ಯಾತ್ರೆಗೆ ಕೈ ಗುಡ್‌ಬೈ ಜಾತಿ ಲೆಕ್ಕಾಚಾರಕ್ಕೆ ಜೈ


Team Udayavani, Dec 3, 2017, 6:00 AM IST

Congress-700.jpg

ಬೆಂಗಳೂರು: ರಾಜ್ಯದಲ್ಲಿ ಮತ್ತೂಮ್ಮೆ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ವಿಭಿನ್ನ ಕಾರ್ಯಾಚರಣೆಗೆ ಮೊರೆ ಹೋಗಿರುವ ಆಡಳಿತಾರೂಢ ಕಾಂಗ್ರೆಸ್‌,  ಸದ್ಯಕ್ಕೆ ಯಾತ್ರೆ ಕೈ ಬಿಟ್ಟು  ಜಾತಿ ಲೆಕ್ಕಾಚಾರದಡಿ ರಾಜಕೀಯ ತಂತ್ರಗಾರಿಕೆ ರೂಪಿಸಲು ಮುಂದಾಗಿದೆ.

ಬಿಜೆಪಿ ಹಾಗೂ ಜೆಡಿಎಸ್‌ಗೆ ಪರ್ಯಾಯವಾಗಿ ಉದ್ದೇಶಿಸಲಾಗಿದ್ದ ಜನಾಶೀರ್ವಾದ ಯಾತ್ರೆ ತಾತ್ಕಾಲಿಕವಾಗಿ ಮುಂದೂಡಿ ವಿಧಾನಸಭಾ ಕ್ಷೇತ್ರಾವಾರು ಜಾತಿವಾರು ಪ್ರಭಾವ ಬೀರುವ ಅಂಶಗಳ ಬಗ್ಗೆ ತಳಮಟ್ಟದಲ್ಲಿ ಮಾಹಿತಿ ಸಂಗ್ರಹಣೆಗೆ ನಿರ್ಧರಿಸಿದೆ.

ಯಾವ್ಯಾವ ಕ್ಷೇತ್ರದಲ್ಲಿ ಯಾವ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿದೆ. ನಂತರದ ಸ್ಥಾನದಲ್ಲಿ ಯಾವೆಲ್ಲಾ ಸಮುದಾಯಗಳ ಜನಸಂಖ್ಯೆಇದೆ. ಚುನಾವಣೆಯಲ್ಲಿ ಆ ಸಮುದಾಯಗಳ ಪ್ರಾತ್ರ. ಆ ಸಮುದಾಯಕ್ಕೆ ಕಾಂಗ್ರೆಸ್‌ನ ಯಾವ ನಾಯಕರ ಬಗ್ಗೆ ಒಲವಿದೆ. ಆ ಕ್ಷೇತ್ರದ ಹೊಣೆಗಾರಿಕೆ ಯಾವ ನಾಯಕರಿಗೆ ನೀಡಿದರೆ ಸೂಕ್ತ ಎಂಬಿತ್ಯಾದಿ ಅಂಶಗಳ ಮೇಲೆ ಮಾಹಿತಿ ಸಂಗ್ರಹಕ್ಕೆ ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಗುಂಡ್ಲುಪೇಟೆ ಹಾಗೂ ನಂಜನಗೂಡು ಉಪ ಚುನಾವಣೆಯಲ್ಲಿ ಬಹಿರಂಗ ಪ್ರಚಾರಕ್ಕಿಂತ ಜಾತಿ ಲೆಕ್ಕಾಚಾರದಲ್ಲಿ ನಾಯಕರುಗಳು ಮಾಡಿದ ಗುಪ್ತ ಪ್ರಚಾರವೇ ಹೆಚ್ಚು ಪ್ರಯೋಜನಕ್ಕೆ ಬಂದಿದ್ದು, ಅದೇ ತಂತ್ರವನ್ನು ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಅನುಸರಿಸಲು ಕಾಂಗ್ರೆಸ್‌ ಮಾಸ್ಟರ್‌ ಪ್ಲಾನ್‌ ರೂಪಿಸಿದೆ.

ಪಕ್ಷದಲ್ಲಿ ತಮ್ಮ ತಮ್ಮ ಜಾತಿಯಲ್ಲಿ ಪ್ರಭಾವ ಬೆಳೆಸಿಕೊಂಡಿರುವ ನಲವತ್ತರಿಂದ ನಲವತ್ತೈದು ನಾಯಕರ ಪಟ್ಟಿ ಮಾಡಿಕೊಳ್ಳಲಾಗುತ್ತಿದ್ದು  ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್‌, ಕಾರ್ಯಾಧ್ಯಕ್ಷರಾದ ದಿನೇಶ್‌ ಗುಂಡೂರಾವ್‌, ಪ್ರಚಾರ ಸಮಿತಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್‌, ಕಾಂಗ್ರೆಸ್‌ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ವೀರಪ್ಪ ಮೋಯಿಲಿ, ಕೆ.ಎಚ್‌. ಮುನಿಯಪ್ಪ, ಕೆ. ರೆಹಮಾನ್‌ ಖಾನ್‌, ಆಸ್ಕರ್‌ ಫ‌ರ್ನಾಂಡಿಸ್‌, ಎಂ.ಬಿ. ಪಾಟೀಲ್‌, ಎಚ್‌.ಕೆ. ಪಾಟೀಲ್‌, ವಿನಯ್‌ ಕುಲಕರ್ಣಿ, ಕೆ.ಜೆ. ಜಾರ್ಜ್‌, ರೋಷನ್‌ ಬೇಗ್‌ರಂತಹ ಪ್ರಮುಖ ನಾಯಕರು ಅದರಲ್ಲಿದ್ದಾರೆ.

ಡಿಸೆಂಬರ್‌ 5 ರಿಂದ 7 ರ ವರೆಗೆ ನಡೆಯುವ ಪಕ್ಷದ ಮುಂಚೂಣಿ ಘಟಕಗಳ ಪದಾಧಿಕಾರಿಗಳ ಸಭೆಯಲ್ಲಿ ಎಲ್ಲ ಕ್ಷೇತ್ರಗಳ ಚಿತ್ರಣದ ಬಗ್ಗೆ ಅವರು ಸಂಗ್ರಹಿಸಿರುವ ಮಾಹಿತಿ ಹಾಗೂ ಜಿಲ್ಲಾ ಉಸ್ತುವಾರಿ ವಹಿಸಿಕೊಂಡಿರುವ ಕೆಪಿಸಿಸಿ ಪದಾಧಿಕಾರಿಗಳು ಸಂಗ್ರಹಿಸಿರುವ ಮಾಹಿತಿಯನ್ನು ತಾಳೆ ಹಾಕಿಕೊಂಡು, ಯಾವ ಕ್ಷೇತ್ರದಲ್ಲಿ ಪಕ್ಷಕ್ಕೆ ಪೂರಕ ವಾತಾವರಣ ಇದೆ. ಯಾವ ಕ್ಷೇತ್ರದಲ್ಲಿ ವ್ಯತಿರಿಕ್ತ ವಾತಾವರಣ ಇದೆ ಎನ್ನುವುದನ್ನು ಮನದಟ್ಟು ಮಾಡಿಕೊಂಡು, ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್‌ ಪಕ್ಷದ ವತಿಯಿಂದ ವಿಧಾನಸಭಾ ಕ್ಷೇತ್ರವಾರು ಸಮಾವೇಶಗಳನ್ನು ಮಾಡಲು ನಿರ್ಧರಿಸಿದ್ದು, ಆರಂಭದಲ್ಲಿ  2013 ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಸೋತ ಕ್ಷೇತ್ರಗಳಲ್ಲಿ ಸಮಾವೇಶಗಳನ್ನು ಮಾಡಲು ನಿರ್ಧರಿಸಿದ್ದಾರೆ.

ಆ ಸಂದರ್ಭದಲ್ಲಿ ಜಾತಿವಾರು ಪ್ರಭಾವಿಗಳಾಗಿರುವ ನಾಯಕರನ್ನು ಆ ಕ್ಷೇತ್ರಗಳಿಗೆ ಕರೆದೊಯ್ದು ಹೊಣೆಗಾರಿಕೆ ನೀಡಿ ಅವರ ಸಮುದಾಯದ ಜನರನ್ನು ಸಂಘಟಿಸುವುದು ಹಾಗೂ ಅಲ್ಲಿ ಸ್ಥಳೀಯ ನಾಯಕರುಗಳ ನಡುವೆ ಇರುವ ಗೊಂದಲ, ಭಿನ್ನಾಭಿಪ್ರಾಯ ನಿವಾರಣೆ ಮಾಡುವ ಜವಾಬ್ದಾರಿ ವಹಿಸಲು ಕೆಪಿಸಿಸಿ ಮುಂದಾಗಿದೆ.

ಲಿಂಗಾಯತ ಸಮುದಾಯದ ಮತದಾರರು ಹೆಚ್ಚಿರುವ ಕ್ಷೇತ್ರಗಳಿಗೆ ಸಚಿವರಾದ ಎಂ.ಬಿ. ಪಾಟೀಲ್‌, ವಿನಯ ಕುಲಕರ್ಣಿ, ಎಚ್‌.ಕೆ. ಪಾಟೀಲ್‌, ಎಸ್‌.ಆರ್‌. ಪಾಟೀಲ್‌ ಅವರನ್ನು ಬಳಸಿಕೊಳ್ಳುವುದು. ಒಕ್ಕಲಿಗ ಸಮುದಾಯದ ಪ್ರಭಾವ ಇರುವ ಕ್ಷೇತ್ರಗಳಲ್ಲಿ ಡಿ.ಕೆ. ಶಿವಕುಮಾರ್‌, ಅಂಬರೀಶ್‌, ಎಂ. ಕೃಷ್ಣಪ್ಪ, ಕೃಷ್ಣ ಬೈರೇಗೌಡ ಅವರ ಮೂಲಕ ಸಮುದಾಯದ ಮತ ಒಗ್ಗೂಡಿಸುವುದು. ದಲಿತ ಮತದಾರರು ಹೆಚ್ಚಿರುವ ಕ್ಷೇತ್ರಗಳಲ್ಲಿ ಪರಮೇಶ್ವರ್‌, ಕೆ.ಎಚ್‌.ಮುನಿಯಪ್ಪ, ಎಚ್‌.ಆಂಜನೇಯ, ಡಾ. ಎಚ್‌.ಸಿ. ಮಹದೇವಪ್ಪ ಅವರನ್ನು ಬಳಸಿಕೊಳ್ಳುವುದು.
ಕುರುಬ ಸಮುದಾಯ ಹೆಚ್ಚಿರುವ ಕಡೆಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಹಿರಂಗ ಸಭೆಗಳಲ್ಲಿ ಪಾಲ್ಗೊಂಡು, ಸಚಿವ ಎಚ್‌.ಎಂ ರೇವಣ್ಣ ಹಾಗೂ ಇತರ ಎರಡನೇ ಹಂತದ ಕುರುಬ ನಾಯಕರನ್ನು ಬಳಸಿಕೊಳ್ಳಲು ಪಕ್ಷ ಯೋಚಿಸಿದೆ. ನಾಯಕ ಸಮುದಾಯ ಹೆಚ್ಚಿರುವ ಕ್ಷೇತ್ರಗಳಲ್ಲಿ ಸತೀಶ್‌ ಜಾರಕಿಹೊಳಿ, ನೇಕಾರರು ಹೆಚ್ಚಿರುವ ಕ್ಷೇತ್ರಗಳಿಗೆ ಕೆಪಿಸಿಸಿ ಹಿಂದುಳಿದ ಘಟಕದ ಅಧ್ಯಕ್ಷ ಎಂ.ಡಿ. ಲಕ್ಷ್ಮೀನಾರಾಯಣ ಅವರನ್ನು ತಳ ಮಟ್ಟದ ಸಮುದಾಯಗಳ ಮತದಾರರನ್ನು ಒಗ್ಗೂಡಿಸುವ ಕೆಲಸಕ್ಕೆ ನಿಯೋಜಿಸಲು ಕಾಂಗ್ರೆಸ್‌ ತೀರ್ಮಾನಿಸಿದೆ ಎಂದು ತಿಳಿದು ಬಂದಿದೆ.

ಸಮುದಾಯ ಲೆಕ್ಕಾಚಾರ
ಲಿಂಗಾಯತ
ಎಂ.ಬಿ. ಪಾಟೀಲ್‌, ವಿನಯ ಕುಲಕರ್ಣಿ, ಎಚ್‌.ಕೆ. ಪಾಟೀಲ್‌, ಎಸ್‌.ಆರ್‌. ಪಾಟೀಲ್‌, ಶಾಮನೂರು ಶಿವಶಂಕರಪ್ಪ
ಒಕ್ಕಲಿಗ
ಡಿ.ಕೆ. ಶಿವಕುಮಾರ್‌, ಅಂಬರೀಶ್‌, ಎಂ. ಕೃಷ್ಣಪ್ಪ, ಕೃಷ್ಣ ಬೈರೇಗೌಡ
ದಲಿತ
ಪರಮೇಶ್ವರ್‌, ಕೆ.ಎಚ್‌.ಮುನಿಯಪ್ಪ, ಎಚ್‌.ಆಂಜನೇಯ, ಡಾ. ಎಚ್‌.ಸಿ. ಮಹದೇವಪ್ಪ
ಕುರುಬ
ಸಿದ್ದರಾಮಯ್ಯ, ಎಚ್‌.ಎಂ.ರೇವಣ್ಣ
ನಾಯಕ
ಸತೀಶ್‌ ಜಾರಕಿಹೊಳಿ
ನೇಕಾರರು
ಉಮಾಶ್ರೀ, ಎಂ.ಡಿ.ಲಕ್ಷ್ಮೀನಾರಾಯಣ
ಮುಸ್ಲಿಂ
ಕೆ. ರೆಹಮಾನ್‌ ಖಾನ್‌, ರೋಷನ್‌ ಬೇಗ್‌, ಜಾಫ‌ರ್‌ ಷರೀಫ್, ನಸೀರ್‌ ಅಹ್ಮದ್‌, ಜಮೀರ್‌ ಅಹ್ಮದ್‌
ಕ್ರೈಸ್ತ
ಆಸ್ಕರ್‌ ಫ‌ರ್ನಾಂಡೀಸ್‌, ಕೆ.ಜೆ.ಜಾರ್ಜ್‌

– ಶಂಕರ ಪಾಗೋಜಿ

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.