ಪೊಲೀಸ್‌ ಇಲಾಖೆಗೂ ತಟ್ಟಿದ ಪ್ರಶ್ನೆಪತ್ರಿಕೆ ಬಹಿರಂಗ ಬಿಸಿ


Team Udayavani, Jan 15, 2019, 6:38 AM IST

police.jpg

ಬೆಂಗಳೂರು: ಸರ್ಕಾರಿ ಉದ್ಯೋಗಗಳ ಪ್ರಶ್ನೆಪತ್ರಿಕೆ ಬಹಿರಂಗಗೊಳಿಸುವ ಜಾಲದ ಬೇರು ಪೊಲೀಸ್‌ ಇಲಾಖೆವರೆಗೂ ಹಬ್ಬಿಕೊಂಡಿದೆ. ಭಾನುವಾರ ನಡೆದ ನಾಗರಿಕ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ (ಪಿಎಸ್‌ಐ) ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆ ನೀಡುವುದಾಗಿ ನಂಬಿಸಿ ಹಲವು ಪರೀಕ್ಷಾರ್ಥಿಗಳಿಂದ ಹಣಪಡೆದು ವಂಚಿಸಿದ ಜಾಲ ಭೇದಿಸಿರುವ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು, ಒಬ್ಬ ಅಸಿಸ್ಟೆಂಟ್‌ ಸಬ್‌ ಇನ್ಸ್‌ಪೆಕ್ಟರ್‌ (ಎಎಸ್‌ಐ) ಸೇರಿ 16 ಮಂದಿಯನ್ನು ಬಂಧಿಸಿದ್ದಾರೆ.

ಪಿಎಸ್‌ಐ ಪ್ರಶ್ನೆಪತ್ರಿಕೆ ಸೋರಿಕೆ ಮಾಡಲು ಯತ್ನಿಸಿದ ಜಾಲದಲ್ಲಿ ಇಲಾಖೆಯಲ್ಲಿನ ಕೆಲವು ಸಿಬ್ಬಂದಿ ಹಾಗೂ ಶಿಕ್ಷಕರು, ಕೋಚಿಂಗ್‌ ಸೆಂಟರ್‌ಗಳು ಶಾಮೀಲಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಅವರ ಬಂಧನಕ್ಕೆ ಕ್ರಮ ಕೈಗೊಂಡಿದ್ದು, ತನಿಖೆ ಮುಂದುವರಿದಿದೆ ಎಂದು ನಗರ ಪೊಲೀಸ್‌ ಆಯುಕ್ತ ಟಿ.ಸುನೀಲ್‌ ಕುಮಾರ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಪೊಲೀಸ್‌ ಇಲಾಖೆಯ ವೈರ್‌ಲೆಸ್‌ ವಿಭಾಗದ ಎಎಸ್‌ಐ ನಾಗರಾಜ್‌, ವಿಜಯಪುರ ಮೂಲದ ಶಿಕ್ಷಕ ಭೀಮಸಿಂಗ್‌ ಶಂಕರ್‌ ರಾಥೋಡ್‌, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ಪ್ರಮುಖ ಕಿಂಗ್‌ಪಿನ್‌ ಶಿವಕುಮಾರಯ್ಯ ಅಲಿಯಾಸ್‌ ಗುರೂಜಿ ಸಹಚರರಾದ ಬಸವರಾಜ, ಆತನ ಸಹೋದರ ಹೋಳಿಯಪ್ಪ ಬಂಧನಕ್ಕೊಳಗಾದ ಪ್ರಮುಖ ಆರೋಪಿಗಳು.

ಪ್ರಶ್ನೆಪತ್ರಿಕೆ ಪಡೆಯಲು ದಂಧೆಕೋರರ ಜತೆ ಸಂಪರ್ಕದಲ್ಲಿದ್ದ ಪರೀಕ್ಷಾರ್ಥಿಗಳಾದ ಜಯಶ್ರಿ ರಾಥೋಡ್‌, ನೀಲಮ್ಮ ಕರೆಕೊಂಡ, ಹನುಮೇಶ್‌, ಯುದುಕುಮಾರ್‌, ಕಾರ್ತಿಕ್‌, ಶಿವಕುಮಾರ್‌, ಭಾಗ್ಯವಂತ ಸಗರೆ, ಅರುಣ್‌ ರಾಮಪ್ಪ ಸೇರಿ 16 ಮಂದಿಯನ್ನು ಬಂಧಿಸಲಾಗಿದೆ. ಪ್ರಶ್ನೆ ಪತ್ರಿಕೆ ನೀಡುವುದಾಗಿ ಪರೀಕ್ಷಾರ್ಥಿಗಳಿಂದ ಸಂಗ್ರಹಿಸಿದ್ದ 41.20 ಲಕ್ಷ ರೂ. ನಗದು, ಮೂರು ಲಕ್ಷ ರೂ. ಮೌಲ್ಯದ ಚೆಕ್‌ಗಳು, ಲ್ಯಾಪ್‌ಟಾಪ್‌, ಪ್ರಿಂಟರ್‌, ಹಲವು ಅಭ್ಯರ್ಥಿಗಳ ಅಂಕಪಟ್ಟಿಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಪೊಲೀಸ್‌ ಆಯುಕ್ತರು ತಿಳಿಸಿದರು.

ಪಿಎಸ್‌ಐ ನೇಮಕಾತಿ ಪರೀಕ್ಷೆ ಪ್ರಶ್ನೆಪತ್ರಿಕೆ ನೀಡುವುದಾಗಿ ಪರೀಕ್ಷಾರ್ಥಿಗಳಿಗೆ 50ರಿಂದ 60 ಲಕ್ಷ ರೂ. ಆಮಿಷ ಒಡ್ಡಿರುವ ಜಾಲದ ಬಗ್ಗೆ ಕಳೆದ ನಾಲ್ಕೈದು ದಿನಗಳ ಹಿಂದೆ ದೊರೆತ ಖಚಿತ ಸುಳಿವಿನ ಆಧಾರದಲ್ಲಿ ಸಿಸಿಬಿ ಅಧಿಕಾರಿಗಳ ಪ್ರತ್ಯೇಕ ತಂಡಗಳು, ವಿಜಯಪುರ, ಬಾಗಲಕೋಟೆ, ನೆಲಮಂಗಲ, ಬೆಂಗಳೂರು ಸೇರಿ ವಿವಿಧ ಭಾಗಗಳಲ್ಲಿ ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಿ ಜಾಲದ ಸದಸ್ಯರು ಹಾಗೂ ಅವರೊಂದಿಗೆ ಸಂಪರ್ಕದಲ್ಲಿದ್ದ ಪರೀಕ್ಷಾರ್ಥಿಗಳನ್ನು ಬಂಧಿಸಲಾಗಿದೆ ಎಂದು ವಿವರಿಸಿದರು.

ಸಿಸಿಬಿಗೆ ಸುಳಿವು ದೊರೆತಿದ್ದು ಹೇಗೆ?: ಪ್ರಶ್ನೆಪತ್ರಿಕೆ ಸೋರಿಕೆ ಜಾಲದಲ್ಲಿ ಶಿಕ್ಷಕರು, ಕೆಲವು ಕೋಚಿಂಗ್‌ ಸೆಂಟರ್‌ಗಳು ಶಾಮೀಲಾಗಿರುವ ಬಗ್ಗೆ ಪೊಲೀಸರಿಗೆ ಅನುಮಾನವಿತ್ತು. ಈ ನಡುವೆ, ಪೊಲೀಸ್‌ ಕಾನ್‌ಸ್ಟೆಬಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಕೇಸ್‌ನಲ್ಲಿ ಆರೋಪಿ ಸೋಮಲಿಂಗಪ್ಪ ಮೇಲಿನಮನಿ ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಪಿಎಸ್‌ಐ ಪ್ರಶ್ನೆಪತ್ರಿಕೆ ಸೋರಿಕೆ ಮಾಡಲು ಕೆಲವರು ಯತ್ನಿಸಿರುವುದು ಗೊತ್ತಾಗಿತ್ತು. ಆತ ನೀಡಿದ ಮಾಹಿತಿ ಮೆರೆಗೆ ಕಾರ್ಯಚರಣೆ ನಡೆಸಿದಾಗ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.

ಜಾಲದ ಪ್ರಮುಖ ಆರೋಪಿಗಳಾದ ಬಸವರಾಜ ಹಾಗೂ ಹೋಳಿಯಪ್ಪ ಇನ್ನಿತರರು ಪಿಎಸ್‌ಐ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆಗೆ ಯತ್ನಿಸಿ ವಿಫ‌ಲರಾಗಿದ್ದಾರೆ. ಪ್ರಕರಣದಲ್ಲಿ ಪೇದೆ ರಮೇಶ್‌ ಸೇರಿದಂತೆ ಹಲವು ಮಂದಿ ಪೊಲೀಸ್‌ ಸಿಬ್ಬಂದಿ ಭಾಗಿಯಾಗಿದ್ದು, ಅವರ ಬಂಧನಕ್ಕೆ ತನಿಖೆ ಮುಂದುವರಿಸಲಾಗಿದೆ ಎಂದು ಸಿಸಿಬಿ ಹೆಚ್ಚುವರಿ ಪೊಲೀಸ್‌ ಆಯುಕ್ತ ಅಲೋಕ್‌ ಕುಮಾರ್‌ ತಿಳಿಸಿದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.