ಬಾಡಿಗೆ ವಿಚಾರಕ್ಕೆ ಜಗಳ ತೆಗೆದು ಪ್ರಯಾಣಿಕನನ್ನು ಹೊರ ದಬ್ಬಿದ 


Team Udayavani, Jun 17, 2017, 12:41 PM IST

cab-brawl.jpg

ಬೆಂಗಳೂರು: ಡ್ರಾಪ್‌ ನೀಡುವುದಾಗಿ ದಂಪತಿಯನ್ನು ಹತ್ತಿಸಿಕೊಂಡ ಕ್ಯಾಬ್‌ ಚಾಲಕನೊಬ್ಬ ಬಾಡಿಗೆ ಹಣದ ವಿಚಾರಕ್ಕೆ ಅವರೊಂದಿಗೆ ಜಗಳ ತೆಗೆದು, ಕೊನೆಗೆ ಹೊರದಬ್ಬಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 

ಜೂ.6ರಂದು ಬೆಳಗ್ಗೆ 5 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಹೆಣ್ಣೂರು ಠಾಣೆಯ ಗೃಹ ರಕ್ಷಕ ದಳದ ಸಿಬ್ಬಂದಿ ಮಧುಕರನ್‌ ವಿರುದ್ಧ ಬಾಣಸವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಮಧುಕರ್‌ ಬೆಳಗ್ಗೆಯಿಂದ ಸಂಜೆ ವರೆಗೆ ಹೆಣ್ಣೂರು ಠಾಣೆಯಲ್ಲಿ ಗೃಹರಕ್ಷಕ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ.

ರಾತ್ರಿಯಿಂದ ಮುಂಜಾನೆ ವರೆಗೆ ಕ್ಯಾಬ್‌ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಘಟನೆ ವೇಳೆ ಆರೋಪಿ ಮದ್ಯ ಸೇವಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುವ ಆಂಧ್ರಪ್ರದೇಶ ಮೂಲದ ಕೃಷ್ಣ ಎಂಬುವವರಿಗೆ ಘಟನೆಯಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆ ಏನು?: ಬಾಣಸವಾಡಿಯ ಅಪಾರ್ಟ್‌ಮೆಂಟ್‌ವೊಂದರಲ್ಲಿ ಭದ್ರತಾ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೃಷ್ಣ ಮತ್ತು ಪತ್ನಿ ಅಂಜನಮ್ಮ ಜೂ.6ರಂದು ಬೆಳಗ್ಗೆ 5 ಗಂಟೆ ಸುಮಾರಿಗೆ ಆಂಧ್ರಪ್ರದೇಶದ ಕಡಪ ಜಿಲ್ಲೆಗೆ ತೆರಳಲು ಬಾಣಸವಾಡಿಯ ಬಸ್‌ ನಿಲ್ದಾಣದ ಬಳಿ ನಿಂತಿದ್ದರು. ಈ ವೇಳೆ ಕ್ಯಾಬ್‌ನಲ್ಲಿ ಬಂದ ಮಧುಕರನ್‌, ಕೃಷ್ಣ ಅವರಿಗೆ ಡ್ರಾಪ್‌ ಬೇಕಾ ಎಂದಿದ್ದಾನೆ. ಟಿನ್‌ ಫ್ಯಾಕ್ಟರಿಗೆ ಹೋಗಬೇಕಿದ್ದು, 30 ರೂ.ಕೊಡುತ್ತೇನೆಂದು ಕೃಷ್ಣ ಹೇಳಿದ್ದಾರೆ.

ಇದನ್ನು ನಿರಾಕರಿಸಿದ ಆರೋಪಿ 200 ರೂ. ಕೊಡುವಂತೆ ಬೇಡಿಕೆ ಇಟ್ಟಿದ್ದಾನೆ. ಇದೇ ವಿಚಾರವಾಗಿ ಇಬ್ಬರ ನಡುವೆ ಚೌಕಾಸಿ ನಡೆದಿದೆ. ಕೊನೆಗೆ ಕೊಟ್ಟಷ್ಟು ಕೊಡಿ ಎಂದು ಆರೋಪಿಯು ದಂಪತಿಯನ್ನು ಕಾರಿಗೆ ಹತ್ತಿಸಿಕೊಂಡಿದ್ದಾನೆ. ಮದ್ಯದ ಅಮಲಿನಲ್ಲಿದ್ದ ಮಧುಕರನ್‌, ಮತ್ತೆ 200 ರೂ. ಕೊಡುವಂತೆ ಒತ್ತಾಯಿಸಿದ್ದಾನೆ. ಆಗ ಚಾಲಕನ ಪಕ್ಕದ ಸೀಟಿನಲ್ಲಿ ಕುಳಿತಿದ್ದ ಕೃಷ್ಣ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವಿಚಾರಕ್ಕೆ ಇಬ್ಬರ ನಡೆವೆ ಜಗಳವಾಗಿದೆ.

ಇದರಿಂದ ಕೋಪಗೊಂಡ ಆರೋಪಿ ಕಾರು ನಿಲ್ಲಿಸಿ ಕೃಷ್ಣನನ್ನು ಹೊರ ತಳ್ಳಿದ್ದಾನೆ. ಇದನ್ನು ಕಂಡ ಪತ್ನಿ ಅಂಜನಮ್ಮ ಜೋರಾಗಿ ಕೂಗಿಕೊಂಡಿದ್ದು, ಹಿಂಬದಿಯ ಕಾರಿನ ಬಾಗಿಲು ತೆರೆಯಲು ಯತ್ನಿಸಿದ್ದಾರೆ. ಆದರೆ, ಸಾಧ್ಯವಾಗಿಲ್ಲ. ಗಾಬರಿಗೊಂಡ ಆರೋಪಿ ಮಧುಕರನ್‌, ಸುಮಾರು 500 ಮೀಟರ್‌ ದೂರ ಕಾರನ್ನು ಓಡಿಸಿದ್ದಾನೆ.

ಆಯಾ ತಪ್ಪಿ ಮಿಲಿಟರಿ ವಸತಿ ನಿಲಯದ ಗೇಟ್‌ಗೆ ಡಿಕ್ಕಿಯೊಡೆದಿದ್ದಾನೆ. ಇತ್ತ ಮಹಿಳೆ ಜೋರಾಗಿ ಕೂಗಿಕೊಳ್ಳುತ್ತಿದ್ದರಿಂದ ಸ್ಥಳೀಯರು ಸ್ಥಳಕ್ಕೆ ಧಾವಿಸಿದ್ದಾರೆ. ಸಾರ್ವಜನಿಕರು ಹೆಚ್ಚಾಗುತ್ತಿದ್ದಂತೆ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ವೇಳೆ ಕೃಷ್ಣ ಅವರ ತಲೆಗೆ ಗಾಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೂರು ಪಡೆಯಲು ಹಿಂದೇಟು: ಘಟನೆ ಮಹದೇವಪುರದ ಟೀನ್‌ಫ್ಯಾಕ್ಟರಿ ಬಳಿ ನಡೆದಿದ್ದರಿಂದ ಅಂಜನಮ್ಮ ಮೊದಲಿಗೆ ಮಹದೇವಪುರ ಠಾಣೆಗೆ ದೂರು ನೀಡಲು ಹೋಗಿದ್ದಾರೆ. ಆದರೆ, ಠಾಣೆಯ ಸಿಬ್ಬಂದಿ, ಕಾರು ಹತ್ತಿದ್ದು ಬಾಸಣವಾಡಿ ಠಾಣಾ ವ್ಯಾಪ್ತಿಯಲ್ಲಿ ಹಾಗಾಗಿ ಅಲ್ಲಿಯೇ ದೂರು ನೀಡುವಂತೆ ಸೂಚಿಸಿದ್ದಾರೆ.

ಆದರೆ, ಘಟನೆ ನಿಮ್ಮ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದರು ಸಿಬ್ಬಂದಿ ಸ್ಪಂದನೆ ನೀಡಿಲ್ಲ. ಆದ್ದರಿಂದ ಬಾಣಸವಾಡಿ ಠಾಣೆಗೆ ದೂರು ನೀಡಿದ್ದಾರೆ. ಕೃಷ್ಣ ಮತ್ತು ಪತ್ನಿ ಅಂಜನಮ್ಮ ಅವರಿಗೆ ಕನ್ನಡ ಮಾತನಾಡಲು, ಬರೆಯಲು ಬರುವುದಿಲ್ಲ. ಹಾಗಾಗಿ ಘಟನೆಯ ವಿವರವನ್ನು ತೆಲುಗಿನಲ್ಲಿ ಬರೆದುಕೊಟ್ಟಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.