ರೇರಾ ವಿನಾಯಿತಿ ಕೋರಿ ಹೈ ಮೊರೆ ಹೋದ ಸಂಘಗಳು
Team Udayavani, Aug 1, 2017, 11:33 AM IST
ಬೆಂಗಳೂರು: ರಿಯಲ್ ಎಸ್ಟೇಟ್ ನಿಯಂತ್ರಣ ಮತ್ತು ಅಭಿವೃದ್ಧಿ ಕಾಯಿದೆಯಿಂದ (ರೇರಾ) ವಿನಾಯಿತಿ ನೀಡಲು ನಿರ್ದೇಶಿಸುವಂತೆ ಕೋರಿ ಗೃಹ ಹಾಗೂ ನಿವೇಶನ ನಿರ್ಮಾಣ ಸಹಕಾರ ಸಂಘಗಳು ಹೈಕೋರ್ಟ್ ಮೊರೆ ಹೋಗಿವೆ.
ಬಿಎಸ್ಎನ್ಎಲ್ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಹಾಲಿ /ನಿವೃತ್ತ ಉದ್ಯೋಗಿಗಳ ಗೃಹ ನಿರ್ಮಾಣ ಸಹಕಾರ ಸಂಘ ಸೇರಿದಂತೆ ಒಂಬತ್ತು ಸಹಕಾರ ಸಂಘಗಳು ಹೈಕೋರ್ಟ್ ಮೆಟ್ಟಿಲೇರಿದ್ದು, ಸೋಮವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಎಸ್ ಪಾಟೀಲ್ ಅವರಿದ್ದ ಏಕಸದಸ್ಯ ಪೀಠ, ಪ್ರತಿವಾದಿಗಳಾದ ಕೇಂದ್ರ ಕಾನೂನು ಇಲಾಖೆ ಕಾರ್ಯದರ್ಶಿ, ಕೇಂದ್ರ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ, ರಾಜ್ಯಸರ್ಕಾರದ ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ನೋಟೀಸ್ ಜಾರಿಗೊಳಿಸಿದೆ.
ರೇರಾ ಕಾಯಿದೆಯ ನಿಯಮಗಳು ಸಹಕಾರ ಸಂಘಗಳಿಗೆ ಅನ್ವಯಿಸಿರುವುದು ಸಂವಿಧಾನ ಬಾಹಿರ. ಸಹಕಾರ ಸಂಘಗಳು ಲಾಭ ರಹಿತವಾಗಿ ಬಡಾವಣೆ ರಚಿಸಿ ತನ್ನ ಸದಸ್ಯರಿಗೆ ನಿವೇಶನ ಹಂಚಿಕೆ ಮಾಡಲಿವೆ. ಇದರಲ್ಲಿ ಪರಿಶಿಷ್ಟ ಜಾತಿ ಹಾಗೂ ವರ್ಗಗಳಿಗೆ ಮೀಸಲಾತಿಯೂ ಸೇರಲಿದೆ.
ಜೊತೆಗೆ ರೇರಾ ಕಾಯಿದೆಯಲ್ಲಿನ ಕೆಲ ಅಂಶಗಳು ಸಹಕಾರ ಸಂಘಗಳ ಕಾಯಿದೆ 1959ರ ಕಲಂ 70ಕ್ಕೆ ವಿರುದ್ಧವಾಗಿವೆ. ಹೀಗಾಗಿ ಸಹಕಾರ ಸಂಘಗಳಿಗೆ ರೇರಾ ಕಾಯಿದೆಯಿಂದ ವಿನಾಯಿತಿ ನೀಡಬೇಕು ಹಾಗೂ ಅರ್ಜಿ ಇತ್ಯರ್ಥವಾಗುವ ತನಕ ರೇರಾ ಕಾಯಿದೆ ಜಾರಿಗೆ ಮಧ್ಯಂತರ ತಡೆಯಾಜ್ಞೆ ನೀಡಬೇಕು ಎಂಬುದು ಅರ್ಜಿದಾರರ ವಾದವಾಗಿದೆ.
ರಿಟ್ ಅರ್ಜಿ ಸಲ್ಲಿಸಿರುವವರಲ್ಲಿ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಉದ್ಯೋಗಿಗಳ ಕೋ ಆಪರೇಟಿವ್ ಸೊಸೈಟಿ, ರೈಲ್ವೆ ಉದ್ಯೋಗಿಗಳ ಹೌಸ್ ಬಿಲ್ಡಿಂಗ್ ಕೋ ಆಪರೇಟಿವ್ ಸೊಸೈಟಿ, ಸಹಕಾರ ನಗರ ಹೌಸ್ ಬಿಲ್ಡಿಂಗ್ ಕೋ ಆಪರೇಟಿವ್ ಸೊಸೈಟಿ ಸೇರಿವೆ. ಕೇಂದ್ರ ಸರ್ಕಾರ ಕಳೆದ ವರ್ಷ ಜಾರಿಗೊಳಿಸಿದ್ದ ರೇರಾ ಕಾಯಿದೆಗೆ ನಿಯಮಾವಳಿ ರೂಪಿಸಿ ಜುಲೈ 11 ರಂದು ರಾಜ್ಯಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಕಾವೇರಿ ಭವನದಲ್ಲಿ ಪ್ರಾಧಿಕಾರದ ಕಚೇರಿ ಸಹ ತೆರೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್