ಕೆಲಸದ ಕರೆ ನಂಬಿ ಹಣ ವರ್ಗಾವಣೆ ಮಾಡೀರಿ ಜೋಕೆ!


Team Udayavani, Oct 11, 2018, 10:58 AM IST

blore-1.jpg

ಬೆಂಗಳೂರು: “ನಿಮಗೆ ದೊಡ್ಡ ಕಂಪನಿಯಲ್ಲಿ ಉದ್ಯೋಗ ಸಿಕ್ಕಿದೆ’ ಎಂದು ಯಾರಾದರೂ ಅಪರಿಚಿತರು ಕರೆ ಮಾಡಿದರೆ ಎಚ್ಚರದಿಂದಿರಿ! ನೌಕರಿ ಡಾಟ್‌ ಕಾಮ್‌ ಸೇರಿ ವಿವಿಧ ಸಂಸ್ಥೆಗಳಲ್ಲಿ ಹೆಸರು ಮಾಹಿತಿ ನೋಂದಾಯಿಸಿಕೊಂಡಿರುವ
ಉದ್ಯೋಗ ಆಕಾಂಕ್ಷಿಗಳನ್ನೇ ಟಾರ್ಗೆಟ್‌ ಮಾಡಿಕೊಂಡು ಹಣ ಪಡೆದು ವಂಚಿಸುವ ಆನ್‌ಲೈನ್‌ ವಂಚಕರ ತಂಡ ನಗರದಲ್ಲಿ ಸಕ್ರಿಯವಾಗಿದೆ.

ಉದ್ಯೋಗ ಆಕಾಂಕ್ಷಿಗಳ ಮಾಹಿತಿ ಸಂಗ್ರಹಿಸುವ ಖಾಸಗಿ ಸಂಸ್ಥೆಗಳನ್ನು ಟಾರ್ಗೆಟ್‌ ಮಾಡಿಕೊಂಡು, ದೂರವಾಣಿ ಕರೆ ಮಾಡಿ 15- 20 ದಿನಗಳಲ್ಲಿ ಆಫ‌ರ್‌ ಲೆಟರ್‌ ನೀಡುತ್ತೇವೆ ಎಂದು ನಂಬಿಸಿ, ಲಕ್ಷಾಂತರ ರೂ.ಗಳನ್ನು ತಮ್ಮ ಬ್ಯಾಂಕ್‌ಖಾತೆಗಳಿಗೆ ವರ್ಗಾವಣೆ ಮಾಡಿಸಿಕೊಂಡು ವಂಚಿಸಲಾಗುತ್ತಿದೆ. ವಂಚಕರ ಮಾತು ನಂಬಿ ಉದ್ಯೋಗದ ಆಸೆಯಿಂದ ಸಾವಿರ, ಲಕ್ಷಗಟ್ಟಲೆ ಹಣ ಕಳೆದುಕೊಂಡವರು ಸೈಬರ್‌ ಕ್ರೈಂ ಠಾಣೆ ಮೆಟ್ಟಿಲೇರುತ್ತಿದ್ದಾರೆ. 

ಇಂಥ ದೂರುಗಳನ್ನು ಹೊತ್ತು ನಿತ್ಯ ಕನಿಷ್ಠ ಇಬ್ಬರಾದರೂ ನಗರ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿರುವ ಸೈಬರ್‌ ಕ್ರೈ ವಿಭಾಗದ ಮೊರೆ ಹೋಗುತ್ತಿದ್ದಾರೆ.

ಶೈನ್‌ ಡಾಟ್‌ ಕಾಮ್‌ ಹೆಸರಲ್ಲಿ ವಂಚನೆ!: ಪದವಿ ಮುಗಿಸಿದ್ದ ನಟರಾಜ ಲೇಔಟ್‌ನ ಯುವತಿ ಯೊಬ್ಬರು ಕೆಲಸಕ್ಕಾಗಿ ಖಾಸಗಿ ಸಂಸ್ಥೆಯಲ್ಲಿ ವಿದ್ಯಾಭ್ಯಾಸದ ಮಾಹಿತಿ ಹಂಚಿಕೊಂಡಿದ್ದರು. ಈ ಮಾಹಿತಿ ಪಡೆದ ಸೈಬರ್‌ ವಂಚಕ, ಯುವತಿಯ ತಾಯಿ ಲಕ್ಷ್ಮೀದೇವಿ ಎಂಬುವವರಿಗೆ ಕರೆ ಮಾಡಿ, ಶೈನ್‌ ಡಾಟ್‌ ಕಾಮ್‌ ನಿಂದ ಕರೆ ಮಾಡುತ್ತಿದ್ದು, ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸಕ್ಕೆ ನಿಮ್ಮ ಮಗಳ ನಂಬರ್‌ ಶಾರ್ಟ್‌ ಲಿಸ್ಟ್‌ನಲ್ಲಿದೆ. ಹೀಗಾಗಿ ಕೆಲಸ ಖಾಯಂ ಮಾಡಲು ಬ್ಯಾಂಕ್‌ ಖಾತೆಗಳ ಮಾಹಿತಿ ನೀಡುವಂತೆ ಕೇಳಿದ್ದಾನೆ.

ವಂಚಕನ ಮಾತು ಕೇಳಿದ ಲಕ್ಷ್ಮೀದೇವಿ, ಮಗಳ ಎಸ್‌ಬಿಐ ಖಾತೆಯ ವಿವರಗಳನ್ನು ನೀಡಿದ್ದಾರೆ. ಈ ಮಾಹಿತಿ ಪಡೆದ ವಂಚಕ ಅ.6ರಂದು ಖಾತೆಯಲ್ಲಿದ್ದ 56,111 ರೂ.ಗಳನ್ನು ತನ್ನ ಖಾತೆಗೆ ವರ್ಗಾವಣೆ ಮಾಡಿಕೊಂಡಿದ್ದಾನೆ.
 
ಬಳಿಕ ಆತ ಕರೆ ಮಾಡಿದ್ದ ನಂಬರ್‌ಗೆ ಕರೆ ಮಾಡಿದಾಗ ಸ್ವಿಚ್‌ ಆಫ್ ಬಂದಿದೆ. ಕಡೆಗೆ ಮೋಸ ಹೋಗಿರುವುದು ಗೊತ್ತಾಗಿ ಸೈಬರ್‌ ಠಾಣೆಗೆ ದೂರು ನೀಡಿದ್ದಾರೆ. ಎರಡೂ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿ ಕೊಂಡು ತನಿಖೆ ನಡೆಸುತ್ತಿದ್ದೇವೆ. ವಂಚಕರು ಉದ್ಯೋಗದ ಆಮಿಷವೊಡ್ಡಿ ಹಣ ಕೇಳಿದಾಗಲೇ ಯುವಜನ ಎಚ್ಚರ ವಹಿಸ ಬೇಕು ಎಂದು ಸೈಬರ್‌ ಕ್ರೈಂ ವಿಭಾಗದ ಹಿರಿಯ ಪೊಲೀಸ್‌ ಅಧಿಕಾರಿ ಸಲಹೆ ನೀಡಿದ್ದಾರೆ.

ಡೆಲ್‌ ಕಂಪನಿ ಹೆಸರಲ್ಲಿ ಲಕ್ಷ ರೂ. ವಂಚನೆ!
ವಿಜಯನಗರದ ಯುವತಿಯೊಬ್ಬರು ಪದವಿ ಪೂರ್ಣಗೊಳಿಸಿ ಕೆಲಸದ ಹುಡುಕಾಟದಲ್ಲಿದ್ದರು. ಅದರಂತೆ, ಸೆಪ್ಟೆಂಬರ್‌ ತಿಂಗಳು, ನೌಕರಿ ಡಾಟ್‌ ಕಾಮ್‌ನಲ್ಲಿ ರೆಸ್ಯೂಮ್‌ ಅಪ್‌ಲೋಡ್‌ ಮಾಡಿದ್ದರು. ಈ ಮಾಹಿತಿ ಪಡೆದ ವಂಚಕನೊಬ್ಬ ಅಪರಿಚಿತ ನಂಬರ್‌ನಿಂದ ಕರೆ ಮಾಡಿ, ಡೆಲ್‌ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿದ್ದಾನೆ. ಅಲ್ಲದೆ, ಕೆಲಸ ಬೇಕೆಂದರೆ 50 ಸಾವಿರ ರೂ. ಅಡ್ವಾನ್ಸ್‌ ನೀಡಬೇಕು ಎಂದು ಕೇಳಿದ್ದಾನೆ. ಇದನ್ನು ನಂಬಿದ ಯುವತಿ, ವಂಚಕ ಹೇಳಿದ ಬ್ಯಾಂಕ್‌ ಖಾತೆಗೆ ಹಣ ವರ್ಗಾಯಿಸಿದ್ದಾರೆ. ಇದಾದ ಬಳಿಕವೂ ಇಲ್ಲಸಲ್ಲದ ಸಬೂಬು ಹೇಳಿ ಯುವತಿಯಿಂದ ಸೆ.25ರಿಂದ ಅ.6ರ ನಡುವೆ ಒಟ್ಟು 1.14 ಲಕ್ಷ ರೂ.ಗಳನ್ನು ತನ್ನ ಖಾತೆಗೆ ಹಾಕಿಸಿಕೊಂಡು ವಂಚಿಸಿದ್ದಾನೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.