![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ರಾಜ್ಯದಲ್ಲಿ ಮತ್ತಷ್ಟು ಮಳೆ ನಿರೀಕ್ಷೆ
Team Udayavani, Aug 18, 2018, 6:05 AM IST
![heavy-rainfallcoastal.jpg](https://www.udayavani.com/wp-content/uploads/2018/08/18/heavy-rainfallcoastal.jpg)
ಬೆಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ ಇಳಿಮುಖವಾಗಿದೆ. ಇದರ ಬೆನ್ನಲ್ಲೇ ಬಂಗಾಳ ಕೊಲ್ಲಿಯ ವಾಯವ್ಯದಲ್ಲಿ ವಾಯುಭಾರ
ಕುಸಿತದ ಲಕ್ಷಣಗಳು ಕಂಡುಬಂದಿದ್ದು, ಮತ್ತೆ ಆತಂಕ ಸೃಷ್ಟಿಸಿದೆ.
ಬಂಗಾಳಕೊಲ್ಲಿಯ ವಾಯವ್ಯದಲ್ಲಿ 19 ರಂದು ವಾಯುಭಾರ ಕುಸಿತದ ಮುನ್ಸೂಚನೆ ಕಂಡು ಬಂದಿದೆ. ಇದರ ಪ್ರಭಾವ ಕರಾವಳಿ ಮತ್ತು ಘಟ್ಟಪ್ರದೇಶಗಳಲ್ಲಿ ಆಗಲಿದೆ.
ಹೀಗಾಗಿ, ಅಲ್ಲಿ ಮತ್ತೆ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕಚೇರಿಯ
ಅಧಿಕಾರಿಗಳು ತಿಳಿಸಿದ್ದಾರೆ.
ಕಡಿಮೆ ಒತ್ತಡದ ತಗ್ಗು (ಟ್ರಫ್) ಮತ್ತು ಪಶ್ಚಿಮ ದಿಕ್ಕಿನಿಂದ ತೀವ್ರ ಗಾಳಿ ಬೀಸುತ್ತಿದ್ದು ದರಿಂದ ಕರಾವಳಿ, ಮಲೆನಾಡು ಅದರಲ್ಲೂ ಕೊಡಗಿನಲ್ಲಿ ಮಳೆ ಆರ್ಭಟ ತೀವ್ರವಾಗಿತ್ತು. ಆದರೆ, ಶುಕ್ರವಾರ ತುಸು ತಗ್ಗಿತ್ತು. ಶನಿವಾರ ಕೂಡ ಮಳೆ ಬಹುತೇಕ ಇಳಿಮುಖ ಆಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
873 ಜನರ ರಕ್ಷಣೆ: ಇನ್ನು ವರುಣನ ರೌದ್ರಾವತಾರಕ್ಕೆ ನಲುಗಿರುವ ಕೊಡಗಿನಲ್ಲಿ ಇಡೀ ರಕ್ಷಣಾ ಪಡೆಯೇ ಬೀಡು ಬಿಟ್ಟಿದ್ದು,
ಇದುವರೆಗೆ 873 ಜನರನ್ನು ರಕ್ಷಿಸಿದೆ. 20ಕ್ಕೂ ಅಧಿಕ ಗಂಜಿಕೇಂದ್ರಗಳನ್ನು ತೆರೆದಿದ್ದು, ಜನರ ರಕ್ಷಣಾ ಕಾರ್ಯ ಮುಂದುವರಿದಿದೆ. 60 ಸೈನಿಕರನ್ನು ಒಳಗೊಂಡ ಭಾರತೀಯ ಸೇನೆಯ ಒಂದು ತುಕಡಿ, 73 ಬೋಟ್ಗಳು ಮತ್ತಿತರ ಉಪಕರಣಗಳನ್ನು ಹೊಂದಿದ ಎಂಜಿನಿಯರಿಂಗ್ ಕಾರ್ಯಪಡೆ, 12 ಜನರ ನೌಕಾಪಡೆಯ ತಂಡ, ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಯ ತಲಾ 30 ಜನರ ತಂಡಗಳು ಮತ್ತು ಬೋಟ್ಗಳು, 45 ಜನರ ನಾಗರಿಕ ರಕ್ಷಣಾ ಪಡೆ, 200 ಜನರ ಅಗ್ನಿಶಾಮಕ ದಳದ ಸಿಬ್ಬಂದಿ, ಎಂ-17 ಹೆಲಿಕಾಪ್ಟರ್ ನೊಂದಿಗೆ ಭಾರತೀಯ ವಾಯುಸೇನೆಯ ಒಂದು ತಂಡ ಕೂಡ ಬಂದಿಳಿದಿದೆ.
ಕೇವಲ ಎರಡು ದಿನಗಳಲ್ಲಿ (ಆಗಸ್ಟ್ 14 ಮತ್ತು 15) ಕೊಡಗಿನಲ್ಲಿಯ ಮಳೆಗೆ ಆರು ಜನ ಬಲಿಯಾಗಿದ್ದು, 845 ಮನೆಗಳು ಜಖಂಗೊಂಡಿವೆ. 98 ರಸ್ತೆಗಳು, 58 ಸೇತುವೆಗಳು, 243 ಸರ್ಕಾರಿ ಕಟ್ಟಡಗಳು ಕುಸಿದಿವೆ. 3006 ವಿದ್ಯುತ್ ಕಂಬಗಳು ಮತ್ತು ಟ್ರಾನ್ಸ್ಫಾರ್ಮರ್ಗಳು ಕೊಚ್ಚಿಹೋಗಿವೆ.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ](https://www.udayavani.com/wp-content/uploads/2024/07/flood-150x68.jpg)
Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ
![Shalini Rajneesh ನೂತನ ಸಿಎಸ್; ಪತಿ ರಜನೀಶ್ ಗೋಯಲ್ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ](https://www.udayavani.com/wp-content/uploads/2024/07/Shalini-Rajneesh-150x94.jpg)
Shalini Rajneesh ನೂತನ ಸಿಎಸ್; ಪತಿ ರಜನೀಶ್ ಗೋಯಲ್ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.