ಸರ್ಕಾರಕ್ಕೆ ಹೈಕೋರ್ಟ್‌ ಚಾಟಿ

ಡಿಜೆ ಹಳ್ಳಿ-ಕೆಜಿ ಹಳ್ಳಿ ಗಲಭೆ: ಕ್ಲೇಮ್‌ ಕಮಿಷನರ್‌ ಕೆಲಸ ಆರಂಭಿಸಲಿ

Team Udayavani, Oct 21, 2020, 12:24 PM IST

bng-tdy-3

ಬೆಂಗಳೂರು: “ಜನರ ನೆನಪಿನ ಶಕ್ತಿ ಬಹಳ ಸೀಮಿತವಾದದ್ದು, ಆದ್ದರಿಂದ ನಡೆದಿದ್ದರ ಬಗ್ಗೆ ಜನ ಮರೆತು ಹೋಗುವ ಮೊದಲು ಕ್ಲೇಮ್‌ ಕಮಿಷನರ್‌ ಕಾರ್ಯಾರಂಭ ಮಾಡದಿದ್ದರೆ, ಅವರನ್ನು ನೇಮಕ ಮಾಡಿದ ಉದ್ದೇಶ ಸಾರ್ಥಕವಾಗುವುದಿಲ್ಲ’ ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.

ಗಲಭೆಯಲ್ಲಿ ಉಂಟಾದ ಆಸ್ತಿ-ಪಾಸ್ತಿ ನಷ್ಟದಅಂದಾಜುಮಾಡಿಹೊಣೆಗಾರಿಕೆ ಗುರುತಿಸಲು ಕ್ಲೇಮ್‌ ಕಮಿಷನರ್‌ ನೇಮಕ ಮಾಡಬೇಕು ಎಂದು ಸರ್ಕಾಸಲ್ಲಿಸಿದ ಹಾಗೂ ಪ್ರಕರಣವನ್ನು ಎನ್‌ ಐಎ ತನಿಖೆಗೆ ವಹಿಸಬೇಕು ಎಂದು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ್‌ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ಈ ರೀತ ಮೌಖೀಕ ಅಭಿಪ್ರಾಯ ವ್ಯಕ್ತಪಡಿಸಿತು.

ಈ ವೇಳೆ ಕ್ಲೇಮ್‌ ಕಮಿಷನರ್‌ ಅವರಿಗೆ ಕಚೇರಿ, ಸಿಬ್ಬಂದಿ, ಮೂಲಸೌಕರ್ಯ ಒದಗಿಸಲು ಕ್ರಮಗಳನ್ನು ಕೈಗೊಳ್ಳಲಾಗಿದೆಯೇ ಎಂದುಸರ್ಕಾರದ ಪರ ವಕೀಲರು ನ್ಯಾಯಪೀಠ ಪ್ರಶ್ನಿಸಿತು. ಅದಕ್ಕೆ ಈ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಕಚೇರಿಗಾಗಿ ಎರಡುಕಡೆ ಜಾಗ ಗುರುತಿಸಲಾಗಿದ್ದು, ಅದರಲ್ಲಿ ಕ್ಲೇಮ್‌ ಕಮಿಷನರ್‌ಅವರು ಯಾವುದನ್ನು ಬಯಸುತ್ತಾರೋ ಅಲ್ಲಿ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಮಾಡಿಕೊಡಲಾಗುತ್ತಿದೆ ಎಂದರು.

ಅದಕ್ಕೆ, ಕ್ಲೇಮ್‌ ಕಮಿಷರ್‌ ನೇಮಕ ಮಾಡಿ ಬಹಳ ದಿನ ಆಗಿದೆ. ಈವರೆಗೆ ಪ್ರಕ್ರಿಯೆನಡೆಯುತ್ತಿದೆ ಎಂದು ಸರ್ಕಾರ ಹೇಳಿದೆ. ಈ ರೀತಿಯ ವಿಳಂಬ ಕ್ಲೇಮ್‌ ಕಮಿಷರ್‌ ನೇಮಕ ಉದ್ದೇಶವನ್ನೇ ವಿಫ‌ಲಗೊಳಿಸಲಿದೆ ಎಂದು ನ್ಯಾಯಪೀಠ ಸೂಕ್ಷ್ಮವಾಗಿ ಹೇಳಿತು.

ಇದೇವೇಳೆಅರ್ಜಿದಾರವಕೀಲಎನ್‌.ಪಿ.ಅಮೃತೇಶ್‌ ನ್ಯಾಯಪೀಠಕ್ಕೆ ಮನವಿ ಮಾಡಿ, ಕ್ಲೇಮ್‌ ಕಮಿಷನರ್‌ ಕಚೇರಿಯನ್ನು ವಿಧಾನಸೌಧ ಅಥವಾ ವಿಕಾಸಸೌಧದಲ್ಲಿ ನೀಡಿದರೆ ಸಾರ್ವಜನಿಕರು ದೂರುನೀಡಲು,ವ್ಯವಹರಿಸಲುಕಷ್ಟವಾಗಬಹುದು ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಮೊದಲು ಕ್ಲೇಮ್‌ ಕಮಿಷನರ್‌ಗೆ ನೀಡಿರುವ ಕಚೇರಿ, ಸೌಲಭ್ಯ ಗಳ ಕುರಿತು ಸರ್ಕಾರ ವರದಿ ನೀಡಲಿ. ನಂತರ ಈ ಕುರಿತು ಪರಿಶೀಲಿಸೋಣ ಎಂದು ಹೇಳಿತು. ಅಲ್ಲದೇ,ಕ್ಲೇಮ್‌ಕಮಿಷನರ್‌ಗೆ ಅಧಿಕಾರ ನೀಡಿ ಹೊರಡಿಸಿರುವ ಅಧಿಸೂಚನೆ ದೋಷ ಪೂರಿತವಾಗಿದೆ. ಹೀಗಾಗಿ ಸರ್ಕಾರ ಲೋಪ ಸರಿಪಡಿಸಿ, ಹೊಸದಾಗಿ ಅಧಿಸೂಚನೆ ಹೊರಡಿಸ ಬೇಕು. ಕಮಿಷನರ್‌ಗೆ ಅಗತ್ಯವಿರುವ ಎಲ್ಲ ಸೌಕರ್ಯ ನೀಡಿ, ಅವರಿಗೆ ಕಾರ್ಯಾರಂಭ ಮಾಡಲು ಎಲ್ಲ ವ್ಯವಸ್ಥೆ ಮಾಡಬೇಕು. ಈ ಕುರಿತ ವರದಿಯನ್ನು ನ.12ರೊಳಗೆ ಸಲ್ಲಿಸುವಂತೆ ಸೂಚಿಸಿದ ನ್ಯಾಯ ಪೀಠ, ವಿಚಾರಣೆ ನ.13ಕ್ಕೆ ಮುಂದೂಡಿತು.

ನಟಿ ಸಂಜನಾ ಗಲ್ರಾನಿ ಜಾಮೀನು ಅರ್ಜಿ ಮುಂದಕ್ಕೆ  :

ಡ್ರಗ್ಸ್‌ ಮಾರಾಟ ಜಾಲ ಪ್ರಕರಣ ಸಂಬಂಧ ಬಂಧನದಲ್ಲಿರುವ ನಟಿ ಸಂಜನಾ ಗಲ್ರಾನಿ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಅ.22ಕ್ಕೆ ಮುಂದೂಡಿದೆ. ಸಂಜನಾ ಸಲ್ಲಿಸಿರುವ ಜಾಮೀನು ಅರ್ಜಿ ನ್ಯಾಯಮೂರ್ತಿ ಶ್ರೀನಿವಾಸ್‌ ಹರೀಶ್‌ಕುಮಾರ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಆಗ, ಸಿಸಿಬಿ ಪರ ಎಸ್‌ಪಿಪಿ ಹಾಜರಾಗಿ, ಡ್ರಗ್ಸ್‌ ಪ್ರಕರಣದ ಆರೋಪಿಗಳಿಗೆ ಜಾಮೀನು ನೀಡಿ ಬಿಡುಗಡೆ ಮಾಡಲು ಆಗ್ರಹಿಸಿ ಅನಾಮಿಕರು ಸ್ಫೋಟಕ ವಸ್ತುಗಳ ಸಮೇತ ಎನ್‌ಡಿಪಿಎಸ್‌ಕೋರ್ಟ್‌ ನ್ಯಾಯಾಧೀ ಶಕರಿಗೆ ಪತ್ರ ಬರೆದಿದ್ದಾರೆ. ಆ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು. ಇದಕ್ಕೆ ಸಂಜನಾ ಪರ ವಕೀಲರು, ಜಾಮೀನು ಅರ್ಜಿ ವಿಚಾರಣೆ ಸದ್ಯ ಎನ್‌ಡಿಪಿಎಸ್‌ ನ್ಯಾಯಾಲಯದ ಮುಂದೆ ಇಲ್ಲ. ಆ ನ್ಯಾಯಾಲಯ ಆರೋಪಿಗಳಿಗೆಈಗಾಗಲೇ ಜಾಮೀನು ನಿರಾಕರಿಸಿದೆ. ಹಾಗಾಗಿ, ಜಾಮೀನುಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಇನ್ನು ಪತ್ರದ ವಿಚಾರ ಇಲ್ಲಿ ಪ್ರಸ್ತಾಪಿಸುವ ಅಗತ್ಯವಿರಲಿಲ್ಲ ಎಂದರು. ಜಾಮೀನು ಅರ್ಜಿಗೆ ಅ.22ರಂದು ಆಕ್ಷೇಪಣೆ ಸಲ್ಲಿಸಲು ಸಿಸಿಬಿ ವಕೀಲರಿಗೆ ಸೂಚಿಸಿದ ಪೀಠ ವಿಚಾರಣೆ ಮುಂದೂಡಿತು.

ಟಾಪ್ ನ್ಯೂಸ್

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.