ಬೆಂವಿವಿ ವಿದ್ಯಾರ್ಥಿಗಳಿಗೆ ಆರೋಗ್ಯ ಕವಚ


Team Udayavani, Aug 6, 2019, 10:20 AM IST

bng-tdy-3

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯ ರಾಜ್ಯದಲ್ಲೇ ಮೊದಲ ಬಾರಿಗೆ ವಿದ್ಯಾರ್ಥಿಗಳಿಗೆ ಆರೋಗ್ಯ ವಿಮೆ ಕಲ್ಪಿಸುವ ವಿಭಿನ್ನ ಯೋಜನೆ ಜಾರಿಗೆ ಮುಂದಾಗಿದೆ. ಪ್ರಸಕ್ತ ಸಾಲಿನಿಂದ ಜ್ಞಾನಭಾರತಿ ವಿವಿಯಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುವ ಎಲ್ಲಾ 10 ಸಾವಿರ ವಿದ್ಯಾರ್ಥಿಗಳಿಗೆ ಆರೋಗ್ಯ ಕವಚ ಒದಗಿಸಲು ಸಿದ್ಧತೆ ನಡೆಸಿದೆ.

ಜ್ಞಾನಭಾರತಿ ವಿವಿ ಆವರಣದಲ್ಲಿ ಸುಮಾರು 52 ವಿವಿಧ ಕೋರ್ಸ್‌ಗಳಿದ್ದು, 8,500 ರಿಂದ 10,000 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ಎಲ್ಲಾ ವಿದ್ಯಾರ್ಥಿಗಳಿಗೆ ಆರೋಗ್ಯ ವಿಮೆ ಮಾಡಿಸಲು ವಿವಿ ಸಿದ್ಧವಾಗಿದೆ.

ವಿವಿಯಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳ ಪೈಕಿ ಬಹುತೇಕ ಗ್ರಾಮೀಣ ಭಾಗ ಮತ್ತು ಮಧ್ಯಮ ವರ್ಗದವರೇ ಆಗಿದ್ದಾರೆ. ಇವರಲ್ಲಿ ಬಹಳಷ್ಟು ವಿದ್ಯಾರ್ಥಿಗಳು ದೂರದ ಊರಿನಿಂದ ಬರುವವರಿದ್ದಾರೆ. ಕಳೆದ ವರ್ಷವಷ್ಟೇ 5 ವಿದ್ಯಾರ್ಥಿಗಳು ರಸ್ತೆ ಅಪಘಾತಕ್ಕೀಡಾಗಿದ್ದರು. ಹಾಗಾಗಿ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ವಿಮೆ ಅತಿ ಅವಶ್ಯಕವಾಗಿತ್ತು. ಈ ನಿಟ್ಟಿನಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ವಿಮೆ ಜಾರಿಗೊಳಿಸಲು ತೀರ್ಮಾನಿಸಿರುವುದಾಗಿ ವಿವಿ ಸಿಂಡಿಕೇಟ್ ಸದಸ್ಯ ಶಿವಣ್ಣ ತಿಳಿಸಿದರು.

ಈ ಹಿಂದೆ ಎರಡು ವರ್ಷಗಳಿಂದ ಆರೋಗ್ಯ ವಿಮೆ ವಿಷಯ ಚರ್ಚೆಗೆ ಬರುತ್ತಿದ್ದು, ಸೂಕ್ತ ವಿಮಾ ಕಂಪನಿಗಳು ಸಿಗದ ಕಾರಣ ವಿಳಂಬವಾಗಿತ್ತು. ಸದ್ಯ ಈ ಬಾರಿ ವಿಮಾ ಕಂಪನಿಗಳು ಹೆಚ್ಚು ಆಸಕ್ತಿ ತೋರುತಿದ್ದು, ವಿದ್ಯಾರ್ಥಿಗಳಿಂದ ಸ್ವಲ್ಪ ಮೊತ್ತ ಸಂಗ್ರಹಿಸಿ ಬಾಕಿ ಮೊತ್ತವನ್ನು ವಿಶ್ವವಿದ್ಯಾಲಯ ಅಥವಾ ವಿಮಾ ಕಂಪನಿಗಳೇ ತುಂಬಲಿವೆ. ಇದರ ದರಗಳನ್ನು ತೀರ್ಮಾನಿಸಲು ಶಿಕ್ಷಣ ವಿಭಾಗದ ಡೀನ್‌ ಪ್ರೊ. ಉಮಿಯಾ ನೇತೃತ್ವದ ಸಮಿತಿ ರಚಿಸಲಾಗಿದೆ. ಈ ಸಮಿತಿಯಲ್ಲಿ ಇನ್ನುಳಿದ ವಿಭಾಗದ ಮುಖ್ಯಸ್ಥರು ಸದಸ್ಯರಾಗಿ ತಮ್ಮ ಸಲಹೆಗಳನ್ನು ನೀಡಲಿದ್ದಾರೆ ಎಂದು ವಿವಿಯ ಕುಲಸಚಿವ ಪ್ರೊ.ಬಿ.ಕೆ.ರವಿ ತಿಳಿಸಿದರು.

ವಿಮೆಯಲ್ಲಿ ಕನಿಷ್ಠ ಒಂದು ಲಕ್ಷ ರೂ. ಕವರೇಜ್‌ ನೀಡಲು ತೀರ್ಮಾನಿಸಿದ್ದು, ಇದಕ್ಕಿಂತ ಒಳ್ಳೆಯ ಸ್ಕೀಮ್‌ ಸಿಕ್ಕಲ್ಲಿ ಅದನ್ನು ಆಯ್ಕೆ ಮಾಡಲಾಗುವುದು. ವಿಮೆ ಒಪ್ಪಂದ ಯಾವ ಕಂಪನಿ ಜತೆ ಮಾಡಿಕೊಳ್ಳಬೇಕು ಎಂಬುದು ಇನ್ನೂ ತೀರ್ಮಾನಿಸಿಲ್ಲ. ಯಾವ ಕಂಪನಿ ಹೆಚ್ಚಿನ ಸೌಲಭ್ಯ ನೀಡಲಿದೆ ಎಂಬುದನ್ನು ಪರಿಶೀಲಿಸಿ ಒಪ್ಪಂದ ಮಾಡಿಕೊಳ್ಳಲಾಗುವುದು. ಪ್ರತಿ ವರ್ಷ ಬೆಂಗಳೂರು ವಿವಿಗೆ 10ಸಾವಿರ ಮಕ್ಕಳು ವ್ಯಾಸಂಗಕ್ಕೆ ಸೇರ್ಪಡೆಯಾಗುತ್ತಾರೆ. ಇವರು ಎರಡು ವರ್ಷಗಳಲ್ಲಿ ತಮ್ಮ ಕೋರ್ಸ್‌ ಮುಗಿಸುತ್ತಾರೆ. ಹಾಗಾಗಿ ವಿಮೆ ಅವಧಿ ಎರಡು ವರ್ಷದ ಅವಧಿಗೆ ಸೀಮಿತವಾಗಿದ್ದು, ಪ್ರತಿ ವರ್ಷ 10ಸಾವಿರ ಹೊಸ ವಿಮೆಗಳು ಕಂಪನಿಗಳಿಗೆ ಸಿಗಲಿವೆ. ಇದನ್ನು ಗಮನದಲ್ಲಿಟ್ಟುಕೊಂಡು ಒಳ್ಳೆಯ ವಿಮಾ ಕಂಪನಿ ಜತೆ ಒಪ್ಪಂದ ಮಾಡಿಕೊಳ್ಳಲಾಗುವುದು ಎನ್ನುತ್ತಾರೆ ಬೆಂಗಳೂರು ವಿವಿ ಕುಲಪತಿ ಪ್ರೊ.ಕೆ.ಆರ್‌ . ವೇಣುಗೋಪಾಲ್.

 

● ಲೋಕೇಶ್‌ ರಾಮ್‌

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.