ಮಲೆನಾಡಲ್ಲಿ ಮುಂದುವರಿದ ವರ್ಷಧಾರೆ
Team Udayavani, Jul 24, 2018, 6:00 AM IST
ಬೆಂಗಳೂರು: ಕಳೆದ ಕೆಲ ದಿನಗಳು ಅಬ್ಬರಿಸಿದ್ದ ಮಳೆ ಈಗ ಮರೆಯಾಗಿದ್ದು, ಕೇವಲ ಕರಾವಳಿ ಮತ್ತು ಮಲೆನಾಡಿಗೆ ಮಾತ್ರ ಸೀಮಿತವಾಗಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ, ಮಲೆನಾಡಿನ ಕೊಡಗು, ಶಿವಮೊಗ್ಗ, ಹಾಸನ,
ಚಿಕ್ಕಮಗಳೂರಿನ ಅಲ್ಲಲ್ಲಿ ಮುಂದಿನ 48 ಗಂಟೆಗಳಲ್ಲಿ ಚದುರಿದಂತೆ ಮಳೆ ಬೀಳುವ ನಿರೀಕ್ಷೆಯಿದೆ.
ಉಳಿದಂತೆ ದಕ್ಷಿಣದ ಮತ್ತು ಉತ್ತರ ಒಳನಾಡಿನ ಬಹುತೇಕ ಕಡೆ ಬರೀ ಮೋಡಕವಿದ ವಾತಾವರಣ ಅಥವಾ ಜಿಟಿಜಿಟಿ ಮಳೆ ಹನಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಮಧ್ಯೆ ಸೋಮವಾರ ಬೆಳಗ್ಗೆ ಉತ್ತರ ಕನ್ನಡದ ಕ್ಯಾಸಲ್ ರಾಕ್ನಲ್ಲಿ ಅತಿ ಹೆಚ್ಚು 100 ಮಿ.ಮೀ. ಮತ್ತು ತೀರ್ಥಹಳ್ಳಿಯ ಆಗುಂಬೆಯಲ್ಲಿ 90 ಮಿ.ಮೀ. ಮಳೆ ದಾಖಲಾಗಿದೆ. ದಕ್ಷಿಣ ಕನ್ನಡದ ಮಾಣಿಯಲ್ಲಿ 70 ಮಿ.ಮೀ., ಮಡಿಕೇರಿ, ಶೃಂಗೇರಿ 60 ಮಿ.ಮೀ. ಮಳೆಯಾಗಿದೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಮುಂದುವರಿದಿದೆ. ನಿರಂತರ ಮಳೆಯಿಂದ ಕೆಲ ಮನೆಗಳು ಕುಸಿದು ಹಾನಿಯಾಗಿದೆ. ಮೂಡಿಗೆರೆ ತಾಲೂಕಿನ ಬಣಕಲ್, ಜಾವಳಿ, ಮಾಗುಂಡಿ, ಕಳಸ,ಹೊರನಾಡು, ಕೊಟ್ಟಿಗೆಹಾರದಲ್ಲಿ ಸತತ ಮಳೆಯಾಗುತ್ತಿದೆ. ಚಾರ್ಮಾಡಿ ಘಾಟಿಯಲ್ಲಿ ಮಂಜು ಮುಸುಕಿದ ವಾತಾವರಣ ನಿರ್ಮಾಣವಾಗಿದೆ.
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನಾದ್ಯಂತ ಮತ್ತೆ ಮಳೆ ಆರಂಭಗೊಂಡಿದ್ದು, ತುಂಗಾ ಹಾಗೂ ಮಾಲತಿ ನದಿಯಲ್ಲಿ ನೀರಿನ ಪ್ರಮಾಣ ಗಣನೀಯವಾಗಿ ಏರತೊಡಗಿದೆ. ಆಗುಂಬೆ ಭಾಗದಲ್ಲಿ 2 ದಿನಗಳಿಂದ ಭಾರೀ ಗಾಳಿ-ಮಳೆಯಾಗುತ್ತಿದ್ದು
ಅಡಿಕೆ ತೋಟಗಳಿಗೆ ಅಪಾರ ಹಾನಿಯಾಗಿದೆ.
ರೈಲು ಹಳಿ ಮೇಲೆ ಭೂಕುಸಿತ: ಸಕಲೇಶಪುರ ತಾಲೂಕಿನ ಆಲುವಳ್ಳಿ ಸಮೀಪ ಸಕಲೇಶಪುರ-ಸುಬ್ರಹ್ಮಣ್ಯ ರೈಲು ಮಾರ್ಗದ ಹಳಿಯ ಮೇಲೆ ಮಣ್ಣು ಕುಸಿದಿದ್ದನ್ನು ರೈಲ್ವೆ ಸಿಬ್ಬಂದಿ ಸತತ ಕಾರ್ಯಾಚರಣೆ ಮುಖಾಂತರ ತೆರವುಗೊಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
Temperature; ರಾಜ್ಯದಲ್ಲಿ ಮತ್ತೆ ದಿಢೀರ್ ಏರಿದ ತಾಪಮಾನ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ
ಮಂಡ್ಯದಲ್ಲಿ ಐಸ್ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ
Panaji: ಸರಕಾರದ ಆ್ಯಪ್ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ