ಶ್ರದ್ಧಾ ಭಕ್ತಿಯಿಂದ ಹನುಮನ ಆರಾಧನೆ


Team Udayavani, Dec 17, 2021, 10:00 AM IST

ಹನುಮ ಜಯಂತಿ ಆಚರಣೆ

ಬೆಂಗಳೂರು: ಹನುಮ ಜಯಂತಿ ಅಂಗವಾಗಿ ನಗರದ ವಿವಿಧೆಡೆ ಹನುಮ ದೇವಸ್ಥಾನಗಳಲ್ಲಿ ಗುರುವಾರ ಮುಂಜಾನೆಯಿಂದಲೇ ವಿಶೇಷ ಪೂಜಾಕೈಂಕರ್ಯಗಳು ನೆರವೇರಿದವು. ಆಂಜನೇಯ ಉತ್ಸವ ಮೂರ್ತಿಯನ್ನು ಸಿಂಗರಿಸಿಭಕ್ತರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು.

ದೇಗುಲಗಳಲ್ಲಿ ಗಣಪತಿ ಹೋಮ, ನವಗ್ರಹಹೋಮಮತ್ತುಲಕ್ಷ್ಮೀ ಹೋಮ ನಡೆಯಿತು.ಭಕ್ತಾದಿಗಳು ಮುಂಜಾನೆಯಿಂದಲೇ ಸಾಲುಗಟ್ಟಿ ನಿಂತು ಹೂವು, ತೆಂಗಿನಕಾಯಿ, ನೈವೇದ್ಯ ಅರ್ಪಿಸಿ, ದೇವರ ದರ್ಶನ ಪಡೆದರು. ಪ್ರತಿ ವರ್ಷದಂತೆ ಪ್ರಸಕ್ತ ವರ್ಷ ಹನುಮ ಜಯಂತಿ ಅಂಗವಾಗಿ ವಿಜಯನಗರದ ಮಾರುತಿ ಮಂದಿರ, ಮೈಸೂರು ರಸ್ತೆಯ ಗಾಳಿ ಆಂಜನೇಯ, ಆರ್‌ಆರ್‌ ನಗರದ ಕಂಚೇನಹಳ್ಳಿ ಆಂಜನೇಯ, ಆನಂದ್‌ರಾವ್‌ ವೃತ್ತದ ಪಾತಾಳ ಆಂಜನೇಯ, ರಾಗಿ ಗುಡ್ಡದ ಪ್ರಸನ್ನಾಂಜನೇಯ, ಕೋರಮಂಗಲದ ಪಂಚಮುಖೀ ಆಂಜನೇಯ ದೇವಸ್ಥಾನ, ಮಹಾಲಕ್ಷ್ಮೀ ಬಡಾವಣೆ, ಮಲ್ಲೇಶ್ವರಂ ಸೇರಿದಂತೆ ಮುಂತಾದ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳು ನೆರವೇರಿದವು.

ಇದನ್ನೂ ಓದಿ;- ಕ್ಯಾ.ವರುಣ್‌ಸಿಂಗ್‌ಗೆ ಕಂಬನಿಯ ವಿದಾಯ

ನಗರದ ಸರ್‌.ಎಂ.ವಿಶ್ವೇಶ್ವರಯ್ಯ ಬಡಾವಣೆಯ ಆಂಜನೇಯ ದೇವಸ್ಥಾನದಲ್ಲಿ ಬೆಳಗ್ಗೆ 5.30ಕ್ಕೆ ದೇವರಿಗೆ ಪಂಚಾಮೃತ ಅಭಿಷೇಕ, 6.30ಕ್ಕೆ ಪವಮಾನ ಹೋಮ, ಸುದರ್ಶನ ಹೋಮ, 9ಕ್ಕೆ ಪೂರ್ಣಾಹುತಿ, ಮಹಾಮಂಗಳಾರತಿ ಮತ್ತು ಆಂಜನೇಯ ಸ್ವಾಮಿ ಉತ್ಸವ ಕಾರ್ಯಕ್ರಮ ಜರುಗಿತು. ತದನಂತರ ತೀರ್ಥ, ಪಾನಕ, ಮಜ್ಜಿಗೆ,ಕೋಸಂಬರಿ, ಅನ್ನಸಂತರ್ಪಣೆ ನಡೆಯಿತು. ಮಹಾಲಕ್ಷೀಪುರದ ಪ್ರಸನ್ನ ವೀರಾಂಜನೇಯ ದೇವಸ್ಥಾನದಲ್ಲಿ 46ನೇ ಹನುಮ ಜಯಂತಿ ಪ್ರಯುಕ್ತ 108 ದಂಪತಿಗಳಿಂದ ಶತಲಕ್ಷ ಕ್ಷೀರಾಭಿಷೇಕ, ಪಂಚಾಮೃತ ಅಭಿಷೇಕ, ಪೂಜೆ ಹಮ್ಮಿಕೊಳ್ಳಲಾಗಿತ್ತು.ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.

ಅನ್ನಸಂತರ್ಪಣೆ: ಕೆ.ಆರ್‌.ಪುರದ ಭಟ್ಟರಹಳ್ಳಿ, ಬಸವನಪುರದಲ್ಲಿ ಹನುಮಂತ ಜಯಂತಿಯ ಅಂಗವಾಗಿ ಅನ್ನಸಂತರ್ಪಣೆ ಕಾರ್ಯ ಕ್ರಮ ಹಮ್ಮಿಕೊಳ್ಳಲಾಗಿತ್ತು. ಅನ್ನಸಂತರ್ಪಣೆ ಜತೆಗೆ ಸರ್ಕಾರಿ ಶಾಲೆಯ ಮಕ್ಕಳಿಗೆ ಬೆಳಗಿನ ಉಪಹಾರ ವಿತರಿಸಲಾಯಿತು. ಮಲ್ಲೇಶ್ವರಂ ರೈಲು ನಿಲ್ದಾಣದ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಸಾಯಂಕಾಲ ಭರತನಾಟ್ಯ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕೊರೊನಾದಿಂದಾಗಿ ದೇವರ ದರ್ಶನಕ್ಕೆ ಬರುವ ಭಕ್ತಾದಿಗಳಿಗೆ ಮುಂಜಾಗ್ರತೆಯಾಗಿ, ಸಾಮಾಜಿಕ ಅಂತರ ಕಾಪಾಡಿಕೊಂಡು, ಮಾಸ್ಕ್ ಧರಿಸುವುದು, ಸ್ಯಾನಿಟೆ„ಸರ್‌ ಬಳಕೆಕಡ್ಡಾಯ ಮಾಡಲಾಗಿತ್ತು.

ರಾಮ, ಹನುಮ ವೇಷಧಾರಿಗಳ ಆಕರ್ಷಣೆ

ಆನಂದ್‌ರಾವ್‌ ವೃತ್ತದ ಪಾತಾಳ ಆಂಜನೇಯ ದೇವಸ್ಥಾನದ ಆವರಣದಲ್ಲಿ ಹನುಮ ವೇಷಧಾರಿಗಳ ಗುಂಪು ಸಾರ್ವಜನಿಕರಿಗೆ ದರ್ಶನ ನೀಡಿತು. ಈ ವೇಳೆ ಶ್ರೀರಾಮನ ವೇಷಧಾರಿಯನ್ನು ಹನುಮ ವೇಷಧಾರಿಗಳು ಭುಜದ ಮೇಲೆ ಹೊತ್ತುಕೊಂಡ ಭಂಗಿ ಪ್ರದರ್ಶಿಸಿದರು. ನಂತರ ದೇವಸ್ಥಾನ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚರಿಸುವ ಮೂಲಕ ಜಯಂತಿ ಆಚರಣೆಗೆ ಮೆರಗು ನೀಡಿದರು ನಗರದ ರಸ್ತೆಗಳಲ್ಲಿ ರಾಮ, ಲಕ್ಷ್ಮಣ, ಆಂಜನೇಯ ವೇಷಾಧಾರಿಗಳು ಆಕರ್ಷಕವಾಗಿ ಕಂಡುಬಂದರು. ವೇಷಾಧಾರಿಗಳು ಬೈಕ್‌ ಹಾಗೂ ದೊಡ್ಡ ವಾಹನಗಳನ್ನು ಏರಿ ಆಂಜನೇಯನ ಭಕ್ತಿ ಗೀತೆಗಳನ್ನು ಪಠಣ ಮಾಡುವ ಮೂಲಕ ಸಾರ್ವಜನಿಕರ ಗಮನ ಸೆಳೆದರು.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.