ಬಡ್ತಿ ಮೀಸಲು ರದ್ದು: ಸುಪ್ರೀಂಗೆ ಹೈ ಸಹಮತ
Team Udayavani, Nov 8, 2017, 11:34 AM IST
ಬೆಂಗಳೂರು: ಬಡ್ತಿ ಮೀಸಲಾತಿ ರದ್ದುಗೊಳಿಸಿ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪನ್ನು ಹೈಕೋರ್ಟ್ ಪಾಲಿಸಿದೆ. ರಾಜ್ಯಸರ್ಕಾರದ ವ್ಯಾಪ್ತಿಗೆ ಒಳಪಡದ ಮುಖ್ಯನ್ಯಾಯಮೂರ್ತಿಗಳ ನಿರ್ದೇಶನದಂತೆ ನಡೆಯುವ ಹೈಕೋರ್ಟ್ನಲ್ಲಿ ಸುಪ್ರೀಂ ತೀರ್ಪು ಜಾರಿಯಾಗಿದೆ.
ಈ ಕುರಿತು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅಶೋಕ್ ನಿಜಗಣ್ಣನವರ್, ಸುಪ್ರೀಂಕೋರ್ಟ್ ತೀರ್ಪಿನ ಅನ್ವಯ ಹೈಕೋರ್ಟ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಶ್ರೇಣಿಯ ಸಿಬ್ಬಂದಿಯ ಹುದ್ದೆಗಳನ್ನು ಸೇವಾ ಹಿರಿತನ ಪರಿಗಣಿಸಿ, ಪರಿಷ್ಕೃತ ತಾತ್ಕಾಲಿಕ ಪಟ್ಟಿಯನ್ನು ಬಿಡುಗಡೆಗೊಳಿಸಿ ಆದೇಶಹೊರಡಿಸಿದ್ದಾರೆ.
ಹೊಸದಾಗಿ ಪರಿಷ್ಕೃತ ಪಟ್ಟಿಯಲ್ಲಿ ಜಂಟಿ ರಿಜಿಸ್ಟ್ರಾರ್, ಸಹಾಯಕ ರಿಜಿಸ್ಟ್ರಾರ್ ಸೇರಿದಂತೆ ಹೈಕೋರ್ಟ್ನ ಸಿಬ್ಬಂದಿ ಹಲವು ಹುದ್ದೆಗಳಲ್ಲಿ ಏರುಪೇರಾಗಿದೆ. ಸೇವಾ ಹಿರಿತನದ ಆಧಾರದಲ್ಲಿ ಹಲವು ಮಂದಿ ಪದೋನ್ನತಿ ಹೊಂದಿದ್ದು, ಕೆಲವರು ಹಿಂಬಡ್ತಿ ಪಡೆದುಕೊಂಡಿದ್ದಾರೆ.
ತಾತ್ಕಾಲಿಕ ಪರಿಷ್ಕೃತ ಪಟ್ಟಿಗೆ ಮುಂದಿನ 15ದಿನಗಳ ಆಕ್ಷೇಪಣೆ ಸಲ್ಲಿಸಲು ಕಾಲವಕಾಶ ನೀಡಲಾಗಿದ್ದು, ಬೆಂಗಳೂರಿನ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಬಳಿ ಸಲ್ಲಿಸಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಬಡ್ತಿ ಮೀಸಲಾತಿ ರದ್ದುಗೊಳಿಸಿ ಎಲ್ಲಾ ರಾಜ್ಯಗಳೂ ಆದೇಶ ಪಾಲಿಸುವಂತೆ ಸುಪ್ರೀಂಕೋರ್ಟ್ ಫೆ.9ರಂದು ತೀರ್ಪು ನೀಡಿತ್ತು. ಈ ಸಂಬಂಧ ರಾಜ್ಯಸರ್ಕಾರ ಸಲ್ಲಿಸಿದ್ದ ಎಸ್ಎಲ್ಪಿ ಅರ್ಜಿಯನ್ನೂ ವಜಾಗೊಳಿಸಿರುವ ಸುಪ್ರೀಂಕೋರ್ಟ್, ಡಿಸೆಂಬರ್ ಅಂತ್ಯದೊಳಗೆ ಆದೇಶ ಪಾಲಿಸುವಂತೆ ಗಡುವು ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Prajwal Revanna ವಿಮಾನದಿಂದ ಇಳಿಯುತ್ತಿದ್ದಂತೆಯೇ ಎಸ್ ಐಟಿ ಅಧಿಕಾರಿಗಳ ವಶಕ್ಕೆ
Ballari ಒನ್ ಕೇಂದ್ರದಲ್ಲಿ ಕಳವು ಮಾಡಿದ್ದ ಆರೋಪಿ ಬಂಧನ; ಮತ್ತೊಬ್ಬ ಪರಾರಿ
Subrahmanya ಪರಿಸರದಲ್ಲಿ ಧಾರಾಕಾರ ಮಳೆ: ಕೆಲವೆಡೆ ಹಾನಿ
Mangaluru ನಮಾಜ್ ಪ್ರಕರಣ: ಬಿ ರಿಪೋರ್ಟ್ ಸಲ್ಲಿಕೆ; ಶರಣ್ ಪಂಪ್ವೆಲ್ ವಿರುದ್ಧ ಪ್ರಕರಣ
TIME ನಿಯತಕಾಲಿಕ: ಜಾಗತಿಕ ಪ್ರಭಾವಿ 100 ಕಂಪನಿಗಳ ಪಟ್ಟಿಯಲ್ಲಿ ರಿಲಯನ್ಸ್