ಕ್ರಿಸ್ಮಸ್‌ ರಜೆ, ವಾರಾಂತ್ಯ, ಹೊಸ ವರ್ಷಕ್ಕೆ ಸ್ವಾಗತ:  ಪ್ರವಾಸಿ ತಾಣಗಳಲ್ಲಿ ಜನಸಾಗರ


Team Udayavani, Jan 1, 2023, 7:40 AM IST

ಕ್ರಿಸ್ಮಸ್‌ ರಜೆ, ವಾರಾಂತ್ಯ, ಹೊಸ ವರ್ಷಕ್ಕೆ ಸ್ವಾಗತ:  ಪ್ರವಾಸಿ ತಾಣಗಳಲ್ಲಿ ಜನಸಾಗರ

ಬೆಂಗಳೂರು: ಹೊಸ ವರ್ಷದ ಸಂಭ್ರಮ, ಕ್ರಿಸ್ಮಸ್‌ ರಜೆಯ ಲಾಭ, ವಾರಾಂತ್ಯದ ಅನುಕೂಲ… ಈ ಮೂರು ಒಟ್ಟಿಗೆ ಸಿಕ್ಕ ಕಾರಣ ರಾಜ್ಯದ ಬಹುತೇಕ ಪ್ರವಾಸಿ ತಾಣಗಳು ತುಂಬಿ ತುಳುಕುತ್ತಿವೆ.

ರಾಜ್ಯದ ಕರಾವಳಿ, ಉತ್ತರ ಕರ್ನಾಟಕ, ಮಧ್ಯ ಕರ್ನಾಟಕ, ಮಲೆನಾಡು ಜಿಲ್ಲೆಗಳ ಪ್ರವಾಸಿ ತಾಣಗಳಲ್ಲಿ ಜನ ಕಿಕ್ಕಿರಿದು ತುಂಬಿದ್ದರು. ಆದರೆ ಬೆಂಗಳೂರು ಸನಿಹದ ನಂದಿ ಗಿರಿಧಾಮಕ್ಕೆ ಪ್ರವಾಸಿಗರನ್ನು ನಿಷೇಧಿಸಿದ ಪರಿಣಾಮ ಬಣಗುಡುತ್ತಿತ್ತು.

ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ, ದತ್ತಪೀಠ, ಮಾಣಿಕ್ಯಧಾರಾ, ಕೆಮ್ಮಣ್ಣುಗುಂಡಿ, ಕುದುರೆಮುಖ ಸೇರಿದಂತೆ ವಿವಿಧ ಪ್ರವಾಸಿ ತಾಣಗಳಿಗೆ ಲಗ್ಗೆ ಇಟ್ಟಿದ್ದರು. ಶನಿವಾರ ಮಧ್ಯಾಹ್ನದೊಳಗೆ ಬರೋಬ್ಬರಿ ಒಂದು ಸಾವಿರ ವಾಹನಗಳು ಗಿರಿ ಪ್ರದೇಶಕ್ಕೆ ತೆರಳಿದ್ದು, ಜನ ಜಾತ್ರೆ ನೆರೆದಿತ್ತು. ವಿವಿಧೆಡೆಗಳಿಂದ ಆಗಮಿಸಿದ ಪ್ರವಾಸಿಗರು ಇಲ್ಲಿನ ಪ್ರಕೃತಿ ಸೌಂದರ್ಯ ಕಣ್ತುಂಬಿಕೊಂಡು ಖುಷಿಪಟ್ಟರು.

ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಶ್ರೀರಂಭಾಪುರಿ ಪೀಠ, ಕಳಸೇಶ್ವರ ದೇವಸ್ಥಾನ ಮತ್ತಿತರ ಧಾರ್ಮಿಕ ಕ್ಷೇತ್ರಗಳಿಗೂ ಭಕ್ತರ ದಂಡು ಲಗ್ಗೆ ಇರಿಸಿದ್ದು, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಅತ್ತ ಹಂಪಿಯಲ್ಲೂ ಪ್ರವಾಸಿಗರ ದಂಡು ಹೆಚ್ಚಾಗಿತ್ತು. ಎರಡು ಮೂರು ದಿನಗಳಿಂದ ರಾಜ್ಯ, ಹೊರ ರಾಜ್ಯಗಳ ಮತ್ತು ವಿದೇಶಿ ಜನರು ಹಂಪಿಗೆ ಆಗಮಿಸಿದ್ದಾರೆ. ಹಂಪಿ ಮತಂಗ ಪರ್ವತ, ಸಾಸಿವೆಕಾಳು ಗಣಪತಿ ದೇವಾಲಯ ಹಾಗೂ ಹೇಮಕೂಟದ ಆವರಣದಲ್ಲಿ ಸೇರಿದ್ದ ಸಹಸ್ರಾರು ದೇಶ-ವಿದೇಶಿ ಪ್ರವಾಸಿಗರು, ವರ್ಷದ ಕೊನೆಯ ಸೂರ್ಯಾಸ್ತ ವೀಕ್ಷಣೆ ಮಾಡಿ ಹಳೇ ವರ್ಷಕ್ಕೆ ವಿದಾಯ ಹೇಳಿದರು.

ಮೈಸೂರು ಸುತ್ತಮುತ್ತಲಿನ ಪ್ರದೇಶಗಳಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಕಂಡು ಬಂದರು. ಅರಮನೆ ಆವರಣದಲ್ಲಿ ಪ್ರವಾಸಿಗರು ಶನಿವಾರ ಕಿಕ್ಕಿರಿದು ನೆರೆದಿದ್ದರು. ಅರಮನೆಯ ಸುತ್ತಮುತ್ತ ಹೆಚ್ಚಿನ ವಾಹನಗಳ ದಟ್ಟಣೆ ಕಂಡು ಬಂದಿತು. ಮೃಗಾಲಯದ ವೀಕ್ಷಣೆಗೂ ಭಾರೀ ಸಂಖ್ಯೆಯಲ್ಲಿ ಪ್ರವಾಸಿಗರು ಶನಿವಾರ ಆಗಮಿಸಿದ್ದರು.

ಕೊಲ್ಲೂರಿನಲ್ಲಿ ದಾಖಲೆ ಸಂಖ್ಯೆಯ ಭಕ್ತರು

ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದಲ್ಲಿ ಶನಿವಾರ ಸಹಸ್ರಾರು ಭಕ್ತರು ಶ್ರೀ ದೇವಿಯ ದರ್ಶನಕ್ಕೆ ಆಗಮಿಸಿದ್ದರು. ಶಾಲಾ ಶೈಕ್ಷಣಿಕ ಪ್ರವಾಸದ ಮಕ್ಕಳು ಹಾಗೂ ವಿವಿಧ ರಾಜ್ಯಗಳಿಂದ ಆಗಮಿಸಿದ ಸುಮಾರು 15,000 ಭಕ್ತರು ಅನ್ನ ಪ್ರಸಾದ ಸ್ವೀಕರಿಸಿದರು. ನೂಕುನುಗ್ಗಲು ಆಗದಂತೆ ವಿಶೇಷ ಕ್ರಮ ಕೈಗೊಳ್ಳಲಾಗಿತ್ತು.

ಕರಾವಳಿಯಲ್ಲೂ ಜನ

ಕರಾವಳಿ ಭಾಗದ ಮಂಗಳೂರು, ಉಡುಪಿ, ಕಾರವಾರ, ಮಲ್ಪೆ ಸೇರಿದಂತೆ ಸಮುದ್ರ ತೀರ ಭಾಗಗಳಲ್ಲೂ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದರು. ವರ್ಷದ ಕಡೆಯ ಸೂರ್ಯಾಸ್ತ ವೀಕ್ಷಿಸಿ ಸಂಭ್ರಮಿಸಿದರು. ಪ್ರಸಕ್ತ ಕಳೆದ ಎರಡು ಮೂರು ವರ್ಷ ಕೊರೊನಾ ಬಾಧಿಸಿದ್ದರಿಂದ ಶಾಲಾ ಮಕ್ಕಳ ಪ್ರವಾಸಕ್ಕೆ ಅಡ್ಡಿಯಾಗಿತ್ತು. ಪ್ರಸಕ್ತ ವರ್ಷ ರಾಜ್ಯದ ನಾನಾ ಕಡೆಗಳಿಂದ ಶಾಲಾ ಮಕ್ಕಳು ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿ ದರ್ಶನ ಪಡೆಯುತ್ತಿರುವುದರಿಂದ ಪ್ರತಿನಿತ್ಯ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಹೊಸ ವರ್ಷಾಚರಣೆ ಸಮಯದಲ್ಲಿ ಭಕ್ತರು ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಲು ಆಗಮಿಸುತ್ತಿದ್ದು, ನಾಡಿನ ಜನತೆಗೆ ಪೂಜ್ಯರು ಶುಭಕೋರಿದ್ದಾರೆ.

ಇನ್ನುಳಿದಂತೆ ಉಡುಪಿ ಶ್ರೀಕೃಷ್ಣ ಮಠ, ಕಟೀಲು ದೇಗುಲ, ಸುಬ್ರಹ್ಮಣ್ಯ ಮತ್ತಿತರ ಧಾರ್ಮಿಕ ಸ್ಥಳಗಳು, ಪ್ರವಾಸಿ ತಾಣಗಳಲ್ಲಿ ಕೂಡ ಭಾರೀ ಜನಸಂದಣಿ ಕಂಡುಬಂದಿತ್ತು.

ಟಾಪ್ ನ್ಯೂಸ್

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.