![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ವಿದ್ಯಾರ್ಥಿಗಳಿಗೆ ಹೈಕೋರ್ಟ್ ಆಸರೆ
Team Udayavani, Apr 18, 2018, 12:13 PM IST
![highcourt.jpg](https://www.udayavani.com/wp-content/uploads/2018/04/18/highcourt-568x465.jpg)
ಬೆಂಗಳೂರು: ಹಾಜರಾತಿ ಕೊರತೆ ಹಾಗೂ ಪರೀಕ್ಷಾ ಶುಲ್ಕ ಕಟ್ಟಲಾಗದೆ ಪರೀಕ್ಷೆ ಬರೆಯುವ ಅವಕಾಶ ಕಳೆದುಕೊಳ್ಳುವ ಆತಂಕದಲ್ಲಿದ್ದ ಇಬ್ಬರು ವಿದ್ಯಾರ್ಥಿಗಳ ನೆರವಿಗೆ ಹೈಕೋರ್ಟ್ ನೆರವಿಗೆ ಬಂದಿದೆ.
ಏ. 19ರಿಂದ ಆರಂಭವಾಗಲಿರುವ ಪ್ರಾಯೋಗಿಕ ಪರೀಕ್ಷೆಗಳಿಗೆ ಹಾಜರಾಗಲು ಅವಕಾಶ ಕೊಡಿಸುವಂತೆ ಕೋರಿ ಇಬ್ಬರು ಡಿಪ್ಲೋಮಾ ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿದ ನ್ಯಾ. ವಿನೀತ್ ಕೊಠಾರಿ ಅವರಿದ್ದ ಏಕಸದಸ್ಯ ಪೀಠ, ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದೆ.
ಇಬ್ಬರೂ ವಿದ್ಯಾರ್ಥಿಗಳು ಬಡತನ ಹಿನ್ನೆಲೆಯುಳ್ಳವರಾಗಿದ್ದು, ಪರೀಕ್ಷಾ ಶುಲ್ಕ ಸಕಾಲದಲ್ಲಿ ಪಾವತಿಸಲ ಆಗಲಿಲ್ಲ ಎಂದು ಅರ್ಜಿದಾರರ ಪರ ವಕೀಲರು ಹೇಳುತ್ತಿದ್ದಾರೆ. ಆದ್ದರಿಂದ ಈ ಪ್ರಕರಣವನ್ನು ಮಾನವೀಯ ನೆಲೆಗಟ್ಟಿನಲ್ಲಿ ನೋಡಬೇಕಾಗಿದೆ.
ಹೀಗಾಗಿ ಅರ್ಜಿದಾರ ವಿದ್ಯಾರ್ಥಿಗಳಿಗೆ ಏ.19ರಿಂದ ಆರಂಭವಾಗಲಿರುವ ಎರಡನೇ ಸೆಮಿಸ್ಟರ್ ಪರೀಕ್ಷೆಗಳಿಗೆ ಹಾಜರಾಗಲು ಪ್ರವೇಶಪತ್ರ ನೀಡಬೇಕು ಎಂದು ಕೋರಮಂಗಲದ ಆರ್.ಜೆ.ಎಸ್ ಪಾಲಿಟೆಕ್ನಿಕ್ ಕಾಲೇಜಿಗೆ ನಿರ್ದೇಶಿಸಿತು. ಜತೆಗೆ, ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕ 350.ರೂ. ಕಾಲೇಜಿಗೆ ಪಾವತಿಸಬೇಕು ಎಂದು ಇದೇ ವೇಳೆ ಸೂಚಿಸಿತು.
ಅಲ್ಲದೆ, ಅರ್ಜಿದಾರ ವಿದ್ಯಾರ್ಥಿಗಳ ಎರಡನೇ ಸೆಮಿಸ್ಟರ್ ಫಲಿತಾಂಶ ಈ ಅರ್ಜಿಗಳ ಅಂತಿಮ ತೀರ್ಪಿಗೆ ಒಳಪಟ್ಟಿರುತ್ತದೆ ಎಂದೂ ಹೇಳಿರುವ ನ್ಯಾಯಪೀಠ, ಕಡ್ಡಾಯ ಹಾಜರಾತಿ ನಿಯಮಗಳಿಗೆ ಸಂಬಂಧಿಸಿದ ಆಕ್ಷೇಪಣೆ ಹಾಗೂ ದಾಖಲೆಗಳನ್ನು ಸಲ್ಲಿಸುವಂತೆ ತಾಂತ್ರಿಕ ಶಿಕ್ಷಣ ಮಂಡಳಿ ಹಾಗೂ ಕಾಲೇಜಿಗೆ ನಿರ್ದೇಶಿಸಿತು.
ಆಟೋಚಾಲಕರ ಮಕ್ಕಳಾದ ಮಡಿವಾಳದ ಟಿ.ರವಿ ಹಾಗೂ ವಿಜಯ್, ಕೋರಮಂಗಲದ ಆರ್.ಜೆ.ಎಸ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಡಿಪ್ಲೋಮಾ ಇನ್ ಮೆಕ್ಟ್ರಾನಿಕ್ಸ್ ಪದವಿಯ ಎರಡನೇ ಸೆಮಿಸ್ಟರ್ ವ್ಯಾಸಂಗ ಮಾಡುತ್ತಿದ್ದು, ಎರಡನೇ ಸೆಮಿಸ್ಟರ್ ಪರೀಕ್ಷೆಗೆ 350 ರೂ. ಪರೀಕ್ಷಾ ಶುಲ್ಕ ಪಾವತಿಸುವಂತೆ ಕಾಲೇಜು ಜ.28ರಂದು ಸುತ್ತೋಲೆ ಹೊರಡಿಸಿತ್ತು. ಆದರೆ, ಇಬ್ಬರೂ ಶುಲ್ಕ ಪಾವತಿಸಿರಲಿಲ್ಲ.
ನಂತರ 2 ಸಾವಿರ ರೂ. ದಂಡದೊಂದಿಗೆ ಶುಲ್ಕ ಪಾವತಿಗೆ ಮತ್ತೆ ಮೂರು ದಿನ ಕಾಲಾವಕಾಶ ನೀಡಿದ್ದರೂ ಶುಲ್ಕ ಪಾವತಿಸಲು ವಿದ್ಯಾರ್ಥಿಗಳು ವಿಫಲರಾಗಿದ್ದರು. ಹಾಜರಾತಿಯೂ ಇರಲಿಲ್ಲ. ಹೀಗಾಗಿ ಪರೀಕ್ಷೆ ಬರೆಯಲು ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಕಾಲೇಜು ತಿಳಿಸಿತ್ತು. ಕಾಲೇಜಿನ ಈ ಕ್ರಮ ಪ್ರಶ್ನಿಸಿ ವಿದ್ಯಾರ್ಥಿಗಳು ಕೋರ್ಟ್ ಮೆಟ್ಟಿಲೇರಿದ್ದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ](https://www.udayavani.com/wp-content/uploads/2024/07/8-20-150x90.jpg)
Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ
![Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!](https://www.udayavani.com/wp-content/uploads/2024/07/7-21-150x90.jpg)
Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!
![ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!](https://www.udayavani.com/wp-content/uploads/2024/07/5-24-150x90.jpg)
ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!
![Shivakumar](https://www.udayavani.com/wp-content/uploads/2024/07/Shivakumar-150x90.jpg)
Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್
![Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ](https://www.udayavani.com/wp-content/uploads/2024/07/8-19-150x90.jpg)
Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.