ಎಚ್‌ಡಿಕೆ-ಗೌಡರು ಸಮಯ ಸಾಧಕರು


Team Udayavani, Nov 21, 2018, 6:00 AM IST

w-29.jpg

ಬೆಂಗಳೂರು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಹಾಗೂ ಕುಮಾರಸ್ವಾಮಿ ದೇಶ ದಲ್ಲೇ ದೊಡ್ಡ  ಸಮಯ ಸಾಧಕ ರಾಜಕಾರಣಿಗಳು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ವಾಗ್ಧಾಳಿ ನಡೆಸಿದರು.

ಬಿಜೆಪಿ ರಾಜ್ಯ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಂಬಿಕೆ ದ್ರೋಹ, ವಿಶ್ವಾಸ ದ್ರೋಹಕ್ಕೆ ಮತ್ತೂಂದು ಹೆಸರು ದೇವೇಗೌಡರು ಹಾಗೂ ಕುಮಾರಸ್ವಾಮಿ. ನನ್ನನ್ನು ಮಂತ್ರಿ ಮಾಡಿ ಎಂದು ಅವರ ಮನೆ ಬಾಗಿಲಿಗೆ ಹೋಗಿದ್ದೇನಂತೆ. ಈ ರೀತಿಯ ಬೇಜವಾಬ್ದಾರಿ ಹೇಳಿಕೆ ನೀಡಲು ಅವರಿಗೆ ನಾಚಿಕೆಯಾಗಬೇಕು. ಧರ್ಮಸಿಂಗ್‌ ಅವರಿಗೆ ಕೈಕೊಟ್ಟು ನನ್ನೊಂದಿಗೆ 20 ತಿಂಗಳ ಆಡಳಿತ ನಡೆಸಲು ಬಂದಿದ್ದು ನಿಜ. ಆಮೇಲೆ ದ್ರೋಹ ಮಾಡಿದಿರಿ. 20 ತಿಂಗಳ ಆಡಳಿತ ನಡೆಸಿ ಬಳಿಕ ಕೈಕೊಟ್ಟವರು ನೀವು. ಈಗ ನನ್ನನ್ನೇ ಟೀಕೆ ಮಾಡುತ್ತೀರಾ. ಒಬ್ಬ ಮಾಜಿ ಪ್ರಧಾನಿಯಾಗಿದ್ದವರು ಆಡುವಂತಹ ಮಾತುಗಳೇ ಇವು? ಎಂದು ಕಿಡಿ ಕಾರಿದರು. ಈ ಮೂಲಕ ಕುಮಾರ ಸ್ವಾಮಿ ಅವರ ಟೀಕೆಗಳಿಗೆ ತಿರುಗೇಟು ನೀಡಿದರು. 

ತಬ್ಬಲಿಗಳಂತೆ ರಸ್ತೆಯಲ್ಲಿ ನಿಲ್ಲಬೇಕಿತ್ತು
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನ ಗೆದ್ದಿದೆ. ಅಪ್ಪ, ಮಕ್ಕಳೆಲ್ಲ ಸೇರಿ ಗೆದ್ದಿರುವುದು 38. ಇದೆಲ್ಲ ಗೊತ್ತಿದ್ದರೂ ದುರಹಂಕಾರ, ದರ್ಪದಿಂದ ಮಾತನಾಡುತ್ತಿದ್ದಾರೆ. ಕಾಂಗ್ರೆಸ್‌ ಬೆಂಬಲ ನೀಡದಿದ್ದರೆ ತಬ್ಬಲಿಗಳಂತೆ ರಸ್ತೆಯಲ್ಲಿ ನಿಲ್ಲಬೇಕಿತ್ತು ಎಂಬ ಅರಿವು ಕುಮಾರಸ್ವಾಮಿ ಅವ‌ರಿಗಿರಬೇಕು. ಕುಮಾರಸ್ವಾಮಿ ಅಧಿಕಾರಕ್ಕೆ ಬಂದ ಅನಂತರ ರಾಜ್ಯದಲ್ಲಿ 225ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 100ಕ್ಕೂ ಹೆಚ್ಚು ತಾಲೂಕು ಬರಪೀಡಿತ ಎಂದು ಘೋಷಣೆಯಾಗಿದೆ. ಸಾಲ ಮನ್ನಾ ಮಾಡಿರುವ ಮೊತ್ತ ಎಷ್ಟು? ಬರ ನಿರ್ವಹಣೆಗೆ ಬಿಡುಗಡೆ ಮಾಡಿದ ಅನುದಾನವೆಷ್ಟು ಎಂಬುದನ್ನು ಬಹಿರಂಗಪಡಿಸಲಿ ಎಂದು ಹೇಳಿದರು.

ಸಹಕಾರ ಕ್ಷೇತ್ರ ದಿವಾಳಿಯಾಗಿದೆ. ರಾಷ್ಟ್ರೀಕೃತ ಬ್ಯಾಂಕ್‌ ಸಾಲ ಮನ್ನಾ ಮಾಡಿಲ್ಲ. ರಾಷ್ಟ್ರೀಕೃತ ಬ್ಯಾಂಕ್‌ಗಳು ರೈತರಿಗೆ ನೋಟಿಸ್‌ ನೀಡುತ್ತಾ, ಜಮೀನು ಹರಾಜು ಮಾಡುತ್ತಿವೆ. ಸಾಲ ಮನ್ನಾ ಮಾಡಿರುವುದಾಗಿ ಬುರುಡೆ ಹೊಡೆದುಕೊಂಡು ಸುಳ್ಳು ಹೇಳುತ್ತಾ ಕಾಲ ಹರಣ ಮಾಡುತ್ತಿರುವುದು ಖಂಡನೀಯ. ಈ ರೀತಿಯ ರಾಜಕೀಯ ದೊಂಬರಾಟ ಬಿಟ್ಟು ರಾಜ್ಯದ ಅಭಿವೃದ್ಧಿ ಕಡೆಗೆ ಗಮನ ಕೊಡಲಿ. ಮಾತೆತ್ತಿದ್ದರೆ ರಾಜೀನಾಮೆ ಕೊಟ್ಟು ಹೋಗುತ್ತೇನೆ ಎನ್ನುವ ಕುಮಾರಸ್ವಾಮಿಯವರು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡುವ ಅವಮಾನ ಎಂಬುದು ತಿಳಿದಿರಲಿ ಎಂದು ಹೇಳಿದರು.

ಗೌಡರಿಗೆ ಸರಣಿ ಪ್ರಶ್ನೆ
“1994ರಲ್ಲಿ ರಾಮಕೃಷ್ಣ ಹೆಗಡೆಯವರಿಗೆ ಚಪ್ಪಲಿಯಲ್ಲಿ ಹೊಡೆಸಿದವರು ಯಾರು?
1993ರಲ್ಲಿ ರಾಮಕೃಷ್ಣ ಹೆಗಡೆಯವರ ಕಾಲು ಹಿಡಿದು ಜನತಾದಳದ ಅಧ್ಯಕ್ಷರಾದವರು ಯಾರು ದೇವೇಗೌಡರೇ?
1998-99ರಲ್ಲಿ ಹೆಗಡೆ ಅವರನ್ನು ಪಕ್ಷದಿಂದ ಹೊರ ಹಾಕಿದವರು ಯಾರು?
1988ರಲ್ಲಿ ಎಸ್‌.ಆರ್‌. ಬೊಮ್ಮಾಯಿ ಅವರಿಗೆ ದೇವೇಗೌಡರು ಮಾಡಿದ ಉಪಕಾರ ಏನು?’ ಎಂದು ಮಾರ್ಮಿಕವಾಗಿ ನುಡಿದರು. ಕಳೆದ ಚುನಾವಣೆಯಲ್ಲಿ ಜಿ.ಟಿ. ದೇವೇಗೌಡರನ್ನು ಕಣಕ್ಕಿಳಿಸಿ ಸಿದ್ದರಾಮಯ್ಯರನ್ನು ಸೋಲಿಸಿ ಅವಮಾನ ಮಾಡಿದರು. ಒಂದೊಮ್ಮೆ ಸಿದ್ದರಾಮಯ್ಯ ಬಾದಾಮಿ ಕ್ಷೇತ್ರದಿಂದ ಗೆಲ್ಲದಿದ್ದರೆ ಅವರ ಪರಿಸ್ಥಿತಿ, ಭವಿಷ್ಯ ಏನಾಗುತ್ತಿತ್ತೋ ಏನೋ? ಸಿದ್ದರಾಮಯ್ಯ ಅವರು ಎಲ್ಲ ಅವಮಾನ ಸಹಿಸಿಕೊಂಡು ಸಮಯಕ್ಕಾಗಿ ಕಾಯುತ್ತಿದ್ದಾರೆ ಎಂದುಕೊಂಡಿದ್ದೇನೆ ಎಂದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.