ಬಿಬಿಎಂಪಿ ಚುನಾವಣೆ ನಡೆಸಲು ಹೈಕೋರ್ಟ್ ಸೂಚನೆ: 198 ವಾರ್ಡ್ ಗಳಿಗೆ ನಡೆಯಲಿದೆ ಚುನಾವಣೆ
Team Udayavani, Dec 4, 2020, 3:02 PM IST
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆ ನಡೆಸಲು ರಾಜ್ಯ ಹೈಕೋರ್ಟ್ ಹಸಿರು ನಿಶಾನೆ ತೋರಿದೆ. ಆರು ವಾರಗಳಲ್ಲಿ ಚುನಾವಣಾ ವೇಳಪಟ್ಟಿ ಪ್ರಕಟಿಸಲು ಆಯೋಗಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಬಿಬಿಎಂಪಿಗೆ ಶೀಘ್ರ ಚುನಾವಣೆ ನಡೆಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ಕುರಿತ ಮಹತ್ವದ ತೀರ್ಪನ್ನು ಹೈಕೋರ್ಟ್ ಪ್ರಕಟಿಸಿತು. ಅರ್ಜಿಗೆ ಸಂಬಂಧಿಸಿದಂತೆ ವಾದ- ಪ್ರತಿವಾದ ಆಲಿಸಿದ ಬಳಿಕ ತೀರ್ಪು ಕಾಯ್ದಿರಿಸಿದ್ದ ಮುಖ್ಯ ನ್ಯಾ. ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠ ಇಂದು ತೀರ್ಪು ನೀಡಿದೆ.
198 ವಾರ್ಡ್ ಗಳಿಗೆ ಚುನಾವಣೆ ನಡೆಸುವಂತೆ ಕೋರ್ಟ್ ಸೂಚಿಸಿದೆ. ಮೀಸಲಾತಿ ಪಟ್ಟಿಯನ್ನು ಒಂದು ತಿಂಗಳೊಳಗೆ ಪ್ರಕಟಿಸಬೇಕು. ಆರು ವಾರಗಳಲ್ಲಿ ಚುನಾವಣಾ ವೇಳಪಟ್ಟಿ ಪ್ರಕಟಿಸಬೇಕು ಎಂದು ಸುನಾವಣಾ ಆಯೋಗಕ್ಕೆ ಕೋರ್ಟ್ ಸೂಚನೆ ನೀಡಿದರು.
ವಾರ್ಡ್ಗಳ ಸಂಖ್ಯೆ ಹೆಚ್ಚಿಸಿ ಕಾಯ್ದೆ ತಂದಿರುವುದರಿಂದ ಸದ್ಯ ಚುನಾವಣೆ ಸಾಧ್ಯವಿಲ್ಲ ಎಂದು ಸರ್ಕಾರ ಹೇಳಿದ್ದರೆ, ಹಿಂದಿನ 198 ವಾರ್ಡ್ಗಳ ಪ್ರಕಾರವೇ ಚುನಾವಣೆ ನಡೆಸುವಂತೆ ಸರ್ಕಾರ ಮತ್ತು ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದರು. ಚುನಾವಣೆಗೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ಹೈಕೋರ್ಟ್ಗೆ ಹೇಳಿತ್ತು.
ಇದನ್ನೂ ಓದಿ:ವಿಧಾನಪರಿಷತ್ ಚುನಾವಣೆ: ಬಿಜೆಪಿಗೆ ಭಾರೀ ಹಿನ್ನಡೆ, 5 ಕ್ಷೇತ್ರದಲ್ಲಿ ಗೆದ್ದ ಮಹಾಮೈತ್ರಿಕೂಟ
2020 ನ.10ಕ್ಕೆ ಪಾಲಿಕೆ ಅವಧಿ ಮುಗಿದ ಹಿನ್ನೆಲೆಯಲ್ಲಿ ಶೀಘ್ರವಾಗಿ ಚುನಾವಣೆ ನಡೆಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಲು ಕೋರಿ ಮಾಜಿ ಪಾಲಿಕೆ ಸದಸ್ಯ ಶಿವರಾಜು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಚುನಾವಣಾ ಆಯೋಗ ಸಹ
ಹೈಕೋರ್ಟ್ ಮೊರೆ ಹೋಗಿತ್ತು. ಈ ಮಧ್ಯೆ ಪಾಲಿಕೆಗೆ ಆಡಳಿತಾಧಿಕಾರಿಯನ್ನು ನೇಮಕ ಮಾಡಲಾಯಿತು. ಇದನ್ನೂ ಸಹ ಹೈಕೋರ್ಟ್ನಲ್ಲಿ ಪ್ರಶ್ನಿಸಲಾಯಿತು. ಈ ಮಧ್ಯೆ ಪಾಲಿಕೆ ವಾರ್ಡ್ಗಳ ಸಂಖ್ಯೆಯನ್ನು ಹೆಚ್ಚಿಸಿ ಸರ್ಕಾರ ಕಾಯ್ದೆ ಜಾರಿಗೆ ತಂದಿತು. ಇದಕ್ಕೆ ಆಯೋಗ ಮತ್ತು ಅರ್ಜಿದಾರರು ಅಕ್ಷೇಪಿಸಿದರು. ಇದು ಚುನಾವಣೆಯನ್ನು ದೀರ್ಘಾವಧಿಗೆ ಮುಂದೂಡುವ ಪ್ರಯತ್ನ ಎಂದು ಹೈಕೋರ್ಟ್ ಹೇಳಿತ್ತು. ಈಗಿನ 198 ವಾರ್ಡ್ಗಳಿಗೆ ಅನುಗುಣವಾಗಿ ಮತದಾರರ ಪಟ್ಟಿ ಹಾಗೂ ಮೀಸಲಾತಿ ಪಟ್ಟಿ ಸಿದ್ಧಪಡಿಸಲಾಗಿದೆ ಎಂದು ಆಯೋಗ ವಾದಿಸಿತ್ತು. ಇದೀಗ 198 ವಾರ್ಡ್ ಗಳಿಗೆ ಚುನಾವಣೆ ಮಾಡುವಂತೆ ಕೋರ್ಟ್ ಸೂಚಿಸಿರುವ ಕಾರಣ ಸರ್ಕಾರಕ್ಕೆ ಹಿನ್ನಡೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
MUST WATCH
ಹೊಸ ಸೇರ್ಪಡೆ
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…