Harassment: ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ; ಮೆಟ್ರೋ ಎಎಸ್ಒ ವಿರುದ್ಧ ಪ್ರಕರಣ
Team Udayavani, Mar 17, 2024, 10:03 AM IST
ಬೆಂಗಳೂರು: ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ನಮ್ಮ ಮೆಟ್ರೋದ ರಾಜಾಜಿನಗರ ನಿಲ್ದಾಣದ ಸಹಾಯಕ ಸೆಕ್ಷನ್ ಅಧಿಕಾರಿ ಹಾಗೂ ವಿಸಿಡಂ ಏಜೆನ್ಸಿ ಮಾಲೀಕನ ವಿರುದ್ಧ ಸುಬ್ರಹ್ಮಣ್ಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಿ.ದಾಸರಹಳ್ಳಿ ನಿವಾಸಿ 34 ವರ್ಷದ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ರಾಜಾಜಿನಗರ ಮೆಟ್ರೋ ನಿಲ್ದಾಣದ ಸಹಾಯಕ ಸೆಕ್ಷನ್ ಅಧಿಕಾರಿ ಪಿ.ಗಜೇಂದ್ರ ಮತ್ತು ದೌರ್ಜನ್ಯದ ಬಗ್ಗೆ ದೂರು ನೀಡಿದರೂ ಕ್ರಮಕೈಗೊಳ್ಳದ ವಿಸಿಡಂ ಏಜೆನ್ಸಿ ಮಾಲೀಕ ಪ್ರಕಾಶ್ ನಿಟ್ಟೂರು ವಿರುದ್ಧ ಲೈಂಗಿಕ ಕಿರುಕುಳ ಆರೋಪದಡಿ ಸುಬ್ರಹ್ಮಣ್ಯನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಆರೋಪಿ ಗಜೇಂದ್ರ ಮಹಿಳಾ ಸಿಬ್ಬಂದಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸುತ್ತಿದ್ದು, ದೂರುದಾರ ಮಹಿಳಾ ಸಿಬ್ಬಂದಿಯ ಮೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದ. ಜತೆಗೆ ಆಕೆಯ ಅಂಗಾಂಗಗಳ ಬಗ್ಗೆ ಕೆಟ್ಟದಾಗಿ ವರ್ಣನೆ ಮಾಡುತ್ತಿದ್ದ. ಅಲ್ಲದೆ, ಲೈಂಗಿಕ ಕ್ರಿಯೆಗೆ ಒತ್ತಾಯಿಸಿ, ಒಂದು ವೇಳೆ ತನಗೆ ಸಹಕಾರ ನೀಡದಿದ್ದರೆ ಬೇರೆ ನಿಲ್ದಾಣಕ್ಕೆ ವರ್ಗಾವಣೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತೆ ದೂರಿನಲ್ಲಿ ಆರೋಪಿಸಿದ್ದಾರೆ.
ಇನ್ನು ಈ ವಿಚಾರವನ್ನು ವಿಸಿಡಂ ಏಜೆನ್ಸಿ ಮಾಲೀಕ ಪ್ರಕಾಶ್ಗೆ ಮಾಹಿತಿ ನೀಡಿದರೂ, ಆತ ಸಾಧ್ಯವಾದರೆ ಗಜೇಂದ್ರ ಹೇಳಿದಂತೆ ಕೇಳು, ಇಲ್ಲವಾದಲ್ಲಿ ಕೆಲಸ ಬಿಟ್ಟು ಹೋಗಿ. ನಾನು ಅಧಿಕಾರಿಯನ್ನು ಎದುರು ಹಾಕಿಕೊಳ್ಳಲು ಸಾಧ್ಯವಿಲ್ಲ. ನಿಮ್ಮನ್ನೇ ಕೆಲಸದಿಂದ ತೆಗೆದು ಹಾಕುತ್ತೇನೆಂದು ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖೀಸಿದ್ದಾರೆ. ಘಟನೆ ಬೆನ್ನಲ್ಲೇ ನಮ್ಮ ಮೆಟ್ರೋದ ಹಿರಿಯ ಅಧಿಕಾರಿಗಳು ಗಜೇಂದ್ರ ವಿರುದ್ಧ ಆಂತರೀಕ ತನಿಖೆಗೆ ಸೂಚಿಸಿದ್ದಾರೆ. ಮತ್ತೂಂದೆಡೆ ಸಂತ್ರಸ್ತೆ ರಾಜ್ಯ ಮಹಿಳಾ ಆಯೋಗಕ್ಕೂ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ