ಅಲೋಕ್ ಕುಮಾರ್ಗೆ ಹೈಕೋರ್ಟ್ ನೋಟಿಸ್
Team Udayavani, May 3, 2019, 11:21 AM IST
ಬೆಂಗಳೂರು: ‘ರೌಡಿ ಪರೇಡ್ ಹೆಸರಲ್ಲಿ ಸಿಸಿಬಿ ಕಚೇರಿಗೆ ಕರೆಸಿ ಮೂರು ದಿನಗಳ ಕಾಲ ಅಕ್ರಮ ಬಂಧನದಲ್ಲಿ ರಿಸಿಕೊಂಡು ನನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡಲಾಗಿದೆ,’ ಎಂದು ಆರೋಪಿಸಿ ರೌಡಿ ಶೀಟರ್ ಸುನೀಲ್ ಕುಮಾರ್ ಅಲಿಯಾಸ್ ಸೈಲೆಂಟ್ ಸುನೀಲ್ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದಂತೆ ಸಿಸಿಬಿ ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಈ ಕುರಿತಂತೆ ಸುನೀಲ್ ಕುಮಾರ್ ಸಲ್ಲಿಸಿದ ರಿಟ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ, ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಗೃಹ ಇಲಾಖೆ ಹಾಗೂ ಸಿಸಿಬಿ ಹೆಚ್ಚುವರಿ ಪೊಲೀಸ್ ಆಯುಕ್ತ ಆಲೋಕ್ ಕುಮಾರ್ ಅವರಿಗೆ ತುರ್ತು ನೋಟಿಸ್ ಜಾರಿಗೊಳಿಸಿತು. ಅಲ್ಲದೇ ಅರ್ಜಿದಾರರಿಗೆ ಅನಗತ್ಯ ಕಿರುಕುಳ ನೀಡದಂತೆ ಮಧ್ಯಂತರ ಆದೇಶ ನೀಡಿ ವಿಚಾರಣೆಯನ್ನು ಮುಂದೂಡಿತು.
‘ರೌಡಿ ಪರೇಡ್’ ಹೆಸರಲ್ಲಿ ನನ್ನ ಮೇಲೆ ನಡೆದ ದೌರ್ಜ ನ್ಯದ ವಿರುದ್ಧ ಹೈಕೋರ್ಟ್ ಮೊರೆ ಹೋಗಿದ್ದರಿಂದ ಸಿಸಿಬಿ ಹೆಚ್ಚುವರಿ ಪೊಲೀಸ್ ಆಯುಕ್ತ ಆಲೋಕ್ ಅವರು ನನ್ನ ಮೇಲೆ ಮತ್ತಷ್ಟು ದೌರ್ಜನ್ಯ ನಡೆಸಬ ಹುದು. ಅಲ್ಲದೇ ನನ್ನ ಮೇಲೆ ಸುಳ್ಳು ಪ್ರಕರಣ ದಾಖಲಿಸಬಹುದು. ಈಗಾಗಲೇ ತುಮಕೂರಿನ ಮಾಜಿ ಮೇಯರ್ ಕೊಲೆ ಪ್ರಕರಣದಲ್ಲಿ ಸಿಲುಕಿಸುವ ಬಗ್ಗೆ ಸಿಸಿಬಿಯವರು ಬೆದರಿಕೆ ಹಾಕಿದ್ದಾರೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.
ಪ್ರಕರಣವೇನು?: ಏಪ್ರಿಲ್ 10ರಂದು ಸುನೀಲ್ ಕುಮಾರ್ ಪತ್ನಿಯ ಮೊಬೈಲ್ಗೆ ಕರೆ ಮಾಡಿದ್ದ ಸಿಸಿಬಿ ಅಧಿಕಾರಿಗಳು, ಮೇ 12ರಂದು ನಡೆಯುವ ರೌಡಿ ಪರೇಡ್ಗೆ ಹಾಜರಾಗಬೇಕು ಎಂದು ಸೂಚಿಸಿದ್ದರು. ಅದರಂತೆ ಏ.12ರಂದು ಸುನೀಲ್ ಸಿಸಿಬಿ ಕಚೇರಿಗೆ ಹೋಗಿದ್ದ. ರೌಡಿ ಪರೇಡ್ ವೇಳೆ ಆಲೋಕ್ ಕುಮಾರ್ ಸುನೀಲ್ ಬಳಿ ಬಂದು ಏರು ಧ್ವನಿಯಲ್ಲಿ ಮಾತನಾಡಿದ್ದರು. ರಾತ್ರಿ 10.30ರ ತನಕ ಸಿಸಿಬಿ ಕಚೇರಿಯಲ್ಲಿ ಕೂರಿಸಿಕೊಂಡು ಮರು ದಿನ (ಏ.13) ಬರುವಂತೆ ಸೂಚಿಸಿದರು.
ಅದರಂತೆ ಏ.13, 14 ಮತ್ತು 15ರಂದು ಸುನೀಲ್ ಕುಮಾರ್ ಸತತವಾಗಿ ಸಿಸಿಬಿ ಕಚೇರಿಗೆ ಹೋದ. ಆದರೆ, ಅಲೋಕ್ ಭೇಟಿ ಆಗಿಲ್ಲ. ಕೊನೇ ದಿನ ಇಬ್ಬರು ಸಿಸಿಬಿ ಅಧಿಕಾರಿಗಳು ಸುನೀಲ್ ಕುಮಾರ್ಗೆ ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ನೀನು ಜೈಲಿಗೆ ಹೋದರೆ, ವಾಪಸ್ ಬರುವುದಿಲ್ಲ ಎಂದಿದ್ದರು ಎನ್ನಲಾಗಿದೆ. ಇದರ ವಿರುದ್ಧ ಸುನೀಲ್ ಹೈಕೋರ್ಟ್ ಮೆಟ್ಟಿಲೇರಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ