ನಗರದಲ್ಲಿ ಭಾರೀ ಮಳೆ; ನಾಗರಿಕರ ಪರದಾಟ


Team Udayavani, Feb 10, 2019, 6:34 AM IST

nagarada.jpg

ಬೆಂಗಳೂರು: ತಮಿಳುನಾಡು ಹಾಗೂ ದಕ್ಷಿಣ ಒಳನಾಡು ಭಾಗದಲ್ಲಿ (ಕಡಿಮೆ ಒತ್ತಡದ ತಗ್ಗು) ಟ್ರಫ್ ಉಂಟಾದ ಪರಿಣಾಮ ರಾಜಧಾನಿಯಲ್ಲಿ ಶನಿವಾರ ಸತತ ಮೂರು ಗಂಟೆಗಳ ಕಾಲ ಸುರಿದ ಮಳೆಗೆ ಸಾರ್ವಜನಿಕರು ಪರದಾಡಿದರು.

ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಆರಂಭವಾದ ಮಳೆ ಸಂಜೆ 7.30ವರೆಗೆ ಭರ್ಜರಿ ಮಳೆ ಸುರಿದು ನಗರವನ್ನು ತಂಪಾಗಿಸಿದೆ. ಕೆಲ ದಿನಗಳಿಂದ ತಾಪಮಾನ ನಿಧಾನವಾಗಿ 32 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆ ಕಾಣುತ್ತಿದ್ದು, ಈ ಅಂಶವೂ ಕೂಡಾ ಮಳೆ ಸುರಿಯಲು ಕಾರಣವಾಗಿದೆ.

ಸಂಜೆ ವೇಳೆ ಮಳೆ ಸುರಿದಿದ್ದರಿಂದ ಕಚೇರಿಗಳಿಂದ ಮನೆ ಸೇರುವವರು, ಕಾಲೇಜು ವಿದ್ಯಾರ್ಥಿಗಳು, ಬೀದಿ ಬದಿ ವ್ಯಾಪಾರಸ್ಥರು ಸೇರಿದಂತೆ ನಗರದ ಜನತೆ ತೊಂದರೆ ಅನುಭವಿಸುವಂತಾಯಿತು. ಮುಖ್ಯವಾಗಿ ಪುರಭವನ, ಮೈಸೂರು ರಸ್ತೆ ಜಂಕ್ಷನ್‌, ಯಶವಂತಪುರ, ಮೆಜೆಸ್ಟಿಕ್‌, ಚಾಲಕ್ಯ ಸರ್ಕಲ್‌ ಸೇರಿದಂತೆ ಹಲವೆಡೆ ಸಿಗ್ನಲ್‌ಗ‌ಳಲ್ಲಿ ವಾಹನ ದಟ್ಟಣೆ ಕಂಡುಬಂತು. 

ರಸ್ತೆ ಹಾಗೂ ಪಾದಾಚಾರಿ ಮಾರ್ಗದಲ್ಲಿನ ಗುಂಡಿಗಳಲ್ಲಿ ನೀರುತುಂಬಿ, ಮಾರ್ಗ ಕಾಣದಂತಾಗಿ ವಾಹನ ಸವಾರರು ಮತ್ತು ಪಾದಚಾರಿಗಳು ತೊಂದರೆಗೀಡಾದರು. ಓಕಳಿಪುರ ಕೆಳಸೇತುವೆ, ನಾಯಂಡಹಳ್ಳಿ, ಮಂತ್ರಿ ಮಾಲ್‌ ಎದುರು, ಮೆಜೆಸ್ಟಿಕ್‌ ಸೇರಿದಂತೆ ಹಲವು ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದ್ದು ವಾಹನ ಸವಾರರು ಪರದಾಡಿದರು. ಜತೆಗೆ ತಗ್ಗು ಪ್ರದೇಶಗಳಿರುವ ಬಡಾವಣೆಗಳ ಕೆಲ ಮನೆಗಳಿಗೆ ನೀರು ನುಗ್ಗಿದೆ. ಜಯನಗರ ಮೆಟ್ರೋ ನಿಲ್ದಾಣದ ಬಳಿ ನಿಲ್ಲಿಸಿದ್ದ ಕಾರಿನ ಒಳಗೆ ನೀರು ನುಗ್ಗಿದ ಘಟನೆ ನಡೆದಿದೆ.

9ಕ್ಕೂ ಹೆಚ್ಚು ಮರಗಳು ಧರೆಗೆ: ಜೋರಾಗಿ ಸುಳಿದ ಮಳೆಯಿಂದಾಗಿ ಗಾಂಧಿನಗರದಲ್ಲಿ 2, ಎಂ.ಜಿ.ರಸ್ತೆ, ಬಸವನಗುಡಿ, ನಿಮಾನ್ಸ್‌ ಆಸ್ಪತ್ರೆ, ಕೆ.ಆರ್‌.ರಸ್ತೆ, ಕೋರಮಂಗಲ, ವಿಜಯನಗರ, ಬಸವೇಶ್ವರ ನಗರ, ಮಹಾಲಕ್ಷ್ಮೀ ಬಡಾವಣೆಯಲ್ಲಿ ತಲಾ 1 ಮರ ಸೇರಿದಂತೆ 9ಕ್ಕೂ ಹೆಚ್ಚು ಮರಗಳು ಧರೆಗುರುಳಿವೆ. ಮರಗಳ ತೆರವು ಕಾರ್ಯಕ್ಕೆ ಬಿಬಿಎಂಪಿ ಅರಣ್ಯ ವಿಭಾಗದ ಸಿಬ್ಬಂದಿ ಧಾವಿಸಿದ್ದು, ರಾತ್ರಿವರೆಗೂ ತೆರವು ಕಾರ್ಯಾಚರಣೆ ನಡೆಸಿದರು.

ಮಳೆಯ ಪ್ರಮಾಣ: ಸಂಪಂಗಿರಾಮ ನಗರದಲ್ಲಿ ಅತೀ ಹೆಚ್ಚು ಮಳೆಯಾಗಿದ್ದು, ಮಳೆಯ ಪ್ರಮಾಣ 67 ಮಿ.ಮೀ. ದಾಖಲಾಗಿದೆ. ಬಸವನಗಡಿ 66 ಮಿ.ಮೀ., ಪಟ್ಟಾಭಿರಾಮನಗರ 58 ಮಿ.ಮೀ., ಹೊಯ್ಸಳನಗರ 43 ಮಿ.ಮೀ., ಲಾಲ್‌ಬಾಗ್‌ 38 ಮಿ.ಮೀ., ಎಚ್‌ಎಸ್‌ಆರ್‌ ಲೇಔಟ್‌ 36 ಮಿ.ಮೀ., ಕೊನೇನ ಅಗ್ರಹಾರ 24 ಮಿ.ಮೀ., ಬೆಳ್ಳಂದೂರು 17 ಮಿ.ಮೀ.,

ರಾಜರಾಜೇಶ್ವರಿ ನಗರ 16 ಮಿ.ಮೀ., ಅಟ್ಟೂರು 13 ಮಿ.ಮೀ., ಯಲಹಂಕ, ಸಾರಕ್ಕಿ 12 ಮಿ.ಮೀ., ಬೊಮ್ಮನಹಳ್ಳಿ 10 ಮಿ.ಮೀ. ಮಳೆಯ ಬಿದ್ದಿರುವುದಾಗಿ ದಾಖಲಾಗಿದೆ. ಉಳಿದಂತೆ ತಾವರೆಕೆರೆ, ಯಶವಂತಪುರ, ಕೆಂಗೇರಿ, ಕೋರಮಂಗಲ, ಬಿಳೇಕಹಳ್ಳಿ, ದೊರೆಸಾನಿಪಾಳ್ಯ, ಅಗ್ರಹಾರ ದಾಸರಹಳ್ಳಿ, ರಾಜಮಹಲ್‌ ಗುಟ್ಟಹಳ್ಳಿ, ದಯಾನಂದ ನಗರ ಸೇರಿದಂತೆ ವಿವಿಧೆಡೆ ತುಂತುರು ಮಳೆ ಬಿದ್ದಿದೆ.

ಮಳೆ ಮುಂಜಾಗ್ರತೆಗೆ ಡಿಸಿಎಂ ಸೂಚನೆ: ನಗರದಲ್ಲಿ ಅಕಾಲಿಕ ಮಳೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ನಗರಾಭಿವೃದ್ಧಿ ಸಚಿವ ಡಾ.ಜಿ.ಪರಮೇಶ್ವರ್‌ ಸೂಚಿಸಿದ್ದಾರೆ. ಶನಿವಾರ ಸಂಜೆ ದಿಢೀರ್‌ ಮಳೆ ಆರಂಭವಾದ ಹಿನ್ನೆಲೆಯಲ್ಲಿ ನಗರದ ಕೆಲ ರಸ್ತೆಗಳಲ್ಲಿ ದಟ್ಟಣೆ ಉಂಟಾಗಿತ್ತು.

ಜತೆಗೆ 10ಕ್ಕೂ ಹೆಚ್ಚು ಕಡೆಗಳಲ್ಲಿ ಮರಗಳು ಉರುಳಿದರಿಂದ ಜನರು ತೊಂದರೆ ಅನುಭವಿಸುವಂತಾಗಿತ್ತು. ನಗರದಲ್ಲಿ ಇನ್ನೂ ಎರಡು ದಿನಗಳು ಮಳೆಯಾಗುವ ಸಾಧ್ಯತೆಯಿರುವುದರಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದ್ದಾರೆ. ಇದರೊಂದಿಗೆ ಪಾಲಿಕೆಯ ನಿಯಂತ್ರಣ ಕೊಠಡಿಗಳು 24 ಗಂಟೆಗಳು ಕಾರ್ಯನಿರ್ವಹಿಸುವಂತೆ ಹಾಗೂ ಸಮಸ್ಯೆಗಳಿಗೆ ಪರಿಹಾರ ತಂಡಗಳು ಶೀಘ್ರ ತೆರಳಲು ವ್ಯವಸ್ಥೆ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.