ಜನರಿಗೆ ಹೇರ್‌ ಕಟಿಂಗ್‌ ಫ್ರೀ, ಪ್ರೇಮಿಗಳ ದಿನ ಸರ್ಕಾರಿ ರಜೆ


Team Udayavani, May 3, 2018, 6:45 AM IST

2BNP-(2).jpg

ಬೆಂಗಳೂರು: ನಗರ ವೀಕ್ಷಣೆಗೆ ಅಗ್ಗದ ದರದಲ್ಲಿ ಹೆಲಿಕಾಪ್ಟರ್‌ ಭಾಗ್ಯ, ಬಡ ಮತ್ತು ಮಧ್ಯಮ ವರ್ಗದವರಿಗೆ ಉಚಿತ ಹೇರ್‌ ಕಟಿಂಗ್‌-ಶೇವಿಂಗ್‌, ಕತ್ತೆಗಳು ಮತ್ತು ಎಮ್ಮೆಗಳ ಅಭಿವೃದ್ಧಿ ಮಂಡಳಿ ರಚನೆ, ಪ್ರೇಮಿಗಳ ದಿನಾಚರಣೆಗೆ ಸರ್ಕಾರಿ ರಜೆ ಘೋಷಣೆ,  ಕನ್ನಡ ಚಿತ್ರಪ್ರದರ್ಶನ ಕಡ್ಡಾಯ…

-ಇವು ಕನ್ನಡ ಚಳವಳಿ ವಾಟಾಳ್‌ ಪಕ್ಷ ಬಿಡುಗಡೆ ಮಾಡಿದ ಚುನಾವಣಾ ಪ್ರಣಾಳಿಕೆಯ ಪ್ರಮುಖ ಅಂಶಗಳು. 

ನಗರದ ಹೋಟೆಲ್‌ ವುಡ್‌ಲ್ಯಾಂಡ್ಸ್‌ನಲ್ಲಿ ಬುಧ ವಾರ ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ ಅಧ್ಯಕ್ಷ ಹಾಗೂ ಚಾಮರಾಜನಗರದ ಅಭ್ಯರ್ಥಿ ವಾಟಾಳ್‌ ನಾಗರಾಜ್‌, ಹಲವು ವಿಭಿನ್ನ ಭರವಸೆಗಳ ಜತೆಗೆ ಮತದಾರರು ತಮ್ಮ ಕೈಹಿಡಿದರೆ ಚಾಮರಾಜನಗರದ ಸಮಗ್ರ ಅಭಿವೃದ್ಧಿ ಮಾಡುವುದಾಗಿ ಹೇಳಿದರು.
 
ಸಾಮಾನ್ಯವಾಗಿ ಪ್ರತಿಭಟನೆಗಳಿಗೆ ಪ್ರಾಣಿಗಳನ್ನು ಬಳಸುವ ವಾಟಾಳ್‌ ನಾಗರಾಜ್‌, ತಮ್ಮ ಪ್ರಣಾಳಿಕೆಯಲ್ಲಿ ಕತ್ತೆ, ಎಮ್ಮೆಗಳಿಗೆ ಹೆಚ್ಚು ಒತ್ತು ನೀಡಿದ್ದಾರೆ. ಕತ್ತೆಗಳು ಧರ್ಮದೇವತೆ ಇದ್ದಂತೆ. ಅವುಗಳ ಅಭಿವೃದ್ಧಿಗಾಗಿ ವಿಶೇಷ ಮಂಡಳಿ ಹಾಗೂ ಎಮ್ಮೆಗಳ ಸಮಗ್ರ ಅಭಿವೃದ್ಧಿಗೆ ವಿಶೇಷ ಯೋಜನೆ ರೂಪಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
 
ಪ್ರೇಮ ವಿವಾಹಕ್ಕೆ 50 ಸಾವಿರ ರೂ.ನೆರವು: ಐತಿಹಾಸಿಕ ಬೆಂಗಳೂರು ನಗರದ ವೈಭವವನ್ನು ವೀಕ್ಷಿಸಲು ಪ್ರವಾಸಿಗರಿಗೆ ಕಡಿಮೆ ದರದಲ್ಲಿ ಹೆಲಿಕಾಪ್ಟರ್‌ ವ್ಯವಸ್ಥೆ ಕಲ್ಪಿಸಲಾಗುವುದು. ಪ್ರೇಮಿಗಳ ದಿನದಂದು ಸರ್ಕಾರಿ ರಜೆ ಘೋಷಣೆ ಜತೆಗೆ ಪ್ರೇಮ ವಿವಾಹಕ್ಕೆ ಸರ್ಕಾರದಿಂದ 50 ಸಾವಿರ ರೂ. ನೆರವು ನೀಡುವಂತೆ ಸರ್ಕಾರದ ಮೇಲೆ ಒತ್ತಡ ತರಲಾಗು ವುದು ಎಂದರು. 

ಜತೆಗೆ, ಬಯಲುಸೀಮೆಗೆ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ, ಕಳಸಾ-ಬಂಡೂರಿ ಯೋಜನೆ ಜಾರಿ, ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ವಿರುದ್ಧ ಹೋರಾಟವು ಪಕ್ಷದ ಆದ್ಯತೆ ಆಗಲಿದೆ ಎಂದರು. 

ಮೌಡ್ಯ ಬೆಂಬಲಿಸಿದ ಪ್ರಧಾನಿ: ವಾಟಾಳ್‌ 
ಪ್ರಧಾನಿ ಮೋದಿ ಅವರು ಚಾಮರಾಜನಗರಕ್ಕೆ ತೆರಳದೆ, ಸಂತೆಮರಹಳ್ಳಿಯಿಂದಲೇ ಹಿಂತಿರುಗಿರುವ ಮೂಲಕ ಮೌಡ್ಯವನ್ನು ಬೆಂಬಲಿಸಿದಂತಾಗಿದೆ ಎಂದು ವಾಟಾಳ್‌ ನಾಗರಾಜ್‌ ಆರೋಪಿಸಿದರು. ಚಾಮರಾಜನಗರಕ್ಕೆ ಹೋದವರು ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮೂಢನಂಬಿಕೆ ಇದೆ. ಇದಕ್ಕೆ ಪೂರಕವಾಗಿ ಮಂಗಳವಾರ ಪ್ರಧಾನಿ  ಮೋದಿ ಅವರು ಚಾಮರಾಜನಗರಕ್ಕೆ ಹೋಗದೆ, ಹಾಗೇ ಹಿಂದಿರುಗಿದ್ದಾರೆ. ಇದರಿಂದ ಮೂಢನಂಬಿಕೆ  ಹೆಚ್ಚಿಸಿದಂತಾಗಿದೆ. ಇದು ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನ ಎಂದು ದೂರಿದರು.

ಟಾಪ್ ನ್ಯೂಸ್

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.