ಹಿಂದಿ ದಿವಸದ ಹೆಸರಿನಲ್ಲಿ ಕನ್ನಡಿಗರ ತೆರಿಗೆ ಹಣ ವ್ಯಯ ಮಾಡೋದು ಎಷ್ಟು ಸರಿ? HDK ಪ್ರಶ್ನೆ


Team Udayavani, Sep 14, 2022, 2:50 PM IST

ಹಿಂದಿ ದಿವಸದ ಹೆಸರಿನಲ್ಲಿ ಕನ್ನಡಿಗರ ತೆರಿಗೆ ಹಣ ವ್ಯಯ ಮಾಡೋದು ಎಷ್ಟು ಸರಿ? HDK ಪ್ರಶ್ನೆ

ಬೆಂಗಳೂರು: ಕೇಂದ್ರ ಸರಕಾರ ರಾಜ್ಯದಲ್ಲಿ ಕನ್ನಡವನ್ನು ಧಿಕ್ಕರಿಸಿ ಹಿಂದಿ ದಿವಸ ಆಚರಿಸುತ್ತಿರುವುದು, ಅದಕ್ಕೆ ರಾಜ್ಯ ಬಿಜೆಪಿ ಸರಕಾರ ಬೆಂಬಲ ನೀಡುತ್ತಿರುವುದು ಅತ್ಯಂತ ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಹಿಂದಿ ದಿವಸ ಆಚರಣೆ ಖಂಡಿಸಿ ವಿಧಾನಸೌಧ ಬಳಿಯ ಮಹಾತ್ಮ ಗಾಂಧೀಜಿ ಪ್ರತಿಮೆ ಎದುರು ಕನ್ನಡ ಶಾಲು ಧರಿಸಿ ಹಾಗೂ ಕಪ್ಪು ಪಟ್ಟಿ ಕಟ್ಟಿಕೊಂಡು ನಡೆಸಿದ ಪ್ರತಿಭಟನೆ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ಕೇಂದ್ರ ಸರಕಾರಕ್ಕೆ ಭಾಷಾ ಸಹಿಷ್ಣುತೆ ಇಲ್ಲ. ರಾಜ್ಯಗಳ ಮೇಲೆ, ಅದರಲ್ಲೂ ಕರ್ನಾಟಕದ ಮೇಲೆ ಪದೇಪದೆ ಹಿಂದಿ ಹೇರಿಕೆ ಮಾಡುತ್ತಲೇ ಇದೆ. ಪ್ರಾದೇಶಿಕ ಭಾಷೆಗಳನ್ನು, ಮುಖ್ಯವಾಗಿ ಕನ್ನಡವನ್ನು ಹತ್ತಿಕ್ಕುವ ಎಲ್ಲ ಪ್ರಯತ್ನಗಳನ್ನೂ ಮಾಡುತ್ತಿದೆ ಎಂದು ನೇರವಾಗಿ ಆರೋಪಿಸಿದರು ಮಾಜಿ ಮುಖ್ಯಮಂತ್ರಿಗಳು.

ಕೇಂದ್ರ ಸರ್ಕಾರದಿಂದ ಇವತ್ತು ಹಿಂದಿ ಆಚರಣೆ ಮಾಡುತ್ತಿರುವುದಕ್ಕೆ ನಮ್ಮ ಪಕ್ಷ ಜಾತ್ಯತೀತ ಜನತಾದಳದ ವಿರೋಧ ಇದೆ. ಸ್ವಾತಂತ್ರ್ಯ ಬಂದು 75 ವರ್ಷಗಳ ನಂತರವೂ ದೇಶದಲ್ಲಿ ನಾನಾ ಭಾಷೆ ಮಾತಾಡುವ ನಾಗರೀಕರು ಇದ್ದಾರೆ. ಈಗಾಗಲೇ ಅಮೃತ ಮಹೋತ್ಸವ ಮಾಡಿದ್ದೇವೆ. ಅದರೂ ಕೇಂದ್ರ ಬಿಜೆಪಿ ಸರಕಾರ ಕೇವಲ ಒಂದು ಭಾಷೆಯನ್ನು ರಾಜ್ಯಗಳ ಮೇಲೆ ಹೇರಿಕೆ ಮಾಡುತ್ತಿದೆ ಎಂದು ಅವರು ಕಿಡಿಕಾರಿದರು.

ಇದನ್ನೂ ಓದಿ : ಗುಜರಾತ್ ಕರಾವಳಿ ಪ್ರದೇಶದಲ್ಲಿ ಪಾಕ್ ಬೋಟ್ ವಶಕ್ಕೆ, 200 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆ

ಒಂದು ಭಾಷೆ ಒಂದು ರಾಷ್ಟ್ರ ಎಂಬ ಗೃಹ ಸಚಿವರ ಹೇಳಿಕೆ ಸರಿಯಲ್ಲ. ಕೇವಲ ಹಿಂದಿ ಒಂದು ಭಾಷೆಯಿಂದ ಭಾರತ ಒಂದಾಗಿ ಉಳಿದಿಲ್ಲ. ವಿವಿಧತೆಯಲ್ಲಿ ಏಕತೆ ಭಾರತದ ಶಕ್ತಿ. ಅದನ್ನೇ ಹಾಳು ಮಾಡಿದರೆ ದೇಶವನ್ನು ಓಡೆದಂತೆ. ಅವರು ಕೇಲ ಭಾವನಾತ್ಮಕ ವಿಚಾರ ಕೆಣಕುತ್ತಾ ದೇಶವನ್ನು ವಿಭಜಿಸಲಾಗುತ್ತಿದೆ ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಇವತ್ತು ಉತ್ತರ ಭಾರತದ ಕೆಲವು ಭಾಗದಲ್ಲಿ ಹಿಂದಿ ಇಲ್ಲ. ಅನೇಕ ರಾಜ್ಯಗಳಲ್ಲಿ ಅವರವರದೇ ಭಾಷೆ ಇದೆ. ತಮ್ಮ ಭಾಷೆಯನ್ನೇ ಮಾತನಾಡುತ್ತಾ ನೆಮ್ಮದಿಯಿಂದ ಇದ್ದಾರೆ. ಸಾವಿರಾರು ವರ್ಷಗಳ ಇತಿಹಾಸ ಇರುವ ಪ್ರಾದೇಶಿಕ ಭಾಷೆಗಳ ಕತ್ತನ್ನು ಹಿಸುಕುವ ಕೇಂದ್ರದ ನಡೆಗೆ ನಮ್ಮ ವಿರೋಧ ಇದೆ. ಕನ್ನಡದ ಬಗ್ಗೆ ಯಾಕಿಷ್ಟು ಅಸಹನೆ ಇವರಿಗೆ ಎಂದು ನನಗೆ ಅರ್ಥವಾಗುತ್ತಿಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಹಿಂದಿ ದಿವಸದ ಹೆಸರಿನಲ್ಲಿ ಕನ್ನಡಿಗರ ತೆರಿಗೆ ಹಣ ವ್ಯಯ ಮಾಡೋದು ಎಷ್ಟು ಸರಿ? ಜನ ಈಗಾಗಲೇ ನೆರೆ ಹಾವಳಿ ಯಿಂದ ತತ್ತರಿಸಿದ್ದಾರೆ. ಅವರ ನೆರವಿಗೆ ಭಾರದೆ ಹಿಂದಿ ಭಾಷೆಯ ವಿಚಾರ ಸರಕಾರಕ್ಕೆ ಮುಖ್ಯವಾಗಿದೆ. ಇದಕ್ಕೆ ಕನ್ನಡಿಗರ ಧಿಕ್ಕಾರವಿದೆ ಎಂದು ಅವರು ಕಿಡಿ ಕಾರಿದರು.

ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಜೆಡಿಎಸ್ ಶಾಸಕಾಂಗ ಪಕ್ಷದ ಮುಖ್ಯ ಸಚೇತಕ ವೆಂಕಟರಾವ್ ನಾಡಗೌಡ ಸೇರಿದಂತೆ ಪಕ್ಷದ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಜರಿದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.