ಅನಧಿಕೃತ ಪಬ್, ಬಾರ್ ವಿರುದ್ಧ ಕ್ರಮಕ್ಕೆ ಹೈಕೋರ್ಟ್ ಆದೇಶ
Team Udayavani, Nov 22, 2019, 10:21 AM IST
ಬೆಂಗಳೂರು: ಸಾರ್ವಜನಿಕ ಮನರಂಜನಾ ತಾಣಗಳ (ಬೆಂಗಳೂರು ನಗರ) ನಿಯಂತ್ರಣ ಮತ್ತು ಪರವಾನಗಿ ನಿಯಮ 2005ರ ಅಡಿಯಲ್ಲಿ ಪರವಾನಗಿ ಪಡೆಯದ ಪಬ್ ಮತ್ತು ಬಾರ್ಗಳ ವಿರುದ್ಧ ಕಾನೂನು ಪ್ರಕಾರ ಕ್ರಮ ಜರುಗಿಸುವಂತೆ ಹೈಕೋರ್ಟ್ ಗುರುವಾರ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿತು.
ಇಂದಿರಾನಗರ ಪ್ರದೇಶದಲ್ಲಿ ಮಿತಿ ಮೀರಿದ ಶಬ್ದ ಮಾಲಿನ್ಯವಾಗುತ್ತಿದೆ ಎಂದು ಸ್ಥಳೀಯ ನಿವಾಸಿಗಳು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಹಾಗೂ ನ್ಯಾ.ಪ್ರದೀಪ್ ಸಿಂಗ್ ಯೆರೂರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ನಿರ್ದೇಶನ ನೀಡಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ನಗರದಲ್ಲಿ ಸಾರ್ವಜನಿಕ ಮನರಂಜನಾ ತಾಣಗಳ(ಬೆಂಗಳೂರು ನಗರ) ನಿಯಂತ್ರಣ ಮತ್ತು ಪರವಾನಗಿ ನಿಯಮ 2005ರ ಪಾಲನೆ ಆಗುತ್ತಿಲ್ಲ. ಸರ್ಕಾರ ಮತ್ತು ಪೊಲೀಸರು ಆ ನಿಯಮ ಕಟ್ಟುನಿಟ್ಟಾಗಿ ಜಾರಿಗೊಳಿಸಿಲ್ಲ. ಪರಿಣಾಮವಾಗಿ ಪಬ್ ಹಾಗೂ ಬಾರ್ಗಳಲ್ಲಿ ಮಧ್ಯರಾತ್ರಿಯೂ ಏರುಧ್ವನಿಯ ಸಂಗೀತ ಕೇಳಿಬರುತ್ತದೆ. ಇದರಿಂದ ಸುತ್ತಮುತ್ತಲ ನಿವಾಸಿಗಳಿಗೆ ತೀವ್ರ ತೊಂದರೆ ಆಗುತ್ತಿದೆ ಎಂದರು.
ಆಗ, 2005ರ ನಿಯಮ ಜಾರಿಗೆ ಏನೇನು ಕ್ರಮ ಕೈಗೊಳ್ಳಲಾಗಿದೆ ಎಂಬ ಬಗ್ಗೆ ಹಾಗೂ ನಿಯಮಗಳಡಿ ಪರವಾನಗಿ ಪಡೆಯದ ಪಬ್ ಮತ್ತು ಬಾರ್ಗಳ ವಿರುದ್ಧ ಕ್ರಮ ಕೈಗೊಂಡು ಅದರ ವಿವರಗಳನ್ನು ಸಲ್ಲಿಸಬೇಕು ಎಂದು ಹೇಳಿ ವಿಚಾರಣೆಯನ್ನು ಮುಂದೂಡಿತು. ಇದೇ ವೇಳೆ ಶಬ್ದ ಮಾಲಿನ್ಯ ಮಾಪಕಗಳನ್ನು ಖರೀದಿಸದ ರಾಜ್ಯ ಸರ್ಕಾರದ ವಿರುದ್ಧ ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿತು.
ನಿಶ್ಯಬ್ದ ವಲಯ ಘೋಷಣೆ: ಹೈಕೋರ್ಟ್ನ ಹಿಂದಿನ ಆದೇಶದಂತೆ ರಾಜ್ಯದಲ್ಲಿ ನಿಶ್ಯಬ್ದ ವಲಯಗಳನ್ನು ಘೋಷಣೆ ಮಾಡಿ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ ಎಂದು ಸರ್ಕಾರದ ಪರ ವಕೀಲರಾದ ವೈ. ಎಚ್. ವಿಜಯ್ ಕುಮಾರ್ ನ್ಯಾಯಪೀಠಕ್ಕೆ ತಿಳಿಸಿದರು. ಅದಕ್ಕೆ ನ್ಯಾಯಪೀಠ, ಹಾಗಿದ್ದರೆ ಅಧಿಸೂಚನೆ ಪ್ರತಿ ಹಾಗೂ ಪೂರ್ಣ ವಿವರಗಳನ್ನು ನೀಡಿ ಎಂದು ಸೂಚಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್
Nandini Ragi Ambali: ಮಾರುಕಟ್ಟೆಗೆ ಬಂತು ನಂದಿನಿ ರಾಗಿ ಅಂಬಲಿ: ಬೆಲೆ 10 ರೂ.!
ಕಾರು ಡಿಕ್ಕಿ: ಓಮ್ನಿ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡು ಬಾಲಕಿ ಸಜೀವ ದಹನ, 7 ಜನರಿಗೆ ಗಾಯ
Arrested: ನಶೆಯಲ್ಲಿ ನಿಂದನೆ; ಸ್ನೇಹಿತನ ಹತ್ಯೆಗೈದಿದ್ದ ಐವರ ಬಂಧನ
Theft: ಪ್ರಚಾರಕ್ಕೆ ತೆರಳಿದ್ದಾಗ ಮಾಜಿ ಮೇಯರ್ ಮನೆಯಲ್ಲಿ ಕಳವು
MUST WATCH
ಹೊಸ ಸೇರ್ಪಡೆ
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ