![modi (4)](https://www.udayavani.com/wp-content/uploads/2024/07/modi-4-4-415x256.jpg)
ರಾಜಕಾಲುವೆ ನಿರ್ವಹಣೆ ಸ್ಪಷ್ಟ ಯೋಜನೆಗೆ ಹೈ ತಾಕೀತು
Team Udayavani, Jul 4, 2018, 12:41 PM IST
![highcourt3.jpg](https://www.udayavani.com/wp-content/uploads/2018/07/4/highcourt3.jpg)
ಬೆಂಗಳೂರು: ರಾಜಕಾಲುವೆ ದುರಸ್ತಿ ಹಾಗೂ ನಿರ್ವಹಣೆಗೆ ಸಂಬಂಧಿಸಿದಂತೆ ಬಿಬಿಎಂಪಿ ಕಾರ್ಯವೈಖರಿಗೆ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಸಮಗ್ರ ಹಾಗೂ ಸ್ಪಷ್ಟ ಯೋಜನೆ ರೂಪಿಸಿ ವರದಿ ನೀಡುವಂತೆ ಸೂಚನೆ ನೀಡಿದೆ.
ಈ ಕುರಿತು ಸಿಟಿಜನ್ ಆ್ಯಕ್ಷನ್ ಫೋರಂ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಮಂಗಳವಾರ ನಡೆಸಿದ ಮುಖ್ಯನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಹಾಗೂ ನ್ಯಾ. ಕೃಷ್ಣ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ, ಪಾಲಿಕೆಯ ಕಾರ್ಯವೈಖರಿಗೆ ಅಸಮಾಧಾನ ವ್ಯಕ್ತಪಡಿಸಿತು. ವಿಚಾರಣೆ ವೇಳೆ ಇದುವರೆಗೂ ನಡೆದ ರಾಜಕಾಲುವೆ ದುರಸ್ತಿ, ನಿರ್ವಹಣೆಗೆ ಸಂಬಂಧಿಸಿದ ವಸ್ತುಸ್ಥಿತಿ ವರದಿಯನ್ನು ಪಾಲಿಕೆ ಪರ ವಕೀಲರು ನ್ಯಾಯಪೀಠದ ಗಮನಕ್ಕೆ ತಂದರು.
ಇದಕ್ಕೆ ತೃಪ್ತವಾಗದ ನ್ಯಾಯಪೀಠ, ಬಿಬಿಎಂಪಿ ಯಾವುದೇ ಕಾಮಗಾರಿ ನಡೆಸಿದರೂ ಸಾರ್ವಜನಿಕರ ರಕ್ಷಣೆಯ ಆದ್ಯತೆ ಗಮನದಲ್ಲಿಟ್ಟುಕೊಂಡು ತ್ವರಿತವಾಗಿ ಕೆಲಸ ಮಾಡಬೇಕು. ಮಳೆಗಾಲ ಆರಂಭವಾಗಿದ್ದು ಸೂಕ್ತ ರೀತಿಯಲ್ಲಿ ಕೆಲಸ ನಿರ್ವಹಿಸಲು ಸಕಾಲವಾಗಿದೆ ಎಂದು ಸಲಹೆ ನೀಡಿತು.
ಅಲ್ಲದೆ, ಪಾಲಿಕೆಯ ಸ್ಥಳೀಯ ಇಂಜಿಯರ್ಗಳು ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಪ್ರತಿನಿತ್ಯ ಕಾರ್ಯನಿರ್ವಹಿಸುತ್ತಿದ್ದಾರೆಯೇ ಎಂದೂ ಪ್ರಶ್ನಿಸಿದ ನ್ಯಾಯಪೀಠ, ರಾಜಕಾಲುವೆ ದುರಸ್ತಿ ಸೇರಿದಂತೆ ಮತ್ತಿತರ ಕಾರ್ಯಗಳ ನಿರ್ವಹಣೆಗೆ ಜಲಮಂಡಳಿ, ಮಾಲಿನ್ಯ ನಿಯಂತ್ರಣ ಮಂಡಳಿ ಜತೆಗೂಡಿ ಸಮಗ್ರ ಹಾಗೂ ಸ್ಪಷ್ಟ ಯೋಜನೆ ರೂಪಿಸಿ, ವರದಿ ನೀಡುವಂತೆ ನಿರ್ದೇಶಿಸಿ ವಿಚಾರಣೆಯನ್ನು ಮುಂದೂಡಿತು.
169ಕಿ.ಮೀ. ರಾಜಕಾಲುವೆ ಕಾಮಗಾರಿ ಪೂರ್ಣ: ರಾಜಕಾಲುವೆ ಹೂಳೆತ್ತುವುದು, ದುರಸ್ತಿ ಸೇರಿ ಇತರೆ ಕಾಮಗಾರಿಗಳ ಬಗ್ಗೆ ಜೂನ್ 11ವರೆಗೆ ನಡೆದಿರುವ ವಸ್ತುಸ್ಥಿತಿ ವರದಿಯ ಪ್ರಮಾಣಪತ್ರವನ್ನು ಪಾಲಿಕೆ ಹೈಕೋರ್ಟ್ಗೆ ಸಲ್ಲಿಸಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 169 ಕಿ.ಮೀ ಉದ್ದದ ರಾಜಕಾಲುವೆ ದುರಸ್ತಿ ಪೂರ್ಣಗೊಂಡಿದ್ದು, 150 ಕಿ.ಮೀ ಉದ್ದದ ಕಾಲುವೆಯಲ್ಲಿ ಹೂಳೆತ್ತುವ ಕಾರ್ಯ ಪೂರ್ಣಗೊಂಡಿದೆ.
ಪ್ರತಿದಿನ ರಾಜಕಾಲುವೆ ಸ್ವತ್ಛತೆ ನಿರ್ವಹಣೆ ಮಾಡಲಾಗುತ್ತಿದೆ. ಯಶವಂತಪುರ ಸಮೀಪ 20 ಕಿ.ಮೀ ಉದ್ದದ ರಾಜಕಾಲುವೆ ದುರಸ್ತಿಗೆ ಹೊಸ ಟೆಂಡರ್ ಕರೆಯಲಾಗಿದೆ ಎಂದು ತಿಳಿಸಿದೆ. ರಾಜಕಾಲುವೆಗೆ ತ್ಯಾಜ್ಯ ಸೇರ್ಪಡೆಯಾಗುವುದನ್ನು ತಡೆಯುವ ಸಲುವಾಗಿ 118 ಪ್ರದೇಶಗಳಲ್ಲಿ ಹಾದು ಹೋಗಿರುವ 179.85 ಕಿ.ಮೀ. ಉದ್ದದ ಮಾರ್ಗಕ್ಕೆ ತಂತಿ ಬೇಲಿ ಹಾಕಲಾಗಿದೆ ಎಂದು ವಿವರಿಸಿದೆ.
ಮಳೆಗಾಲದ ನಿರ್ವಹಣೆಗೆ 63 ನಿಯಂತ್ರಣ ಕೊಠಡಿ!: ಮಳೆಗಾಲದಲ್ಲಿ ಪ್ರವಾಹ ಸೇರಿ ಯಾವುದೇ ಅವಘಡದ ಸ್ಥಿತಿ ಎದುರಾದರೂ ಸಮರ್ಪಕವಾಗಿ ನಿರ್ವಹಿಸಲು ಪಾಲಿಕೆ ಎಲ್ಲ ರೀತಿಯಲ್ಲೂ ಸಿದ್ಧತೆ ಮಾಡಿಕೊಂಡಿದೆ. ಆಯಾ ವಲಯ ವಿಭಾಗದ ಜಂಟಿ ಆಯುಕ್ತರ ನೇತೃತ್ವದಲ್ಲಿ 63 ನಿಯಂತ್ರಣ ಕೊಠಡಿಗಳನ್ನು ತೆರೆಯಲಾಗಿದ್ದು, ದಿನದ 24 ಗಂಟೆಗಳ ಕಾಲವೂ ಕಾರ್ಯನಿರ್ವಹಿಸಲಿವೆ. ಅಲ್ಲದೆ, ತುರ್ತು ಸಂದರ್ಭದಲ್ಲಿ ಜನರ ಸಹಾಯಕ್ಕೆ ಧಾವಿಸಲು, ಮಳೆಗೆ ಬಿದ್ದುಹೋದ ಮರಗಳನ್ನು ತೆರವುಗೊಳಿಸಲು ವಾಹನ ಸೇರಿ ಸಿಬ್ಬಂದಿ ಇರಲಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದೆ.
ಟಾಪ್ ನ್ಯೂಸ್
![modi (4)](https://www.udayavani.com/wp-content/uploads/2024/07/modi-4-4-415x256.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ](https://www.udayavani.com/wp-content/uploads/2024/07/8-20-150x90.jpg)
Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ
![Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!](https://www.udayavani.com/wp-content/uploads/2024/07/7-21-150x90.jpg)
Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!
![ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!](https://www.udayavani.com/wp-content/uploads/2024/07/5-24-150x90.jpg)
ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!
![Shivakumar](https://www.udayavani.com/wp-content/uploads/2024/07/Shivakumar-150x90.jpg)
Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್
![Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ](https://www.udayavani.com/wp-content/uploads/2024/07/8-19-150x90.jpg)
Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ
MUST WATCH
ಹೊಸ ಸೇರ್ಪಡೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.