ಕ್ಯಾಂಟರ್‌ ಚಾಲಕನ ಕೊಂದವರಿಗೆ ಗುಂಡೇಟು


Team Udayavani, Sep 9, 2019, 3:08 AM IST

canter

ಬೆಂಗಳೂರು: ಐದು ವರ್ಷಗಳ ಹಿಂದಿನ ಕೊಲೆಗೆ ಪ್ರತಿಕಾರವಾಗಿ ಎರಡು ದಿನಗಳ ಹಿಂದೆ ಕ್ಯಾಂಟರ್‌ ಚಾಲಕ ಮಹೇಶ್‌ ಕುಮಾರ್‌ನನ್ನು ನಡು ರಸ್ತೆಯಲ್ಲಿ ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದ ಇಬ್ಬರು ರೌಡಿಶೀಟರ್‌ಗಳ ಮೇಲೆ ಕಾಮಾಕ್ಷಿಪಾಳ್ಯ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.

ಕಾಮಾಕ್ಷಿಪಾಳ್ಯ ನಿವಾಸಿಗಳಾದ ಅಭಿಷೇಕ್‌ ಅಲಿಯಾಸ್‌ ಅಂದ್ರಳ್ಳಿ ಅಭಿ (24), ಪ್ರವೀಣ್‌ ಅಲಿಯಾಸ್‌ ಇಟಾಚಿ (25) ಬಂಧಿತರು. ಅಭಿಷೇಕ್‌ನ ಬಲಗಾಲಿಗೆ ಮತ್ತು ಪ್ರವೀಣ್‌ನ ಎಡಗಾಲಿಕೆ ಗುಂಡೇಟು ತಗುಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆರೋಪಿಗಳ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿರುವ ಹೆಡ್‌ ಕಾನ್‌ಸ್ಟೆàಬಲ್‌ ವಸಂತ್‌ಕುಮಾರ್‌ ಮತ್ತು ಕಾನ್‌ಸ್ಟೆಬಲ್‌ ಸತೀಶ್‌ರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದರು. ಇದೇ ಸಂದರ್ಭದಲ್ಲಿ ಮತ್ತೂಬ್ಬ ಆರೋಪಿ ಸತೀಶ್‌(24) ಎಂಬಾತನನ್ನು ಬಂಧಿಸಲಾಗಿದೆ.

ಅಭಿಷೇಕ್‌, ಪ್ರವೀಣ್‌ ಮತ್ತು ಸತೀಶ್‌ ಕುಖ್ಯಾತ ರೌಡಿಶೀಟರ್‌ ಸ್ಲಂ ಭರತನ ಸಹಚರರಾಗಿದ್ದು, ಮೂವರ ವಿರುದ್ಧ ನಗರದ ವಿವಿಧ ಪೊಲೀಸ್‌ ಠಾಣೆಗಳಲ್ಲಿ ಕೊಲೆ, ದರೋಡೆ, ಸುಲಿಗೆ ಹಾಗೂ ಕೊಲೆ ಯತ್ನ ಸೇರಿ 13 ಕ್ಕೂ ಹೆಚ್ಚು ಅಪರಾಧ ಪ್ರಕರಣಗಳು ದಾಖಲಾಗಿವೆ. ಅಲ್ಲದೆ, ರಾಜಗೋಪಾಲನಗರ ಪೊಲೀಸ್‌ ಠಾಣೆಯಲ್ಲಿ ರೌಡಿಪಟ್ಟಿ ಕೂಡ ತೆರೆಯಲಾಗಿದೆ.

ಮೂವರು ಆರೋಪಿಗಳು ಸೆ.6ರಂದು ರಾತ್ರಿ 10.30ರ ಸುಮಾರಿಗೆ ಕ್ಯಾಂಟರ್‌ ಚಾಲಕ ಮಹೇಶ್‌ ಕುಮಾರ್‌ನನ್ನು ಕಾಮಾಕ್ಷಿಪಾಳ್ಯದ ಹೆಗ್ಗನಹಳ್ಳಿ ಸಮೀಪದ ಗಜಾನನನಗರದಲ್ಲಿ ಕೊಚ್ಚಿ ಕೊಲೆಗೈದು ಕುಣಿಗಲ್‌, ಮಾಗಡಿ ಕಡೆ ತಲೆಮರೆಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚಿಸಲಾಗಿತ್ತು. ಈ ತಂಡ ಆರೋಪಿಗಳ ಚಲನವಲನಗಳ ಮೇಲೆ ನಿಗಾವಹಿಸಿದ್ದು, ಶನಿವಾರ ರಾತ್ರಿ ಸತೀಶ್‌ನನ್ನು ಬಂಧಿಸಿ, ವಿಚಾರಣೆಗೊಳಪಡಿಸಿತ್ತು. ಈ ವೇಳೆ ಅಭಿ ಮತ್ತು ಪ್ರವೀಣ್‌ ಬಗ್ಗೆ ಆತ ಬಾಯಿಬಿಟ್ಟಿದ್ದ.

ಆರೋಪಿಗಳ ಕಾಲಿಗೆ ಗುಂಡೇಟು: ಸತೀಶ್‌ ಹೇಳಿಕೆಯನ್ನಾಧರಿಸಿ ಕಾರ್ಯಾಚರಣೆ ನಡೆಸಿದ್ದ ಕಾಮಾಕ್ಷಿಪಾಳ್ಯ ಪೊಲೀಸರು ಭಾನುವಾರ ಮುಂಜಾನೆ ನಾಲ್ಕು ಗಂಟೆ ಸುಮಾರಿಗೆ ಕಾವೇರಿಪುರದ ಪೇಟೆ ಚಿನ್ನಪ್ಪ ಕೈಗಾರಿಕಾ ಪ್ರದೇಶದ ಬಳಿ ಅಭಿ ಮತ್ತು ಪ್ರವೀಣ್‌ನನ್ನು ಪತ್ತೆ ಹಚ್ಚಿದ್ದರು. ಕೂಡಲೇ ಕಾರ್ಯಪ್ರವೃತ್ತರಾದ ಇನ್‌ಸ್ಪೆಕ್ಟರ್‌ ಜೆ.ಗೌತಮ್‌ ಮತ್ತು ಸಬ್‌ಇನ್‌ಸ್ಪೆಕ್ಟರ್‌ ಅಂದಾನಿಗೌಡ ತಮ್ಮ ತಂಡದೊಂದಿಗೆ ಆರೋಪಿಗಳ ಬಂಧನಕ್ಕೆ ತೆರಳಿದ್ದರು.

ಈ ವೇಳೆ ಪೊಲೀಸರನ್ನು ಕಂಡು ಓಡಲು ಆರಂಭಿಸಿದ ಅಭಿ ಮತ್ತು ಪ್ರವೀಣ್‌ನನ್ನು ಹಿಡಿಯಲು ಮುಂದಾದ ಹೆಡ್‌ಕಾನ್‌ಸ್ಟೆಬಲ್‌ ವಸಂತ್‌ಕುಮಾರ್‌ ಮತ್ತು ಕಾನ್‌ಸ್ಟೆಬಲ್‌ ಸತೀಶ್‌ ಮೇಲೆ ಆರೋಪಿಗಳು, ಡ್ಯಾಗರ್‌ನಿಂದ ಹಲ್ಲೆ ನಡೆಸಿದ್ದು, ಇನ್‌ಸ್ಪೆಕ್ಟರ್‌ ಗೌತಮ್‌ ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗುವಂತೆ ಸೂಚಿಸಿದ್ದರು.

ಆದರೂ ಆರೋಪಿಗಳು ಮತ್ತೂಮ್ಮೆ ಹಲ್ಲೆಗೆ ಮುಂದಾಗಿದ್ದಾರೆ. ಆಗ ಆತ್ಮರಕ್ಷಣೆಗಾಗಿ ಪಿಐ ಗೌತಮ್‌ ಪ್ರವೀಣ್‌ ಎಡಗಾಲಿಗೆ, ಸಬ್‌ಇನ್‌ಸ್ಪೆಕ್ಟರ್‌ ಅಂದಾನಿಗೌಡ ಅಭಿ ಬಲಗಾಲಿಗೆ ಗುಂಡು ಹಾರಿಸಿದ್ದಾರೆ. ಗುಂಡೇಟು ತಿಂದ ಇಬ್ಬರಿಗೂ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಸೂರಿ-ಬಾಬುನನ್ನು ಕೊಂದು ಜೈಲು ಸೇರಿದ್ದ ಮಹೇಶ: ಕೊಲೆಯಾದ ಕ್ಯಾಂಟರ್‌ ಚಾಲಕ ಮಹೇಶ್‌ ಕುಮಾರ್‌ 2014ರಲ್ಲಿ ತಾವರೆಕೆರೆ ಠಾಣೆ ವ್ಯಾಪ್ತಿಯಲ್ಲಿ ಮದುವೆಯೊಂದರಲ್ಲಿ ರಾಜಗೋಪಾಲನಗರದ ಸೂರಿ ಮತ್ತು ಬಾಬು ಎಂಬವರ ಜತೆ ಗಲಾಟೆ ಮಾಡಿಕೊಂಡಿದ್ದ. ಅದೇ ವಿಚಾರಕ್ಕೆ ಕೆಲ ದಿನಗಳ ಬಳಿಕ ಸೂರಿ ಮತ್ತು ಬಾಬುನನ್ನು ತನ್ನ ಸಹೋದರ ಹಾಗೂ ಇತರೆ ಸಹಚರರ ಜತೆ ಸೇರಿ ಕೊಲೆಗೈದು, ಜೈಲು ಸೇರಿದ್ದ.

ಅದರಿಂದ ಆಕ್ರೋಶಗೊಂಡಿದ್ದ ಸೂರಿ ಸಹಚರರಾದ ಸ್ಲಂ ಭರತ, ಅಭಿ, ಪ್ರವೀಣ್‌ ಮತ್ತು ಸತೀಶ್‌ ನಾಲ್ಕೈದು ಬಾರಿ ಮಹೇಶ್‌ನ ಕೊಲೆಗೆ ವಿಫ‌ಲ ಯತ್ನ ನಡೆಸಿದ್ದರು. ಕಳೆದ ವರ್ಷ ಜೈಲಿನಿಂದ ಬಿಡುಗಡೆಯಾಗಿದ್ದ ಮಹೇಶ್‌, ರಾಜಗೋಪಾಲ ನಗರದಲ್ಲಿ ಕ್ಯಾಂಟರ್‌ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಕೆಲ ದಿನಗಳಿಂದ ಮಹೇಶ್‌ನ ಚಲನವಲನಗಳ ಮೇಲೆ ನಿಗಾವಹಿಸಿದ್ದ ಆರೋಪಿಗಳು ಶುಕ್ರವಾರ ರಾತ್ರಿ ಮಹೇಶ್‌ನನ್ನು ಕೊಚ್ಚಿ ಕೊಲೆಗೈದಿದ್ದರು ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.