ಶಾಂತಿನಗರದಲ್ಲಿ ಹ್ಯಾರಿಸ್‌ ಪ್ರಚಾರ


Team Udayavani, Apr 26, 2018, 12:40 PM IST

1-nm.jpg

ಬೆಂಗಳೂರು: ಶಾಂತಿ ನಗರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಶಾಸಕ ಎನ್‌.ಎ.ಹ್ಯಾರಿಸ್‌ ಅವರು ಬುಧವಾರದಿಂದ ಚುನಾವಣಾ ಪ್ರಚಾರ ಆರಂಭಿಸಿದ್ದು, ಬೆಳಗ್ಗೆ ದೊಮ್ಮಲೂರು ಭಾಗ ಹಾಗೂ ಸಂಜೆ ಅಗರಂ ಪ್ರದೇಶದಲ್ಲಿ ಪಾದಯಾತ್ರೆ ನಡೆಸಿದ ಅವರು ಮತ ಯಾಚನೆ ಮಾಡಿದರು.

ತಮ್ಮ ಪ್ರಚಾರದ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ತಾವು ಎರಡು ಬಾರಿ ಶಾಸಕರಾಗಿ ಕ್ಷೇತ್ರದ ಸಮಸ್ಯೆಗಳಿಗೆ ಪರಿಹಾರ ಕೊಟ್ಟಿದ್ದು, ಈ ಕ್ಷೇತ್ರವನ್ನು ಮಾದರಿಯಾಗಿಸುವ ನಿಟ್ಟಿನಲ್ಲಿ ನೀಲನಕ್ಷೆಯೊಂದಿಗೆ ಕಣಕ್ಕಿಳಿಯುತ್ತಿರು ವುದಾಗಿ ತಿಳಿಸಿದರು.

ಬೆಳೆಯುತ್ತಿರುವ ಬೆಂಗಳೂರಿಗೆ ಅಭಿವೃದ್ಧಿಯೇ ಪ್ರಗತಿಯ ಮಾನದಂಡ. ಜನಪ್ರತಿನಿಧಿಗಳ ಸಾಧನೆಯ ಹೆಜ್ಜೆ ಗುರುತು. ಈ ನಗರ ಅಭಿವೃದ್ಧಿ, ಮೂಲ ಸೌಕರ್ಯಗಳಿಂದಾಗಿ ಎಲ್ಲರ ಗಮನಸೆಳೆಯುತ್ತಿದೆ.
ಇದರ ಜತೆಗೆ ಎಲ್ಲರ ಅಭಿಲಾಷೆ ಬೆಂಗಳೂರು,ಶಾಂತಿನಗರವಾಗಿಯೂ ಉಳಿಯಬೇಕು ಎಂಬುದು ನಮ್ಮ ಆಶಯ ಎಂದವರು ಹೇಳಿದ್ದಾರೆ.

ಇಲ್ಲಿನ ಜನ ನನ್ನನ್ನು ಬಹುವಾಗಿ ಪ್ರೀತಿಸುತ್ತಾರೆ. ನನ್ನ ಕಾರ್ಯವೈಖರಿ ಕಂಡು ಮೂರನೇ ಅವಧಿಗೂ ನನ್ನನ್ನೇ ಆಯ್ಕೆ ಮಾಡುತ್ತಾರೆಂದು ನಂಬಿದ್ದೇನೆ ಎಂದರು.ಮೇ 12ರಂದು ನಡೆಯುವ ವಿಧಾನಸಭೆ
ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿರುವ ನನಗೆ, ಈ ಕ್ಷೇತ್ರದ ಋಣ ತೀರಿಸಲು ಮತ್ತೂಂದು ಅವಕಾಶ ಕೇಳಿದ್ದು, ಪಕ್ಷ ಅವಕಾಶ ಮಾಡಿಕೊಟ್ಟಿದೆ ಎಂದು ಹೇಳಿದರು.

ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿ ಅಭಿವೃದ್ಧಿಪಡಿಸಿದ್ದು, ಮೂಲಸೌಲಭ್ಯಗಳ ಅಭಿವೃದ್ಧಿಯ ಮಾನದಂಡಗಳನ್ನು ಆಧರಿಸಿ ಉತ್ತಮ ಕ್ಷೇತ್ರ ಎಂದು ಆಯ್ಕೆ ಮಾಡಿರುವ ಬಿ-ಪ್ಯಾಕ್‌ (ಬೆಂಗಳೂರು ಪೊಲಿಟಿಕಲ್‌ ಆ್ಯಕ್ಷನ್‌ ಸಮಿತಿ) ಶಾಂತಿನಗರವನ್ನು ಅತ್ಯುತ್ತಮ ಕ್ಷೇತ್ರ ಎಂದೂ, ಕ್ಷೇತ್ರವನ್ನು ಅಭಿವೃದ್ಧಿ ದೃಷ್ಟಿಯಿಂದ ನಂಬರ್‌ ಒನ್‌ ಕ್ಷೇತ್ರ ಎಂದು ಆಯ್ಕೆ ಮಾಡಿರುವುದು ನನ್ನ ಮಾತಿಗೆ ನಿದರ್ಶನ ಎಂದವರು ವಿವರಿಸಿದರು.ಶುಕ್ರವಾರ ಶಾಂತಿನಗರ ಹಾಗೂ ಜೌಗು ಪಾಳ್ಯದಲ್ಲಿ ಮತ ಯಾಚಿಸುವುದಾಗಿ ತಿಳಿಸಿದರು. 

ಉತ್ತಮ ಪ್ರತಿಕ್ರಿಯೆ
ಬುಧವಾರ ಮತ ಯಾಚನೆ ಮಾಡಿದ ಕ್ಷೇತ್ರಗಳಲ್ಲಿ ಜನರಿಂದ ಉತ್ತಮ ಪ್ರತಿಕ್ರಿಯೆ
ಲಭ್ಯವಾಯಿತು. ಕ್ಷೇತ್ರದ ಜನತೆ ಆದರದಿಂದ ಬರಮಾಡಿಕೊಂಡು ಹರಸಿದ್ದು ಕಂಡುಬಂತು. ಅನೇಕ ಜನರು ಶಾಸಕರಿಂದಾದ ಒಳ್ಳೆಯ ಕೆಲಸವನ್ನು ಈ ಸಂದರ್ಭದಲ್ಲಿ ಸ್ಮರಿಸಿದ್ದಲ್ಲದೇ, ಮುಂದೆಯೂ ನಿಮ್ಮ ಕೈ ಬಲಪಡಿಸುವ ಮಾತನಾಡಿದ್ದು ವಿಶೇಷವಾಗಿತ್ತು.

ಹ‌ತ್ತು ವರ್ಷಗಳಲ್ಲಿ ಶಾಂತಿ ನಗರ ಕ್ಷೇತ್ರ ಮಹತ್ತರ ಬದಲಾವಣೆ ಕಂಡಿದೆ. ಹಿಂದೆ ರಸ್ತೆ, ಒಳಚರಂಡಿ ಸಮಸ್ಯೆ, ಜೋರು ಮಳೆ ಬಂದರೆ ತಗ್ಗುಪ್ರದೇಶಗಳ ಮನೆಗಳಿಗೆ ನೀರು ನುಗ್ಗುವುದು ಸೇರಿ ವಿವಿಧ ಸಮಸ್ಯೆಗಳಿದ್ದವು. ಇವುಗಳನ್ನು ಹಂತ ಹಂತವಾಗಿ ಬಗೆಹರಿಸಿದ್ದೇನೆ.

●ಎನ್‌.ಎ.ಹ್ಯಾರಿಸ್‌, ಶಾಸಕ ಹಾಗೂ
ಶಾಂತಿನಗರ ಕಾಂಗ್ರೆಸ್‌ ಅಭ್ಯರ್ಥಿ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.