ನಮ್ಮನೆ ಮಳೆ ನೀರು ಕೊಯ್ಲು ರಿಯಲ್ಲಾ?


Team Udayavani, Dec 4, 2019, 10:05 AM IST

bng-tdy-1

ಸಾಂಧರ್ಬಿಕ ಚಿತ್ರ

ಬೆಂಗಳೂರು: ನೀವು ದಂಡದಿಂದ ತಪ್ಪಿಸಿಕೊಳ್ಳಲು ನೆಪಮಾತ್ರಕ್ಕೆ ಮಳೆ ನೀರು ಕೊಯ್ಲು ವ್ಯವಸ್ಥೆ ಅಳವಡಿಸಿಕೊಂಡಿದ್ದೀರಾ? ಹಾಗಿದ್ದರೆ, ಸದ್ಯದಲ್ಲಿಯೇ ನಿಮ್ಮ ಕೈ ಸೇರಲಿದೆ ನೋಟಿಸ್‌, ಬೀಳಲಿದೆ ಬಾರಿ ದಂಡ! ಹೌದು, ಬೆಂಗಳೂರು ಜಲಮಂಡಳಿಯು ಮಳೆನೀರು ಕೊಯ್ಲು ಅನುಷ್ಠಾನದ ಕುರಿತು ರಿಯಾಲಿಟಿ ಚೆಕ್‌ಮಾಡಲು ಮುಂದಾಗಿದೆ.

ಇದಕ್ಕಾಗಿ ಒಂದು ತಂಡವನ್ನು ಸಿದ್ಧಪಡಿಸುತ್ತಿದ್ದು, ಆ ತಂಡದ ಸದಸ್ಯರು ಈಗಾಗಲೇ ನಗರದಲ್ಲಿ ಮಳೆ ನೀರು ಕೊಯ್ಲು ಅಳವಡಿಕೆಯಾಗಿರುವ ಎಲ್ಲಾ 1.2 ಲಕ್ಷ ಕಟ್ಟಡಗಳಿಗೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ. ಪ್ರಮುಖವಾಗಿ ಕಾಗದ ಪತ್ರದಲ್ಲಿ ದಾಖಲಾಗಿರುವಂತೆ ಆ ಕಟ್ಟದ ಮಾಲೀಕರು ನಿಜಕ್ಕೂ ಮಳೆನೀರು ಕೊಯ್ಲು ವಿಧಾನ ಅಳವಡಿಸಿ ಕೊಂಡಿದ್ದಾರಾಸಂಗ್ರಹ ವಾಗುವ ನೀರನ್ನು ಮರುಬಳಕೆ ಮಾಡುತ್ತಿದ್ದಾಯೇ? ವಿಧಾನವು ನಿಯಮ ಬದ್ಧವಾಗಿದೆಯೇ? ಎಂಬಿತ್ಯಾದಿ ಪರೀಕ್ಷೆಗಳನ್ನು ಮಾಡಲಿದ್ದಾರೆ. ಒಂದು ವೇಳೆ ದಂಡದಿಂದ ತಪ್ಪಿಸಿಕೊಳ್ಳಲು ನೆಪಮಾತ್ರಕ್ಕೆ ಅಳವಡಿಸಿಕೊಂಡಿರುವುದು ದೃಢವಾದರೆ ಸ್ಥಳದಲ್ಲೇ ನೋಟಿಸ್‌ ನೀಡುವ ಜತೆಗೆ ಇಂತಿಷ್ಟು ತಿಂಗಳ ದಂಡವನ್ನೂ ವಿಧಿಸಲಿದ್ದಾರೆ.

ನಗರದಲ್ಲಿ ಕಾವೇರಿ ನೀರಿನ ಅವಲಂಬನೆ ಕಡಿಮೆಮಾಡಿ ಮಳೆನೀರು ಸಂಗ್ರಹ ಹಾಗೂ ಬಳಕೆ ಹೆಚ್ಚಿಸಲು 40ಗಿ60 ವಿಸ್ತೀರ್ಣ ಹಾಗೂ ಅದಕ್ಕಿಂತ ಹೆಚ್ಚು ವಿಸ್ತೀರ್ಣದಲ್ಲಿ ನಿರ್ಮಾಣವಾಗುವ ಎಲ್ಲ ಕಟ್ಟಡಗಳಿಗೆ ದಶಕದ ಹಿಂದೆಯೇ ಸರ್ಕಾರ ಮಳೆನೀರು ಕೊಯ್ಲು ವಿಧಾನವನ್ನು ಕಡ್ಡಾಯ ಮಾಡಿದೆ. ಈ ವಿಧಾನದಲ್ಲಿ ಸಂಗ್ರಹವಾದ ನೀರನ್ನು ಉತ್ತಮ ಟ್ಯಾಂಕ್‌ ಅಥವಾ ಸಂಪ್‌ನಲ್ಲಿ ಸಂಗ್ರಹಿಸಿ ನಿತ್ಯ ಚಟುವಟಿಕೆಗಳಿಗೆ ಬಳಸಿಕೊಳ್ಳುವುದು ಅಥವಾ ಇಂಗುಗುಂಡಿಗೆ ಹರಿಸುವುದು ಕಡ್ಡಾಯ.

ನಗರದಲ್ಲಿ 1.2 ಲಕ್ಷ ಕಟ್ಟಡಗಳಿಗೆ ಈ ಪದ್ಧತಿ ಅಳವಡಿಸಿದ್ದು, 70 ಸಾವಿರ ಕಟ್ಟಡ ಮಾಲೀಕರು ಇಂದಿಗೂ ದಂಡ ಕಟ್ಟುತ್ತಿದ್ದಾರೆ.ಆದರೆ, ಮಳೆ ನೀರು ಕೊಯ್ಲು ಪದ್ಧತಿ ಹೊಂದಿರುವ ಬಹುತೇಕ ಕಟ್ಟಡಗಳ ಮಾಲೀಕರು ಆರಂಭದಲ್ಲಿ ಜಲ ಮಂಡಳಿ ನೀರಿನ ಸಂಪರ್ಕಕ್ಕಾಗಿ ಅಳವಡಿಸಿಕೊಂಡು ನಂತರ ತೆರವು ಮಾಡಿದ್ದಾರೆ. ಜಲಮಂಡಳಿ ಹಾಕುವ ನೀರಿನ ಮಾಸಿಕ ಶುಲ್ಕರ ಶೇ.50ರಷ್ಟು (ವಸತಿ) ಹಾಗೂ 100 ರಷ್ಟು (ವಸತಿಯೇತರ) ದಂಡದಿಂದ ತಪ್ಪಿಸಿಕೊಳ್ಳಲು ನೆಪಮಾತ್ರಕ್ಕೆ ಅಳವಡಿಸಕೊಂಡು ಬಳಸದೇ ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂಬ ಆರೋಪವಿದೆ. ಜತೆಗೆನಗರದಲ್ಲಿ 1.2 ಲಕ್ಷ ಕಟ್ಟಡಗಳಲ್ಲಿ ಮಳೆನೀರು ಕೊಯ್ಲು ಅಳವಡಿಕೆಯಾಗಿದ್ದರೂ ಜಲಮಂಡಳಿಗೆ ನೀರಿನ ಬೇಡಿಕೆ ಮಾತ್ರ ಎಂದಿಗೂ ಕಡಿಮೆಯಾಗಿಲ್ಲ. ಹೀಗಾಗಿ, ಮಳೆನೀರು ಕೊಯ್ಲು ಯಶಸ್ವಿ ಅನುಷ್ಠಾನವಾಗಿದೆಯೋ ಇಲ್ಲವೋ ಎಂಬ ಕುರಿತು ಮನೆ ಮನೆಗೆ ತೆರಳಿ ವಾಸ್ತವತೆ ಪರೀಕ್ಷಿಸಲು ಜಲಮಂಡಳಿಯು ಮುಂದಾಗಿದೆ.

ಒಂದು ಕಟ್ಟಡ ಪರಿಶೀಲನೆಗೆ 250 ರೂ. ವೆಚ್ಚ: ಮಳೆನೀರು ಕೊಯ್ಲು ವಿಧಾನ ಕುರಿತು ಈಗಾಗಲೇ ಕಾರ್ಯನಿರ್ವಹಿಸಿದ ಅನುಭವುಳ್ಳ ಸರ್ಕಾರೇತರ ಸಂಸ್ಥೆಗೆ ಪರಿಶೀಲನೆಯ ಗುತ್ತಿಗೆ ನೀಡುತ್ತಿದ್ದು, ಒಂದು ಕಟ್ಟಡ ಪರಿಶೀಲನೆಗೆ 250 ರೂ. ಪಾವತಿಸಲಾಗುತ್ತಿದೆ. ಗುತ್ತಿಗೆ
ಪಡೆದ ಸಂಸ್ಥೆಯ ತನ್ನ 10 ರಿಂದ 15 ಸಿಬ್ಬಂದಿಯಿಂದ ಜಲಮಂಡಳಿ ದಾಖಲೆಯಂತೆ ನಗರದಾದ್ಯಂತ ಗೃಹ ಹಾಗೂ ಗೃಹೇತರ ಕಟ್ಟಡಗಳಲ್ಲಿರುವ ಮಳೆ ನೀರು ಕೊಯ್ಲು ವಿಧಾನದ ವಾಸ್ತವ ಪರೀಶಿಲಿಸುತ್ತಾರೆ. ಪರಿಶೀಲನೆ ವೇಳೆ ಜಲಮಂಡಳಿ ಆಯಾ ಉಪವಿಭಾಗಗಳ ಮೀಟರ್‌ ರೀಡರ್‌ಗಳು, ಎಂಜಿನಿಯರ್‌ಗಳು ನೆರವು ನೀಡಲಿದ್ದಾರೆ. ಪರಿಶೀಲನೆ ಕುರಿತು ಜಲಮಂಡಳಿ ನಿತ್ಯ ವರದಿ ಪಡೆಯಲಿದ್ದು, ಆರು ತಿಂಗಳಲ್ಲಿ ಪರಿಶೀಲನೆ ಪೂರ್ಣಗೊಳ್ಳಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

-ಜಯಪ್ರಕಾಶ್‌ ಬಿರಾದಾರ್‌

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.