌಲಭ್ಯ ಲಭ್ಯ? :  ಸಂಪೂರ್ಣ ಉಚಿತವಾಗಿ ಸೇವೆ ಇರಲಿದೆ. ಜ್ವರ ಶೀತ ಮಾದರಿಯ ವೈರಲ್‌ ಕಾಯಿಲೆಗಳ ಚಿಕಿತ್ಸೆಯಿಂದ ಹಿಡಿದು ಹೃದ್ರೋಗ, ರಕ್ತದೊತ್ತಡ, ಮಧುಮೇಹ ಸೇರಿದಂತೆ ದೀರ್ಘ‌ ಕಾಲದ ಆರೋಗ್ಯ ಸಮಸ್ಯೆಗಳ ಫಾಲೋ ಅಪ್‌ ತಪಾಸಣೆಯೂ ಲಭ್ಯವಿದೆ. 50ಕ್ಕೂ ಹೆಚ್ಚು ರೋಗಪತ್ತೆ ಪರೀಕ್ಷೆಗಳು ಅವುಗಳಿಗೆ ಚಿಕಿತ್ಸೆ ಸೌಲಭ್ಯ ಇರಲಿದೆ. ಹೆಚ್ಚುವರಿ ಚಿಕಿತ್ಸೆ ಇದ್ದರೆ ಶೀಘ್ರ ರೆಫೆರಲ್‌ ಆಸ್ಪತ್ರೆಗೆ ವರ್ಗಾಯಿಸಲಾಗುತ್ತದೆ. ಇನ್ನು ಈ ಕ್ಲಿನಿಕ್‌ಗಳು ಯಾವುದೇ ದತ್ತಾಂಶ ಸಂಗ್ರಹ, ಸಮೀಕ್ಷೆಗೆ ಈ ಕೇಂದ್ರ ಗಳನ್ನು ಬಳಸದೇ ಇವು ಸಂಪೂರ್ಣವಾಗಿ ಚಿಕಿತ್ಸೆಗೆ ಮೀಸಲಿರಲಿವೆ.

 

 – ಜಯಪ್ರಕಾಶ್‌ ಬಿರಾದಾರ್‌

ಟಾಪ್ ನ್ಯೂಸ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.