10ದಿನದಲ್ಲಿ ಮೂವರಿಗೆ ಗುಂಡೇಟು


Team Udayavani, Jun 26, 2019, 3:05 AM IST

10dina

ಬೆಂಗಳೂರು: ಉತ್ತರ ಭಾರತದವರನ್ನೇ ಗುರಿಯಾಗಿಸಿಕೊಂಡು ದರೋಡೆ, ಸುಲಿಗೆ ಮಾಡುತ್ತಿದ್ದ ರೌಡಿಶೀಟರ್‌ಗೆ ಬಾಣಸವಾಡಿ ಪೊಲೀಸರು ಮಂಗಳವಾರ ಗುಂಡೇಟಿನ ರುಚಿ ತೋರಿಸಿದ್ದಾರೆ. ಈ ಘಟನೆಯಿಂದ 10 ದಿನದಲ್ಲಿ ಒಟ್ಟು ಮೂರು ಗುಂಡೇಟು ಪ್ರಕರಣಗಳು ಜರುಗಿದಂತಾಗಿದೆ.

ಬಾಗಲೂರು ನಿವಾಸಿ ಅಶೋಕ್‌ ಅಲಿಯಾಸ್‌ ಅರ್ಜುನ್‌(22) ಎಂಬಾತನ ಬಲಗಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಆತನ ದಾಳಿಯಿಂದ ಹಲ್ಲೆಗೊಳಗಾದ ಕಾನ್‌ಸ್ಟೆಬಲ್‌ ಸೌದಾಗರ್‌ ಅವರ ಕೈ ಮತ್ತು ಕಾಲಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಾಲ್ಕೈದು ವರ್ಷಗಳಿಂದ ಅಪರಾಧ ಕೃತ್ಯಗಳಲ್ಲಿ ತೊಡಗಿರುವ ಅಶೋಕ್‌ ವಿರುದ್ಧ ನಗರದ ವಿವಿಧ ಪೊಲೀಸ್‌ ಠಾಣೆಗಳಲ್ಲಿ ದರೋಡೆ, ಸುಲಿಗೆ ಪ್ರಕರಣಗಳು ದಾಖಲಾಗಿದ್ದವು. 2016ರಲ್ಲಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದನ್ನು ಪ್ರಶ್ನಿಸಿದ ಪೊಲೀಸರ ಮೇಲೆ ಖಾರದ ಪುಡಿ ಎರಚಿ ಹಾಕಿ ಸ್ಟಿಕ್‌ನಿಂದ ಹಲ್ಲೆ ನಡೆಸಿದ್ದ.

ಪರಿಣಾಮ ಇಬ್ಬರು ಪೊಲೀಸ್‌ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದರು. ಈ ಸಂಬಂಧ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಆತನ ವಿರುದ್ಧ ಕೆ.ಜಿ.ಹಳ್ಳಿ ಠಾಣೆಯಲ್ಲಿ ರೌಡಿಪಟ್ಟಿ ಕೂಡ ತೆರೆಯಲಾಗಿತ್ತು.

ಕೆಲ ತಿಂಗಳ ಹಿಂದಷ್ಟೇ ಜೈಲಿನಿಂದ ಬಿಡುಗಡೆಯಾಗಿ ಬಂದಿದ್ದ ಆರೋಪಿ ತನ್ನ ಸಹಚರರ ಜತೆ ಸೇರಿಕೊಂಡು ಭಾನುವಾರ ಮಧ್ಯಾಹ್ನ ಲಿಂಗಾರಾಜಪುರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಅಸ್ಸಾಂ ಮೂಲದ ನೆಹರ್‌ ಆಲಿ ಎಂಬುವರ ಮನೆಗೆ ನುಗ್ಗಿ ಚಾಕು ತೋರಿಸಿ ಒಂದು ಮೊಬೈಲ್‌, ಆರು ಸಾವಿರ ರೂ. ಕಸಿದುಕೊಂಡು, ಹೊರಭಾಗದಿಂದ ಬಾಗಿಲು ಹಾಕಿಕೊಂಡು ಪರಾರಿಯಾಗಿದ್ದರು.

ನಂತರ ಮನೆ ಮಾಲೀಕರನ್ನು ಕೂಗಿ ಬಾಗಿಲು ತೆರೆಸಿಕೊಂಡಿದ್ದ ನೆಹರ್‌ ಅಲಿ, ಕೂಡಲೇ ಪೊಲೀಸರಿಗೆ ದೂರು ನೀಡಿದ್ದರು. ಸ್ಥಳಕ್ಕೆ ಧಾವಿಸಿದ ಬಾಸಣವಾಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸ್ಥಳೀಯ ಸಿಸಿ ಕ್ಯಾಮರಾಗಳನ್ನು ಪರಿಶೀಲಿಸಿದಾಗ ಆರೋಪಿಗಳ ಚಹರೆ ಪತ್ತೆಯಾಗಿತ್ತು.

ಈ ವೇಳೆ ಅರವಿಂದ್‌ ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಆತ ಅಶೋಕ್‌ ಬಗ್ಗೆ ಹೇಳಿಕೆ ನೀಡಿದ್ದ. ಈ ಸಂಬಂಧ ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿತ್ತು ಎಂದು ಪೊಲೀಸರು ಹೇಳಿದರು.

ಆರೋಪಿಯ ಬಲಗಾಲಿಗೆ ಗುಂಡು: ಎರಡು ದಿನಗಳಿಂದ ಆರೋಪಿ ಚಲವಲನಗಳ ಮೇಲೆ ನಿಗಾವಹಿಸಿದ್ದ ವಿಶೇಷ ತಂಡ ಸೋಮವಾರ ರಾತ್ರಿ 11.30ರ ಸುಮಾರಿಗೆ ಪುಲಕೇಶಿನಗರದ ಗಜೇಂದ್ರ ನಗರದಲ್ಲಿ ಅಡಗಿರುವ ಮಾಹಿತಿ ಸಂಗ್ರಹಿಸಿತ್ತು.

ನಂತರ ಇನ್‌ಸ್ಪೆಕ್ಟರ್‌ ವಿರೂಪಾಕ್ಷಸ್ವಾಮಿ ನೇತೃತ್ವದ ಎರಡು ತಂಡಗಳು ಆರೋಪಿಯನ್ನು ಬಂಧಿಸಲು ಹೋಗಿದ್ದು, ಪೊಲೀಸರನ್ನು ಕಂಡ ಆರೋಪಿ ಬೈಕ್‌ ಏರಿ ತಪ್ಪಿಸಿಕೊಂಡು ಓಡುತ್ತಿದ್ದ. ನಂತರ ಪೊಲೀಸ್‌ ವಾಹನದಲ್ಲಿ ಆರೋಪಿಯನ್ನು ಬೆನ್ನಟ್ಟಿದ್ದರು.

ಮಾರ್ಗ ಮಧ್ಯೆ ರಾಮಮೂರ್ತಿನಗರ ಠಾಣಾ ವ್ಯಾಪ್ತಿಯ ವರ್ತುಲ ರಸ್ತೆಯಲ್ಲಿ ವೇಗವಾಗಿ ಬೈಕ್‌ ಚಾಲನೆ ಮಾಡುತ್ತಿದ್ದ ಆತ, ನಿಯಂತ್ರಣ ಕಳೆದುಕೊಂಡು ಕಸ್ತೂರಿನಗರ ಸಮೀಪದ ಮಣ್ಣಿನ ಗುಡ್ಡಕ್ಕೆ ಡಿಕ್ಕಿ ಹೊಡೆದು ಕೆಳಗೆ ಬಿದ್ದಿದ್ದಾನೆ. ಆಗ ಕಾನ್‌ಸ್ಟೆಬಲ್‌ ಸೌದಾಗರ್‌ ಆತನನ್ನು ಹಿಡಿಯಲು ಮುಂದಾಗಿದ್ದು,

ಆರೋಪಿ ತನ್ನ ಬಳಿಯಿದ್ದ ಡ್ಯಾಗರ್‌ನಿಂದ ಕಾನ್‌ಸ್ಟೆಬಲ್‌ ಮೇಲೆ ಹಲ್ಲೆ ನಡೆಸಿದ್ದ. ಈ ವೇಳೆ ಇನ್‌ಸ್ಪೆಕ್ಟರ್‌ ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗುವಂತೆ ಆತನಿಗೆ ಸೂಚಿಸಿದ್ದಾರೆ. ಆದರೂ ಆತ ಮತ್ತೂಮ್ಮೆ ಹಲ್ಲೆಗೆ ಮುಂದಾಗಿದ್ದು, ಈ ವೇಳೆ ಆತ್ಮರಕ್ಷಣೆಗಾಗಿ ಪಿಐ ವಿರೂಪಾಕ್ಷಸ್ವಾಮಿ ಅಶೋಕನ ಬಲಗಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

ಹಿಂದಿ ಭಾಷಿಕರೇ ಟಾರ್ಗೆಟ್‌: ಆರೋಪಿ ಅಶೋಕ್‌ ಹಿಂದಿ ಭಾಷಿಗರನ್ನೇ ಗುರಿಯಾಗಿಸಿಕೊಂಡು ದರೋಡೆ, ಸುಲಿಗೆ ಮಾಡುತ್ತಿದ್ದ. ಹಿಂದಿ ಮಾತನಾಡುವವರನ್ನು ಸುಲಿಗೆ ಮಾಡಿದರೆ ದೂರು ನೀಡುವುದಿಲ್ಲ ಎಂಬ ನಂಬಿಕೆ ಮೇಲೆ ಕೃತ್ಯ ಎಸಗುತ್ತಿದ್ದ. ಆದರೆ, ನೆಹರ್‌ ಅಲಿ ಮನೆ ಮಾಲೀಕರು ಆರೋಪಿಗಳ ವಿರುದ್ಧ ದೂರು ನೀಡಿದ್ದರು. ಈ ಸಂಬಂಧ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಮೂವರು ರೌಡಿ ಶೀಟರ್‌ಗಳು: ನಗರ ಪೊಲೀಸ್‌ ಆಯುಕ್ತ ಟಿ.ಸುನೀಲ್‌ ಕುಮಾರ್‌ ಅಧಿಕಾರವಧಿಯಲ್ಲಿ ಬರೋಬರಿ 43ಕ್ಕೂ ಅಧಿಕ ಆರೋಪಿಗಳಿಗೆ ಗುಂಡೇಟಿನ ರುಚಿ ತೋರಿಸಿದ್ದ ನಗರ ಪೊಲೀಸರು, ಅಲೋಕ್‌ ಕುಮಾರ್‌ ನೂತನ ಪೊಲೀಸ್‌ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಕೇವಲ 10 ದಿನಗಳಲ್ಲೇ ಮೂವರು ರೌಡಿಶೀಟರ್‌ಗಳು, ಸುಲಿಗೆ ಹಾಗೂ ದರೋಡೆಕೋರರಿಗೆ ಗುಂಡಿನ ರುಚಿ ತೋರಿಸುತ್ತಿದ್ದಾರೆ.

ಜೂನ್‌ 23(ಭಾನುವಾರ) ಸಿಸಿಬಿ ಪೊಲೀಸರು ಶಿವಾಜಿನಗರ ರೌಡಿಶೀಟರ್‌ ಅಮಿರ್‌ ಖಾನ್‌, ಜೂನ್‌ 24(ಸೋಮವಾರ) ಬ್ಯಾಟರಾಯನಪುರರ ಪೊಲೀಸರಿಂದ ಸುಲಿಗೆ, ದರೋಡೆಕೋರ ರಾಹುಲ್‌ ಹಾಗೂ ಜೂನ್‌ 25(ಮಂಗಳವಾರ) ಬಾಣಸವಾಡಿ ಪೊಲೀಸರಿಂದ ಅಶೋಕ್‌ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ.

ಟಾಪ್ ನ್ಯೂಸ್

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.