ಎಚ್. ವಿಶ್ವನಾಥ್ – ಎಚ್.ಡಿ. ದೇವೇಗೌಡ ಮಾತುಕತೆ
Team Udayavani, May 17, 2017, 10:32 AM IST
ಬೆಂಗಳೂರು: ಜೆಡಿಎಸ್ ಹೊಸ್ತಿಲಲ್ಲಿರುವ ಮಾಜಿ ಸಂಸದ ಹಾಗೂ ಕಾಂಗ್ರೆಸ್ನ ಹಿರಿಯ ನಾಯಕ ಎಚ್.ವಿಶ್ವನಾಥ್ ಮಂಗಳವಾರ ಜೆಡಿಎಸ್ ರಾಷ್ಟ್ರೀಯ ಆಧ್ಯಕ್ಷ ಎಚ್.ಡಿ.ದೇವೇಗೌಡರ ಜತೆ ಸಮಾಲೋಚನೆ ನಡೆಸಿದರು. ಪದ್ಮನಾಭನಗರ ನಿವಾಸಕ್ಕೆ ಸಂಜೆ 5.35ಕ್ಕೆ ಆಗಮಿಸಿದ ವಿಶ್ವನಾಥ್ ಸುಮಾರು ಒಂದು ಗಂಟೆ ಕಾಲ ದೇವೇಗೌಡರ ಜತೆ ಮಾತುಕತೆ ನಡೆಸಿದ್ದು ಕುತೂಹಲ ಮೂಡಿಸಿದೆ. ಜೆಡಿಎಸ್ಗೆ ಬಂದರೆ ಗೌರವಯುತವಾಗಿ ನಡೆಸಿಕೊಳ್ಳುವ ಬಗ್ಗೆ ಮಾತುಕತೆ ಸಂದರ್ಭದಲ್ಲಿ ದೇವೇಗೌಡರು ಭರವಸೆ ಸಹ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಎಚ್.ವಿಶ್ವನಾಥ್ ಜೆಡಿಎಸ್ ಸೇರ್ಪಡೆ ಬಹುತೇಕ ಖಚಿತವಾಗಿದ್ದು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಹುಣಸೂರು ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ. ಆ ಕ್ಷೇತ್ರದಲ್ಲಿ ಪತ್ನಿ ಅಥವಾ ಮಗನಿಗೆ ಟಿಕೆಟ್ ಬಯಸಿದ್ದ ಜಿ.ಟಿ.ದೇವೇಗೌಡ ಹಾಗೂ ಪ್ರಜ್ವಲ್ ರೇವಣ್ಣ ಅವರು ಅಸಮಾಧಾನಗೊಂಡಿದ್ದು ಅವರ ಜತೆ ದೇವೇಗೌಡರು ಮಾತನಾಡಿ ಸಮಸ್ಯೆ ಬಗೆಹರಿಸಲಿದ್ದಾರೆ ಎಂದು ಹೇಳಲಾಗಿದೆ. ವಿಶ್ವನಾಥ್ ಜತೆ ಕಾಂಗ್ರೆಸ್ನ ಹಾಲಿ ಆರು ಶಾಸಕರ ಸಂಪರ್ಕದಲ್ಲಿದ್ದು ಸ್ವಲ್ಪ ದಿನ ಕಾದರೆ ತಾವೂ ನಿಮ್ಮ ಜತೆಗೂಡುತ್ತೇವೆ. ಒಂದು ತಂಡವಾಗಿ ಜೆಡಿಎಸ್ಗೆ ಹೋಗೋಣ ಎಂಬ ಪ್ರಸ್ತಾವ ಇಟ್ಟದ್ದಾರೆ. ಈ ಬಗ್ಗೆಯೂ ವಿಶ್ವನಾಥ್ ಅವರು ದೇವೇಗೌಡರ ಜತೆ ಮಾತುಕತೆ ವೇಳೆ ಚರ್ಚಿಸಿದರು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ