ಬೆಂಗಳೂರಿನಲ್ಲಿ ಮತ್ತೆ ವರುಣನ ಆರ್ಭಟ,ತೀವ್ರ ಆತಂಕ
Team Udayavani, Sep 1, 2017, 8:53 AM IST
ಬೆಂಗಳೂರು: ಕೆಲದಿನಗಳಿಂದ ಸುಮ್ಮನಿದ್ದ ಮಳೆರಾಯ ಗುರುವಾರ ರಾತ್ರಿ ರಾಜಧಾನಿಯಲ್ಲಿ ತನ್ನ ಆರ್ಭಟ ತೋರಿದ್ದಾನೆ. ರಾತ್ರಿ 10 ಗಂಟೆ ಬಳಿಕ ಗುಡುಗು ಸಿಡಿಲಿನೊಂದಿಗೆ ಶುರುವಾದ ಧಾರಾಕಾರ ಮಳೆ ಹಲವು ಗಂಟೆಗಳ ಕಾಲ ನಿರಂತರವಾಗಿ ಸುರಿದಿದೆ.
ಮೆಜೆಸ್ಟಿಕ್, ಎಂಜಿ ರಸ್ತೆ, ಮಲ್ಲೇಶ್ವರಂ, ಹೆಬ್ಟಾಳ ಕಸ್ತೂರ ಬಾ ರಸ್ತೆ , ಲಾಲ್ಭಾಗ್ ವಿಲ್ಸನ್ ಗಾರ್ಡ್ನ್ ಸೇರಿದಂತೆ ನಗರದ ಹಲವು ಭಾಗಗಳಲ್ಲಿ ಸುರಿದ ಮಳೆಯಿಂದಾಗಿ ಕೆಲವೆಡೆ ಅಂಡರ್ ಪಾಸ್ಗಳಲ್ಲಿ ನೀರು ತುಂಬಿ ಹರಿಯಿತು. ಜೊತೆಗೆ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ಇನ್ನಿಲ್ಲದ ಸಮಸ್ಯೆ
ಉಂಟಾಯಿತು.
ಕೆ ಆರ್ ಸರ್ಕಲ್ನಲ್ಲಿ ನೀರು ತುಂಬಿದ ರಸ್ತೆಯಲ್ಲಿ ಸಾಗಿ ಅಪಾಯಕ್ಕೆ ಸಿಲುಕಿ ಪರದಾಡುತ್ತಿದ್ದ ಕಾರು ಚಾಲಕನನ್ನು ಅಗ್ನಿ ಶಾಮಕ ಸಿಬಂದಿಗಳು ರಕ್ಷಿಸಿದ್ದಾರೆ.
ಭಾರೀ ಮಳೆಯಿಂದ ಪ್ರಮುಖ ರಸ್ತೆಗಳು ಜಲಾವೃತಗೊಂಡು ವಾಹನಗಳ ಸುಗಮ ಸಂಚಾರಕ್ಕೆ ಅಡತಡೆ ಉಂಟಾಯಿತು. ವಾಹನ ಸವಾರರು ತೀವ್ರ ಪರದಾಡುವಂತಾಯಿತು. ಬಿರುಗಾಳಿ ಸಹಿತ ಮಳೆಗೆ ಹಲವು ಕಡೆ ಮರದ ಕೊಂಬೆಗಳು ಮುರಿದು ಬಿದ್ದಿವೆ.
ಇನ್ನು ಗಣೇಶನ ಉತ್ಸವ ಆಯೋಜಿಸಿದ್ದ ಕೆಲ ಆಚರಣ ಸಮಿತಿಗಳು ಗುರುವಾರ ಗಣೇಶನ ಮೂರ್ತಿ ವಿಸರ್ಜನೆಗೆ ವ್ಯವಸ್ಥೆ ಮಾಡಿಕೊಂಡಿದ್ದವು. ಆದರೆ, ದಿಢೀರ್ ಸುರಿದ ಮಳೆಯಿಂದಾಗಿ ಸ್ವಲ್ಪ ಫಜೀತಿ ಉಂಟಾಯಿತು.
ಭಾರಿ ಮಳೆ ಸಾಧ್ಯತೆ: ಬೆಂಗಳೂರು, ಮೈಸೂರು ಹಾಸನ, ಕೊಡಗು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ಮೂರು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಯಿದೆ ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Kasaragod ವಿವಿಪ್ಯಾಟ್ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ