ತ್ಯಾಜ್ಯ ವಿಲೇವಾರಿ ಘಟಕ ಸ್ಥಗಿತಕ್ಕೆ ಹೈ ಸೂಚನೆ


Team Udayavani, Feb 20, 2020, 3:05 AM IST

tyjya

ಬೆಂಗಳೂರು: ನಗರದ ಮಹಾಲಕ್ಷ್ಮೀಪುರದ 2ನೇ ಹಂತದ ವಸತಿ ಪ್ರದೇಶದಲ್ಲಿ ಆರಂಭಿಸಿರುವ ತಾಜ್ಯ ವಿಂಗಡಣೆ ಮತ್ತು ವಿಲೇವಾರಿ ಘಟಕವನ್ನು ಒಂದು ತಿಂಗಳಲ್ಲಿ ಸ್ಥಗಿತಗೊಳಿಸಬೇಕು ಬಿಬಿಎಂಪಿಗೆ ಹೈಕೋರ್ಟ್‌ ಬುಧವಾರ ನಿರ್ದೇಶಿಸಿದೆ.

ತ್ಯಾಜ್ಯ ಘಟಕವನ್ನು ಸ್ಥಳಾಂತರಿಸಲು ಬಿಬಿಎಂಪಿಗೆ ನಿರ್ದೇಶಿಸುವಂತೆ ಕೋರಿ ಮಹಾಲಕ್ಷ್ಮೀಪುರ 2ನೇ ಹಂತದ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ಈ ವೇಳೆ ಕರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಪರ ವಕೀಲರು, ಈ ಘಟಕ ಆರಂಭಿಸಲು ಬಿಬಿಎಂಪಿಯು ಮಂಡಳಿಯಿಂದ ಪೂರ್ವಾನುಮತಿ ಪಡೆದಿಲ್ಲ. ಘಟಕವು ವಸತಿ ಪ್ರದೇಶದ 100 ಮೀ. ವ್ಯಾಪ್ತಿಯೊಳಗೆ ಇದೆ ಎಂದು ತಿಳಿಸಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ, ಘಟಕ ಆರಂಭಿಸಲು ಮಂಡಳಿಯಿಂದ ಪೂರ್ವಾನುಮತಿ ಪಡೆದಿಲ್ಲ.

ಇದು ಕಾನೂನು ಬಾಹಿರ ಕ್ರಮವಾಗಿದೆ. ಆದ್ದರಿಂದ ಒಂದು ತಿಂಗಳಲ್ಲಿ ಘಟಕದ ಎಲ್ಲಾ ಕಾರ್ಯ ಚಟುವಟಿಕೆ ಸ್ಥಗಿತಗೊಳಿಸಬೇಕು. ನಂತರ ಘಟಕವನ್ನು ಮುಂದುರಿಸಬೇಕೆಂದು ಉದ್ದೇಶಿಸಿದರೆ, ಅದಕ್ಕಾಗಿ ಅನುಮತಿ ಕೋರಿ ಮಂಡಳಿಗೆ ಕಾನೂನು ಪ್ರಕಾರ ಸೂಕ್ತ ಅರ್ಜಿ ಸಲ್ಲಿಸಬೇಕು.

ಒಂದೊಮ್ಮೆ ಘಟಕದ ಕಾರ್ಯ ಚಟುವಟಿಕೆಗಳನ್ನು ಮುಂದುವರಿಸದಿದ್ದರೆ, ಅದರ ಜಾಗವನ್ನು ಆಟದ ಮೈದಾನವಾಗಿ ಪರಿವರ್ತಿಸಬೇಕೆಂಬ ಅರ್ಜಿದಾರರ ಮನವಿಯನ್ನು ಪರಿಗಣಿಸಬೇಕು ಎಂದು ಬಿಬಿಎಂಪಿಗೆ ಸೂಚಿಸಿ ಅರ್ಜಿ ಇತ್ಯರ್ಥಪಡಿಸಿತು. ಮಹಾಲಕ್ಷ್ಮೀಪುರಂನ 2ನೇ ಹಂತದಲ್ಲಿ ಸರ್ವೇ ನಂಬರ್‌ 31/4ರಲ್ಲಿನ 1021 ಚ.ಮೀ. ವಿಸ್ತೀರ್ಣದ ನಿವೇಶನದಲ್ಲಿ ತ್ಯಾಜ್ಯ ಸಂಗ್ರಹಣೆ, ವಿಂಗಡಣೆ ಮತ್ತು ವಿಲೇವಾರಿ ಘಟಕವನ್ನು ಬಿಬಿಎಂಪಿ ಆರಂಭಿಸಿದೆ.

ಆದರೆ, ಘಟಕದ ಸುತ್ತಮುತ್ತ ಜನ ವಸತಿ ಪ್ರದೇಶವಿದೆ. ಅಲ್ಲದೆ, ಶಾಲೆ, ಆಸ್ಪತ್ರೆ, ವಾಣಿಜ್ಯ ಮಳಿಗೆ ಹಾಗೂ ಚಿತ್ರಮಂದಿರಗಳಿವೆ. ಘಟಕದಿಂದ ಸುತ್ತಮುತ್ತಲಿನ ಪರಿಸರ ಮಾಲಿನ್ಯವಾಗುತ್ತಿದೆ. ಸೊಳ್ಳೆಗಳ ಕಾಟ ಹೆಚ್ಚಾಗಿದೆ. ಹೀಗಾಗಿ ಘಟಕವನ್ನು ಸ್ಥಳಾಂತರಿಸಬೇಕು. ಸ್ಥಳಾಂತರದ ಬಳಿಕ ಆ ಜಾಗವನ್ನು ಆಟದ ಮೈದಾನವಾಗಿ ಮಾರ್ಪಡಿಸಿಕೊಡಲು ಬಿಬಿಎಂಪಿಗೆ ನೀರ್ದೇ ಶಿಸಬೇಕು ಎಂದು ಅರ್ಜಿದಾರರು ಕೋರಿದ್ದರು.

ಪಾಲಿಕೆಗೆ ನ್ಯಾಯಪೀಠದ ಸೂಚನೆಗಳು
-ಘಟಕ ಆರಂಭಿಸಲು ಮಂಡಳಿಯಿಂದ ಪೂರ್ವಾನುಮತಿ ಪಡೆಯದಿರುವುದು ಕಾನೂನು ಬಾಹಿರ ಕ್ರಮ.

-ಒಂದು ತಿಂಗಳಲ್ಲಿ ಘಟಕದ ಎಲ್ಲಾ ಕಾರ್ಯ ಚಟುವಟಿಕೆ ಸ್ಥಗಿತಗೊಳಿಸಬೇಕು.

-ಬಳಿಕ ಘಟಕ ಮುಂದುರಿಸಲು ಅನುಮತಿ ಕೋರಿ ಮಂಡಳಿಗೆ ಕಾನೂನು ಪ್ರಕಾರ ಅರ್ಜಿ ಸಲ್ಲಿಸಬೇಕು.

-ಒಂದೊಮ್ಮೆ ಘಟಕದ ಕಾರ್ಯ ಚಟುವಟಿಕೆಗಳನ್ನು ಮುಂದುವರಿಸದಿದ್ದರೆ, ಅದರ ಜಾಗವನ್ನು ಆಟದ ಮೈದಾನವಾಗಿ ಪರಿವರ್ತಿಸಬೇಕು.

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.