ಬಾಲ ನ್ಯಾಯ ಕಾಯ್ದೆ ನಿರ್ಲಕ್ಷ್ಯಕ್ಕೆ ಹೈಕೋರ್ಟ್ ಆಕ್ರೋಶ
Team Udayavani, Jul 31, 2019, 3:05 AM IST
ಬೆಂಗಳೂರು: “ಬಾಲ ನ್ಯಾಯ (ಮಕ್ಕಳ ಆರೈಕೆ ಹಾಗೂ ಸಂರಕ್ಷಣೆ) ಕಾಯ್ದೆ-2015’ರ ಪ್ರಕಾರ ಅಸ್ತಿತ್ವಕ್ಕೆ ತರಲಾಗುವ ಬಾಲ ನ್ಯಾಯ ಸಮಿತಿಗಳಿಗೆ ಅಗತ್ಯ ನೆರವು ನೀಡಲು ಸಣ್ಣ ಮಟ್ಟದ ಶಾಶ್ವತ ಸಚಿವಾಲಯ ರಚನೆಗೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಒಂದು ತಿಂಗಳು ಗಡುವು ನೀಡಿದೆ.
ಇದೇ ವೇಳೆ ಬಾಲ ನ್ಯಾಯ ಸಮಿತಿಗಳ ನೆರವಿಗೆ ಶಾಶ್ವತ ಸಚಿವಾಲಯ ರಚಿಸುವ ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಸ್ತಾವನೆಯನ್ನು ತಿರಸ್ಕರಿಸಿದ ಕಾನೂನು ಇಲಾಖೆಯ ಕ್ರಮಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಹೈಕೋರ್ಟ್ ಇದು ಸರ್ಕಾರದ “ಕಠೊರ ಧೋರಣೆ’ ಹಾಗೂ ಸುಪ್ರೀಂಕೋರ್ಟ್ ನಿರ್ದೇಶನದ ಉಲ್ಲಂಘನೆಯಾಗಿದೆ ಎಂದು ಚಾಟಿ ಬೀಸಿತು.
ಈ ಕುರಿತಂತೆ ಸುಪ್ರೀಂಕೋರ್ಟ್ ನಿರ್ದೇಶನದಂತೆ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾ. ಎ.ಎಸ್. ಓಕಾ ಹಾಗೂ ನ್ಯಾ. ಮೊಹಮ್ಮದ್ ನವಾಜ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು. ಅರ್ಜಿದಾರರ ಪರ ವಕೀಲೆ ಮೈತ್ರೆಯಿ ಕೃಷ್ಣನ್ ವಾದ ಮಂಡಿಸಿದರು.
ಈ ವೇಳೆ, ಕಾಯ್ದೆ ಪ್ರಕಾರ ಹೈಕೋರ್ಟ್ ಮಟ್ಟದ ಬ್ಯಾಲ ನ್ಯಾಯ ಸಮಿತಿಗಳಿಗೆ ಅಗತ್ಯ ನೆರವು ನೀಡಲು ಸಣ್ಣ ಮಟ್ಟದ ಶಾಶ್ವತ ಸಚಿವಾಲಯ ರಚಿಸುವ ನಿಟ್ಟಿನಲ್ಲಿ ಯಾವುದೇ ಕ್ರಮ ಕೈಗೊಳ್ಳದ ರಾಜ್ಯ ಸರ್ಕಾರದ ವಿರುದ್ಧ ನ್ಯಾಯಪೀಠ ಅಕ್ರೋಶ ವ್ಯಕ್ತಪಡಿಸಿತು. ಸುಪ್ರೀಂಕೋರ್ಟ್ ನಿರ್ದೇಶನ ಇದ್ದರೂ, ಸರ್ಕಾರ ಕ್ರಮಕ್ಕೆ ಮುಂದಾಗದಿರುವುದು ಸಹಿಸಲು ಸಾಧ್ಯವಿಲ್ಲ. ಆದ್ದರಿಂದ ಒಂದು ತಿಂಗಳಲ್ಲಿ ಕ್ರಮ ಕೈಗೊಳ್ಳಿ ಎಂದು ತಾಕೀತು ಮಾಡಿತು.
ಬಾಲ ನ್ಯಾಯ ಕಾಯ್ದೆ-2015ರ ಅನುಷ್ಠಾನಕ್ಕೆ ಆಯಾ ರಾಜ್ಯಗಳ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಗಮನ ಹರಿಸಬೇಕು ಎಂದು 2018ರ ಫೆ.2ರಂದು ಸುಪ್ರೀಂಕೋರ್ಟ್ ಹೇಳಿತ್ತು. ಕಾಯ್ದೆಯ ಅನುಷ್ಠಾನದಲ್ಲಿ ರಾಜ್ಯ ಸರ್ಕಾರಗಳು ನಿರಂತರ ವಿಫಲಗೊಂಡಿರುವುದನ್ನು ಗಮನಿಸಿ ಹೈಕೋರ್ಟ್ ಮಟ್ಟದಲ್ಲಿ “ಬಾಲ ನ್ಯಾಯ ಸಮಿತಿ’ಗಳನ್ನು ರಚಿಸಬೇಕು.
ಇದರ ನೆರವಿಗೆ ಆಯಾ ರಾಜ್ಯದ ಕಾನೂನು ಇಲಾಖೆ ಅಗತ್ಯ ಸಿಬ್ಬಂದಿ ಹಾಗೂ ಸಮರ್ಪಕ ಮೂಲಸೌಕರ್ಯಗಳ ಜೊತೆಗೆ ಸಣ್ಣ ಮಟ್ಟದ ಶಾಶ್ವತ ಸಚಿವಾಲಯ ರಚಿಸಬೇಕು ಎಂದು ಹೇಳಲಾಗಿತ್ತು ಎಂದು ನ್ಯಾಯಪೀಠ ತಿಳಿಸಿತು. ಅಲ್ಲದೇ ಬಾಲ ನ್ಯಾಯ ಸಮಿತಿಗಳ ನೆರವಿಗೆ ಐವರು ಸಿಬ್ಬಂದಿ ಹಾಗೂ ಅಗತ್ಯ ಮೂಲಸೌಕರ್ಯಗಳಿರುವ ಶಾಶ್ವತ ಸಚಿವಾಲಯ ಸ್ಥಾಪಿಸುವಂತೆ ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರ ಕಾನೂನು ಇಲಾಖೆಗೆ 2018ರ ಫೆ.19ರಂದು ಪ್ರಸ್ತಾವನೆ ಸಲ್ಲಿಸಿತ್ತು.
ಇದನ್ನು ತಿರಿಸ್ಕರಿಸಿದ ಕಾನೂನು ಇಲಾಖೆಯು ಪ್ರತ್ಯೇಕ ಸಚಿವಾಲಯ ರಚಿಸಲು ಸಾಧ್ಯವಿಲ್ಲ. ಅದಕ್ಕಾಗಿ ಕಾನೂನು ಸೇವೆಗಳ ಪ್ರಾಧಿಕಾರದ ಹಾಲಿ ಸಿಬ್ಬಂದಿಗಳನ್ನೇ ಬಳಸಿಕೊಳ್ಳುವಂತೆ ಹೇಳಿ 2019ರ ಜೂ.17ಕ್ಕೆ ಪತ್ರ ಬರೆದಿತ್ತು. ಇದಕ್ಕೆ ಅಕ್ರೋಶಗೊಂಡ ನ್ಯಾಯಪೀಠ, ಕಾನೂನು ಸೇವಾ ಪ್ರಾಧಿಕಾರ ಸಲ್ಲಿಸಿದ ಪ್ರಸ್ತಾವನೆಯಂತೆ ಕ್ರಮ ಕೈಗೊಳ್ಳುವಂತೆ ತಾಕೀತು ಮಾಡಿ ವಿಚಾರಣೆಯನ್ನು ಆ.23ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್