ಗಣರಾಜ್ಯೋತ್ಸವಕ್ಕೆ ಬೆಂಗಳೂರಿನಲ್ಲಿ ಭಾರೀ ಪೊಲೀಸ್ ಭದ್ರತೆ
Team Udayavani, Jan 22, 2023, 1:18 PM IST
ಬೆಂಗಳೂರು: ದೆಹಲಿಯಲ್ಲಿ ಶಂಕಿತ ಉಗ್ರರ ಬಂಧನ ಹಾಗೂ ಇತ್ತೀಚೆಗೆ ಕೆಲ ಸಂಘಟನೆಗಳ ನಿಷೇಧ ಬೆನ್ನಲ್ಲೇ ಗಣರಾಜ್ಯೋತ್ಸವ ಸಂದರ್ಭದಲ್ಲಿ ಅಹಿತಕರ ಘಟನೆ ನಡೆಯುವ ಸಾಧ್ಯತೆ ಮೇರೆಗೆ ಕೇಂದ್ರ ಗುಪ್ತಚರ ಇಲಾಖೆಗಳ ಮಾಹಿತಿ ಮೇರೆಗೆ ಪೊಲೀಸರು ಬೆಂಗಳೂರು ಸೇರಿ ಎಲ್ಲೆಡೆ ಬಿಗಿ ಬಂದೋಬಸ್ತ್ ಹಾಕಿದ್ದಾರೆ.
ಈ ಬೆನ್ನಲ್ಲೇ ಬೆಂಗಳೂರು ಸೇರಿ ರಾಜ್ಯದ ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ ಸೇರಿ ಜನನಿಬಿಡ ಸ್ಥಳಗಳಲ್ಲಿ ಹಾಗೂ ಸೂಕ್ಷ್ಮ ಪ್ರದೇಶಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ಪೊಲೀಸ್ ಸಿಬ್ಬಂದಿ ಮತ್ತು ಶ್ವಾನದಳ, ಬಾಂಬ್ ಪತ್ತೆ ದಳ ಪರಿಶೀಲನೆ ನಡೆಸುತ್ತಿವೆ. ಹೋಟೆಲ್ ಗಳು ಹಾಗೂ ಲಾಡ್ಜ್ಗಳಲ್ಲಿ ತಂಗಿರುವ ಅನುಮಾನಾಸ್ಪದ ವ್ಯಕ್ತಿಗಳು ಹಾಗೂ ಪ್ರವಾಸಿಗರ ಮಾಹಿತಿ ಕಲೆ ಸಂಗ್ರಹಿಸಲಾಗುತ್ತಿವೆ. ಅನುಮಾನಾಸ್ಪದ ವಸ್ತುಗಳು ಹಾಗೂ ಶಂಕಿತ ವ್ಯಕ್ತಿಗಳ ಬಗ್ಗೆ ಮಾಹಿತಿ ಸಿಕ್ಕರೆ ಕೂಡಲೇ ಪೊಲೀಸ್ ಸಹಾಯವಾಣಿ 112ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಕೋರಿದ್ದಾರೆ.
ನಗರದಲ್ಲಿ ತೀವ್ರ ಕಟ್ಟೆಚ್ಚರ: ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಸೂಚನೆ ಮೇರೆಗೆ ಜಂಟಿ ಪೊಲೀಸ್ ಆಯುಕ್ತ ಡಾ.ಶರಣಪ್ಪ ನೇತೃತ್ವದ ವಿಶೇಷ ತಂಡಗಳು ಶನಿವಾರ ನಗರದ ಎಲ್ಲೆಡೆ ಪರಿಶೀಲಿಸಿದೆ. ಡಾ.ಶರಣಪ್ಪ ನೇತೃತ್ವದಲ್ಲಿ 6 ಡಿಸಿಪಿಗಳು, 10 ಎಸಿಪಿಗಳು, 25 ಪೊಲೀಸ್ ಇನ್ಸ್ಪೆಕ್ಟರ್ಗಳು ಹಾಗೂ 220 ಪೊಲೀಸರು ಮತ್ತು ಶ್ವಾನದಳ, ಬಾಂಬ್ ಪತ್ತೆ ದಳಗಳು ಮೆಜೆಸ್ಟಿಕ್ ಬಸ್ ನಿಲ್ದಾಣ, ಸಿಟಿ ರೈಲ್ವೆ ನಿಲ್ದಾಣ, ಯಶವಂತಪುರ ರೈಲ್ವೆ ನಿಲ್ದಾಣ, ಶಾಂತಿನಗರ ಬಸ್ ನಿಲ್ದಾಣ, ಜಯನಗರ ಬಸ್ ಟರ್ಮಿನಲ್, ಪ್ರಮುಖ ಮೆಟ್ರೋ ನಿಲ್ದಾಣಗಳು ಹಾಗೂ ನಗರದಲ್ಲಿರುವ ವಿವಿಧ ಹೋಟೆಲ್ ಮತ್ತು ಲಾಡ್ಜ್ ಗಳಲ್ಲಿ ತಪಾಸಣೆ ನಡೆಸಲಾಗಿದೆ.
ಇದನ್ನೂ ಓದಿ:ರಾಯ್ಪುರದಲ್ಲಿ ಹೀನಾಯ ಸೋಲು: ಐಸಿಸಿ ರ್ಯಾಂಕಿಂಗ್ ನಲ್ಲಿ ಮೊದಲ ಸ್ಥಾನ ಕಳೆದುಕೊಂಡ ಕಿವೀಸ್
ಗಣರಾಜ್ಯೋತ್ಸವದವರೆಗೂ ನಿತ್ಯ ಕ್ಷಿಪ್ರ ಕಾರ್ಯಾಚರಣೆ ನಡೆಸಲಾಗುವುದು. ನಗರಕ್ಕೆ ಬರುವ ಎಲ್ಲಾ ರಸ್ತೆಗಳಲ್ಲಿ ರಾತ್ರಿ ವೇಳೆ ಹೆಚ್ಚು ಪೊಲೀಸರನ್ನು ನಿಯೋಜಿಸುವುದು ಎಂದು ಪೊಲೀಸರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ