ವರುಣನ ಆಕ್ರೋಶಕ್ಕೆ ರಾಜ್ಯದ ವಿವಿಧೆಡೆ 7 ಮಂದಿ ಬಲಿ


Team Udayavani, Aug 17, 2018, 6:15 AM IST

ban17081814medn.jpg

ಬೆಂಗಳೂರು: ಮಲೆನಾಡು, ಕೊಡಗು, ಕರಾವಳಿ ಭಾಗದಲ್ಲಿ ಮುಂಗಾರು ಅಬ್ಬರಿಸುತ್ತಿದ್ದು, ಮಳೆ ಸಂಬಂಧಿ ಅವಘಡಗಳಲ್ಲಿ 7 ಮಂದಿ ಅಸುನೀಗಿದ್ದಾರೆ.

ಮಡಿಕೇರಿ ಸಮೀಪ ಕಾಟಕೇರಿಯಲ್ಲಿ ಗುಡ್ಡ ಕುಸಿದು ಅದರ ಅವಶೇಷಗಳಡಿ ಸಿಲುಕಿ ಯಶವಂತ್‌, ವೆಂಕಟರಮಣ ಹಾಗೂ ಪವನ್‌ ಎಂಬುವರು ಮೃತಪಟ್ಟಿದ್ದಾರೆ. ಯತೀಶ್‌ ಎಂಬುವರು ಗಾಯಗೊಂಡಿದ್ದಾರೆ. ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಹಿತ್ತಲಶಿರೂರ ಗ್ರಾಮದಲ್ಲಿ ಮನೆಯ ಗೋಡೆ ಕುಸಿದ ಪರಿಣಾಮ ಪಕ್ಕದ ಮನೆಯಲ್ಲಿ ಮಲಗಿದ್ದ ಲಕ್ಷ್ಮೀಬಾಯಿ ಪ್ರಭು ವಡ್ಡರ (30) ಹಾಗೂ ಅವರ ಪುತ್ರಿಯರಾದ ಅಂಬಿಕಾ ಪ್ರಭು (11), ಯಲ್ಲಮ್ಮ ಪ್ರಭು ವಡ್ಡರ (9) ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 

ಲಕ್ಷ್ಮೀಬಾಯಿ ಪತಿ ಪ್ರಭು ವಡ್ಡರ ಗಾಯಗೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನಲ್ಲಿ ಮನೆಯ ಗೋಡೆ ಕುಸಿದು ಕೂಲಿ ಕಾರ್ಮಿಕ ಆಯುಬ್‌ ಎಂಬುವರ ಪುತ್ರ ಮಸೂದ್‌ (5) ಎಂಬ ಮಗು ಮೃತಪಟ್ಟಿದೆ. ಜಿಲ್ಲಾ ಧಿಕಾರಿ ದಯಾನಂದ್‌ ಭೇಟಿ ನೀಡಿ, ಸರ್ಕಾರದ ವತಿಯಿಂದ ಮೃತ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರದ ಚೆಕ್‌ ವಿತರಿಸಿದರು. ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಚಿಕ್ಕಬಿಳ್ಳಿಯಲ್ಲಿ ಕಾಲು ಜಾರಿ ಹೊಂಡಕ್ಕೆ ಬಿದ್ದು ಸುನೀಲ್‌ ರುಜಾರ ಸಿದ್ದಿ (27) ಎಂಬ ಯುವಕ ಮೃತಪಟ್ಟಿದ್ದಾನೆ.

ಮಡಿಕೇರಿ ಸಮೀಪದ ಕಾಂಡನಕೊಲ್ಲಿ ಹಾಲೇರಿ ವಿಭಾಗದಲ್ಲಿ ಧರೆ ಕುಸಿದು 200ಕ್ಕೂ ಹೆಚ್ಚು, ವೀರಾಜಪೇಟೆ ತಾಲೂಕಿನ ದೇವಮಾನಿಯಲ್ಲಿ ಮೂವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮೂವತ್ತೂಕ್ಲು ಗ್ರಾಮದಲ್ಲಿ ಮನೆ ಮೇಲೆ ಗುಡ್ಡ ಕುಸಿದು ಮೂವರು ಗಾಯಗೊಂಡಿದ್ದಾರೆ. ಸುಬ್ರಹ್ಮಣ್ಯ ಸಮೀಪ ಗೋಳಾÂಡಿಯಲ್ಲಿ ಗುಡ್ಡ ಕುಸಿದು ಗಂಗಮ್ಮ ಎಂಬುವರ ಎರಡೂ ಕಾಲುಗಳು ತುಂಡಾಗಿವೆ.

ನದಿಗಳಲ್ಲಿ ಪ್ರವಾಹ:
ಜಲಾನಯನ ಪ್ರದೇಶಗಳಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಲಿಂಗನಮಕ್ಕಿ ಜಲಾಶಯದ 7 ಗೇಟ್‌ಗಳ ಮೂಲಕ 10 ಸಾವಿರ ಕ್ಯೂಸೆಕ್‌, ಕಬಿನಿ ಜಲಾಶಯದಿಂದ 70 ಸಾವಿರ, ಹಾರಂಗಿಯಿಂದ 36,866 ಕ್ಯೂಸೆಕ್‌, ಹೇಮಾವತಿಯಿಂದ 49,750 ಕ್ಯೂಸೆಕ್‌, ಹಿಪ್ಪರಗಿ ಜಲಾಶಯದಿಂದ 93 ಸಾವಿರ, ತುಂಗಭದ್ರಾ ಜಲಾಶಯದಿಂದ 2.20 ಲಕ್ಷ ಕ್ಯೂಸೆಕ್‌, ಕೆಆರ್‌ಎಸ್‌ನಿಂದ 1.5 ಲಕ್ಷ ಕ್ಯೂಸೆಕ್‌ ನೀರನ್ನು ಹೊರಕ್ಕೆ ಬಿಡಲಾಗಿದೆ. ಪಯಸ್ವಿನಿ, ತುಂಗಾ, ಶರಾವತಿ, ಕಾವೇರಿ, ತುಂಗಭದ್ರಾ, ಕುಮಾರಧಾರಾ ನದಿಯಲ್ಲಿ ನೆರೆ ನೀರು ಉಕ್ಕಿ ಹರಿಯುತ್ತಿದ್ದು, ನದಿ ಪಾತ್ರದ ಪ್ರದೇಶಗಳು ಜಲಾವೃತವಾಗಿವೆ.

ಸೋಮವಾರಪೇಟೆ ತಾಲೂಕಿನ ಶಿರಂಗಳ್ಳಿಯ 150ಕ್ಕೂ ಹೆಚ್ಚು ಮಂದಿ ಗ್ರಾಮ ತೊರೆದಿದ್ದು, ಸಮೀಪದ ತಂಗುದಾಣದಲ್ಲಿ ಆಶ್ರಯ ಪಡೆದಿದ್ದಾರೆ. ಮಡಿಕೇರಿ ಸಮೀಪದ ಕಾಲೂರು ದ್ವೀಪದಂತಾಗಿದೆ. ವೀರಾಜಪೇಟೆ ತಾಲೂಕಿನ ಕರಡಿಗೋಡುವಿನಲ್ಲಿ ಮನೆಗಳು ಮುಳುಗುವ ಹಂತ ತಲುಪಿದ್ದು, ನಿವಾಸಿಗಳನ್ನು ತೆಪ್ಪದ ಮೂಲಕ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಕೊಡಗಿನ ಶಾಲೆಗಳಿಗೆ 2 ದಿನ, ಶೃಂಗೇರಿ ತಾಲೂಕಿನ ಶಾಲೆಗಳಿಗೆ 1 ದಿನ ರಜೆ ಘೋಷಿಸಲಾಗಿದೆ. ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನದ ಹದಿನಾರು ಕಾಲು ಮಂಟಪ, ಸ್ನಾನಘಟ್ಟಗಳು ಮುಳುಗಡೆಯಾಗಿವೆ. ಕಂಪ್ಲಿ ತಾಲೂಕಿನ 7 ಗ್ರಾಮಗಳು ನಡುಗಡ್ಡೆಗಳಾಗಿವೆ. ಗುಡ್ಡ ಕುಸಿಯುತ್ತಿರುವುದರಿಂದ ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ ಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಧ ಹೇರಲಾಗಿದೆ.

ಸಂಚಾರ ಸ್ಥಗಿತ:
ಕಂಪ್ಲಿ-ಗಂಗಾವತಿ, ಕಂಪ್ಲಿ-ಸಿರಗುಪ್ಪ, ಹೂವಿನಹಡಗಲಿ ತಾಲೂಕಿನ ಮಕರಬ್ಬಿ-ಬ್ಯಾಲಹುಣಿ, ಮೈಸೂರು-ನಂಜನಗೂಡು, ಸುಳ್ಯ-ಸಂಪಾಜೆ, ಮಡಿಕೇರಿ-ಮಂಗಳೂರು, ಮಡಿಕೇರಿ-ಸೋಮವಾರಪೇಟೆ-ಸಕಲೇಶಪುರ, ಕುಶಾಲನಗರ-ಹಾಸನ, ವೇಣೂರು-ಮೂಡಬಿದಿರೆ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ.

ಟಾಪ್ ನ್ಯೂಸ್

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

32

Politics: ಟಿಕೆಟ್‌ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.