ಸಿದ್ಧತೆ ನಡುವೆ ಹಾಸನ ಡೀಸಿ ವರ್ಗ
Team Udayavani, Jan 23, 2018, 6:20 AM IST
ಬೆಂಗಳೂರು: ಶ್ರವಣಬೆಳಗೊಳದ ಮಹಾ ಮಸ್ತಕಾಭಿಷೇಕದ ಸಿದ್ಧತೆ ನಡುವೆಯೇ ಹಾಸನ ಜಿಲ್ಲಾಧಿಕಾರಿ ರೋಹಿಣಿ
ಸಿಂಧೂರಿ ದಾಸರಿ ಅವರನ್ನು ವರ್ಗಾವಣೆ ಮಾಡಿರುವ ಸರ್ಕಾರದ ಕ್ರಮ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
ಫೆಬ್ರವರಿ 7ರಿಂದ 26ರವರೆಗೆ ಶ್ರವಣ ಬೆಳಗೊಳದ ಗೋಮಟೇಶ್ವರ ಸ್ವಾಮಿಗೆ ಮಹಾಮಸ್ತಕಾಭಿಷೇಕ ನಡೆಯಲಿದ್ದು,
ಅಂತಿಮ ಹಂತದ ಸಿದ್ಧತೆ ಭರದಿಂದ ಸಾಗುತ್ತಿದೆ. ಈ ಹಂತದಲ್ಲಿ ರೋಹಿಣಿ ಸಿಂಧೂರಿ ಅವರನ್ನು ಜಿಲ್ಲಾಧಿಕಾರಿ ಹುದ್ದೆಯಿಂದ ವರ್ಗಾವಣೆ ಮಾಡಿ ಡಾ. ಎಂ.ವಿ.ವೆಂಕಟೇಶ್ ಅವರನ್ನು ನೇಮಕ ಮಾಡಿರುವುದು ಚರ್ಚೆಗೆ ಕಾರಣವಾಗಿದೆ.
ಮಹಾಮಸ್ತಕಾಭಿಷೇಕ ಹಿನ್ನೆಲೆಯಲ್ಲಿ ರಸ್ತೆ ನಿರ್ಮಾಣ ಸೇರಿದಂತೆ ಮೂಲ ಸೌಕರ್ಯ ಕಾಮಗಾರಿ ತ್ವರಿತಗತಿಯಲ್ಲಿ
ನಡೆಯುತ್ತಿದೆ. ಶ್ರವಣಬೆಳಗೊಳ ಹೊರವಲಯದಲ್ಲಿ ಉಪ ನಗರಗಳ ನಿರ್ಮಾಣ ಕಾಮಗಾರಿಯೂ ಶುರುವಾಗಿದೆ.
ಗೋಮಟೇಶ್ವರ ವಿಗ್ರಹಕ್ಕೆ ಅಟ್ಟಣಿಗೆ ನಿರ್ಮಾಣ ಕಾಮಗಾರಿ ಕೊನೆಯ ಹಂತದಲ್ಲಿದೆ. ಜಿಲ್ಲಾಧಿಕಾರಿಗಳೇ ಖುದ್ದಾಗಿ
ಸಿದಟಛಿತಾ ಕಾರ್ಯಗಳ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ಕಳೆದ ಹಲವು ತಿಂಗಳುಗಳಿಂದ ರೋಹಿಣಿ ಸಿಂಧೂರಿ ಈ ಎಲ್ಲಾ ಕಾಮಗಾರಿಗಳ ಮೇಲುಸ್ತುವಾರಿ ವಹಿಸಿಕೊಂಡಿದ್ದು, ಇದೀಗ ಸಿದಟಛಿತೆ ಅಂತಿಮ ಹಂತದಲ್ಲಿದ್ದಾಗ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಿ ಹೊಸ ಜಿಲ್ಲಾಧಿಕಾರಿ ನೇಮಕ ಮಾಡಿರುವ ಸರ್ಕಾರದ ಕ್ರಮಕ್ಕೆ ಅಚ್ಚರಿ ವ್ಯಕ್ತವಾಗಿದೆ.
ಇತ್ತೀಚೆಗೆ ಸಿಎಂ ಹಾಸನ ಜಿಲ್ಲೆಗೆ ಭೇಟಿ ನೀಡಿದ್ದಾಗ ಸ್ಥಳೀಯ ಕಾಂಗ್ರೆಸ್ಸಿಗರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ
ವಿರುದ್ಧ ದೂರು ಸಲ್ಲಿಸಿದ್ದರು. ಜಿಲ್ಲಾಧಿಕಾರಿಗಳು ಜೆಡಿಎಸ್ ಪರ ಪಕ್ಷಪಾತ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು.
ಇದರ ಬೆನ್ನಲ್ಲೇ ಅವರನ್ನು ಜಿಲ್ಲಾಧಿಕಾರಿ ಸ್ಥಾನದಿಂದ ಎತ್ತಂಗಡಿ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’