ಕ್ಯಾಬ್‌ ಚಾಲಕನ ಹತ್ಯೆಗೈದವನಿಗೆ ಗುಂಡೇಟು


Team Udayavani, Dec 25, 2019, 3:05 AM IST

cab-chalaka

ಬೆಂಗಳೂರು: ಇತ್ತೀಚೆಗೆ ಕ್ಯಾಬ್‌ ಚಾಲಕ ರಘು ಎಂಬಾತನನ್ನು ನಡುರಸ್ತೆಯಲ್ಲೇ ಹತ್ಯೆಗೈದು ಪರಾರಿಯಾಗಿದ್ದ ಸುಪಾರಿ ಹಂತಕನಿಗೆ ಉತ್ತರ ವಿಭಾಗದ ಪೊಲೀಸರು ಗುಂಡೇಟಿನ ರುಚಿ ತೋರಿಸಿದ್ದಾರೆ. ಚೆನ್ನೈ ಮೂಲದ ಬಾಬು ಶಿವಕುಮಾರ್‌ (25) ಎಂಬಾತನಿಗೆ ಗುಂಡೇಟು ಬಿದ್ದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದೇ ವೇಳೆ ಆರೋಪಿಯ ಹಲ್ಲೆಯಿಂದ ಗಾಯಗೊಂಡಿರುವ ಹೆಡ್‌ ಕಾನ್‌ಸ್ಟೆಬಲ್‌ ಅನಂತರಾಜು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊಲೆ ಪ್ರಕರಣ ಸಂಬಂಧ ಈಗಾಗಲೇ ಪ್ರಭಾಕರನ್‌ ಹಾಗೂ ನರಸಿಂಹ ಎಂಬವರನ್ನು ಬಂಧಿಸ ಲಾಗಿದೆ ಎಂದು ಪೊಲೀಸರು ಹೇಳಿದರು.

ಬಾಬು ಶಿವಕುಮಾರ್‌ ವಿರುದ್ಧ ನಗರದಲ್ಲಿ ಇದುವರೆಗೂ ಯಾವುದೇ ಪ್ರಕರಣಗಳು ದಾಖ ಲಾಗಿಲ್ಲ. ಆದರೆ, ಕೆಲವೊಂದು ಹತ್ಯೆ ಪ್ರಕರಣಗಲ್ಲಿ ಭಾಗಿಯಾಗಿರುವ ಮಾಹಿತಿಯಿದ್ದು, ತನಿಖೆ ಮುಂದುವರಿಸಲಾಗಿದೆ. ಕೆಲ ತಿಂಗಳ ಹಿಂದೆ ಲಗ್ಗೆರೆ ನಿವಾಸಿ ಕ್ಯಾಬ್‌ ಚಾಲಕ ರಘು ಹಣಕಾಸು ಹಾಗೂ ವೈಯಕ್ತಿಕ ವಿಚಾರಕ್ಕೆ ಪ್ರಭಾಕರನ್‌ ಚಿಕ್ಕಪ್ಪ ಮೂರ್ತಿ ಎಂಬವರ ಮೇಲೆ ಹಲ್ಲೆ ನಡೆಸಿದ್ದ.

ಈ ವಿಚಾರ ತಿಳಿದ ಪ್ರಭಾಕರನ್‌ ಒಂದೆರಡು ಬಾರಿ ರಘು ಮೇಲೆ ಹಲ್ಲೆ ನಡೆಸಲು ಸಿದ್ಧತೆ ನಡೆಸಿದ್ದ. ಆದರೆ, ಸಾಧ್ಯವಾಗಿರಲಿಲ್ಲ. ಈ ವಿಚಾರವನ್ನು ಚೆನ್ನೈನಲ್ಲಿರುವ ತನ್ನ ಸ್ನೇಹಿತರ ಬಳಿ ಹೇಳಿಕೊಂಡಿದ್ದು, ಚಾಲಕನ ಕೊಲೆಗೆ ಸಹಕಾರ ನೀಡುವಂತೆ ಕೇಳಿಕೊಂಡಿದ್ದ.

ಆಗ ಅವರು ಚೆನ್ನೈನಲ್ಲಿ ಬಟ್ಟೆ ಅಂಗಡಿ ನಡೆಸುತ್ತಿರುವ ತಮ್ಮ ಸ್ನೇಹಿತ ಬಾಬು ಶಿವಕುಮಾರ್‌ ಬಗ್ಗೆ ತಿಳಿಸಿದ್ದರು. ಡಿಸೆಂಬರ್‌ನಲ್ಲಿ ಆಗಮಿಸಿದ್ದ ಅವರು ಹಣದ ಆಸೆಗೆ ಕೃತ್ಯವೆಸಗಿದ್ದರು. ಕೃತ್ಯದ ಬಳಿಕ ಪ್ರಭಾಕರನ್‌, ಬಾಬುಗೆ 50 ಸಾವಿರ ರೂ. ಹಣ ಕೊಟ್ಟು ತಲೆಮರೆಸಿಕೊಳ್ಳುವಂತೆ ಸೂಚಿಸಿದ್ದ ಎಂದು ಪೊಲೀಸರು ಹೇಳಿದರು.

ಈ ಸಂಬಂಧ ಪ್ರರಕಣ ದಾಖಲಿಸಿಕೊಂಡು ತನಿಖೆ ನಡೆಸಿದ್ದ ನಂದಿನಿ ಲೇಔಟ್‌ ಪೊಲೀಸರು, ಘಟನಾ ಸ್ಥಳದ ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸಿ ನರಸಿಂಹನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಪ್ರಭಾಕರನ್‌ ಮತ್ತು ಬಾಬು ಬಗ್ಗೆ ಮಾಹಿತಿ ನೀಡಿದ್ದ. ಈ ಸಂಬಂಧ ಪ್ರಭಾಕರನ್‌ನನ್ನು ಬಂಧಿಸಲಾಗಿತ್ತು. ಅನಂತರ ಬಾಬು ಶಿವಕುಮಾರ್‌ ಪತ್ತೆಗೆ ನಂದಿನಿ ಲೇಔಟ್‌ ಇನ್‌ಸ್ಪೆಕ್ಟರ್‌ ಲೋಹಿತ್‌ ಮತ್ತು ಮಹಾಲಕ್ಷ್ಮೀ ಲೇಔಟ್‌ ಠಾಣೆ ಪಿಎಸ್‌ಐ ವೆಂಕಟರಮಣ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು.

ಎರಡು ಕಾಲುಗಳಿಗೂ ಗುಂಡು: ಚೆನ್ನೈನಿಂದ ಬೆಂಗಳೂರಿಗೆ ಬಂದಿದ್ದ ಆರೋಪಿ ತನಗೆ ಪೊಲೀಸರು ಹುಡುಕಾಟ ನಡೆಸುತ್ತಿರುವ ಮಾಹಿತಿ ಪಡೆದು ಸ್ನೇಹಿತರೊಬ್ಬರ ಸಲಹೆ ಮೇರೆಗೆ ಜಾಲಹಳ್ಳಿ ಠಾಣೆ ವ್ಯಾಪ್ತಿಯ ಎಚ್‌ಎಂಟಿ ಬಸ್‌ ನಿಲ್ದಾಣ ಸಮೀಪದ ನಿರ್ಜನ ಪ್ರದೇಶದಲ್ಲಿ ಅವಿತುಕೊಂಡಿದ್ದ. ಮಹಾಲಕ್ಷ್ಮೀ ಲೇಔಟ್‌ ಠಾಣೆ ಪಿಎಸ್‌ಐ ವೆಂಕಟರಮಣ ಮತ್ತು ಎಚ್‌ಸಿ ಅನಂತರಾಜು ಆರೋಪಿಯನ್ನು ಬಂಧಿಸಲು ಮುಂದಾಗಿದ್ದು, ಆರೋಪಿ ಅನಂತರಾಜು ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ.

ಆಗ ಪಿಎಸ್‌ಐ ವೆಂಕಟರಮಣ ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಆರೋಪಿಗೆ ಶರಣಾಗುವಂತೆ ಸೂಚಿಸಿ ದ್ದರೂ, ಮತ್ತೆ ಹಲ್ಲೆಗೆ ಯತ್ನಿಸಿದ್ದಾನೆ. ಪಿಎಸ್‌ಐ ವೆಂಕಟರಮಣ ಆತ್ಮರಕ್ಷಣೆಗಾಗಿ ಬಾಬುನ ಒಂದು ಕಾಲಿಗೆ ಗುಂಡು ಹೊಡೆದಿ ದ್ದಾರೆ. ಆದರೂ, ಪಿಎಸ್‌ಐ ಮೇಲೆಯೇ ಹಲ್ಲೆಗೆ ಮುಂದಾದಾಗ ಮತ್ತೂಂದು ಕಾಲಿಗೂ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ಹೇಳಿದರು.

ಹಣದ ಆಸೆಗೆ ಕೃತ್ಯ: ಈ ಸಂಬಂಧ ಡಿಸೆಂಬರ್‌ ಮೊದಲ ವಾರದಲ್ಲಿ ಬೆಂಗಳೂರಿಗೆ ಬಂದಿದ್ದ ಬಾಬು ಶಿವಕುಮಾರ್‌ಗೆ ರಘು ಕೊಲೆಗೆ 50 ಸಾವಿರ ರೂ. ಕೊಡುವುದಾಗಿ ಹೇಳಿದ್ದ. ಹಣದಾಸೆಗೆ ಆರೋಪಿ ತನ್ನ ಸಹಚರ ನರಸಿಂಹ ಹಾಗೂ ಪ್ರಭಾಕರನ್‌ ಜತೆ ಸೇರಿ ಡಿ.11ರ ತಡರಾತ್ರಿ 11 ಗಂಟೆ ಸುಮಾರಿಗೆ ಲಗ್ಗೆರೆ ಮುಖ್ಯರಸ್ತೆಯಲ್ಲಿ ಕ್ಯಾಬ್‌ನಲ್ಲಿ ಹೋಗುತ್ತಿದ್ದ ರಘುನನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಹತ್ಯೆಗೈದು ಪರಾರಿಯಾಗಿದ್ದರು.

ಟಾಪ್ ನ್ಯೂಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.