ಪಾಲಿಕೆ ಸದಸ್ಯರಿಗೆ ಹೈಕೋರ್ಟ್ ನೋಟಿಸ್
Team Udayavani, Jul 2, 2019, 3:04 AM IST
ಬೆಂಗಳೂರು: ಆಸ್ತಿ ಹಾಗೂ ಸಾಲದ ವಿವರಗಳನ್ನು ಒದಗಿಸದ ವಿಚಾರಕ್ಕೆ ಸಂಬಂಧಿಸಿದಂತೆ ಬಿಬಿಎಂಪಿಯ 34 ಮಂದಿ ಸದಸ್ಯರಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಈ ಕುರಿತು ಅನಿಲ್ ಕುಮಾರ್ ಶೆಟ್ಟಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಜಿ.ನರೇಂದರ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿ ಸಂಬಂಧ ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಪ್ರಾದೇಶಿಕ ಆಯುಕ್ತರು ಹಾಗೂ ಅರ್ಜಿಯಲ್ಲಿ ಪ್ರತಿವಾದಿಗಳನ್ನಾಗಿ ಮಾಡಲಾಗಿರುವ 34 ಬಿಬಿಎಂಪಿ ಸದಸ್ಯರಿಗೆ ನೋಟಿಸ್ ಜಾರಿಗೆ ಆದೇಶಿಸಿತು.
ಕರ್ನಾಟಕ ಪೌರನಿಗಮ ಕಾಯ್ದೆ-1979ರ ಪ್ರಕಾರ ಆಸ್ತಿ ವಿವರಗಳನ್ನು ಘೋಷಿಸದ ಮತ್ತು ಕಾಲ ಕಾಲಕ್ಕೆ ಅದನ್ನು ಸಲ್ಲಿಸದ 34 ಮಂದಿ ಬಿಬಿಎಂಪಿ ಸದಸ್ಯರನ್ನು ಅನರ್ಹಗೊಳಿಸಬೇಕು ಎಂದು ಕೋರಿ ಅನಿಲ್ ಕುಮಾರ್ ಶೆಟ್ಟಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಕರ್ನಾಟಕ ಪೌರನಿಗಮ ಕಾಯ್ದೆ-1979ರ ಸೆಕ್ಷನ್ 19(1)ರ ಅನ್ವಯ ಬಿಬಿಎಂಪಿ ಕೌನ್ಸಿಲರ್ ಆಗಿ ಆಯ್ಕೆಯಾದವರು ಒಂದು ತಿಂಗಳಲ್ಲಿ ತಮ್ಮ ಹಾಗೂ ತಮ್ಮ ಕುಟುಂಬ ಸದಸ್ಯರ ಆಸ್ತಿಯ ಹಾಗೂ ಸಾಲದ ವಿವರಗಳನ್ನು ಮೇಯರ್ಗೆ ನೀಡಬೇಕು. ಅಲ್ಲದೆ, ಪ್ರತಿ ವರ್ಷವೂ ಆಸ್ತಿ ಹಾಗೂ ಸಾಲದ ವಿವರ ಘೋಷಿಸಬೇಕು.
ಆದರೆ, ಬಿಬಿಎಂಪಿಯ ಹಾಲಿ ಕೌನ್ಸಿಲರ್ಗಳು 2015ರ ಸೆ.11ರಂದು ಅಧಿಕಾರ ವಹಿಸಿಕೊಂಡಿದ್ದಾರೆ. ಅದರಂತೆ ಅವರೆಲ್ಲರೂ 2015ರ ಅಕ್ಟೋಬರ್ದೊಳಗೆ ಸಾಲದ ವಿವರ ನೀಡಬೇಕಿತ್ತು. ಮಾಹಿತಿ ಹಕ್ಕು ಕಾಯ್ದೆಯಡಿ ಪಡೆದ ಮಾಹಿತಿ ಪ್ರಕಾರ ಬಿಬಿಎಂಪಿಯ ಸುಮಾರು 34 ಕೌನ್ಸಿಲರ್ಗಳು ತಮ್ಮ ಹಾಗೂ ತಮ್ಮ ಕುಟುಂಬ ಸದಸ್ಯರ ಆಸ್ತಿ ಹಾಗೂ ಸಾಲದ ವಿವರಗಳನ್ನು ಮೇಯರ್ಗೆ ಒದಗಿಸಿಲ್ಲ ಎಂದು ಅರ್ಜಿಯಲ್ಲಿ ಹೇಳಲಾಗಿದೆ.
ಹಾಗಾಗಿ, ಈ ನಿಯಮ ಪಾಲಿಸದ ಸದಸ್ಯರು ಆ ಸ್ಥಾನದಲ್ಲಿ ಮುಂದುವರಿಯಲು ಅನರ್ಹರಾಗುತ್ತಾರೆ. ಆಸ್ತಿ ವಿವರ ಸಲ್ಲಿಸದ ಸದಸ್ಯರನ್ನು ಅವರ ಸ್ಥಾನದಲ್ಲಿ ಮುಂದುವರಿಸದಂತೆ ಕೋರಿ ಸಲ್ಲಿಸಿದ್ದ ಮನವಿಯನ್ನು ಪ್ರಾದೇಶಿಕ ಆಯುಕ್ತರು ಪರಿಗಣಿಸಿಲ್ಲ ಎಂದು ಅರ್ಜಿದಾರರು ದೂರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!