ಹೆದ್ದಾರಿ ಬಾರ್‌ಗಳ ನಶೆ ಕಿಕ್‌ ಔಟ್‌! ಮಧ್ಯರಾತ್ರಿಯಿಂದಲೇ ಆದೇಶ ಜಾರಿ


Team Udayavani, Jul 1, 2017, 3:10 AM IST

Bar-30-6.jpg

ಬೆಂಗಳೂರು: ಸುಪ್ರೀಂಕೋರ್ಟ್‌ ಆದೇಶದ ಹಿನ್ನೆಲೆಯಲ್ಲಿ ಶುಕ್ರವಾರ ಮಧ್ಯರಾತ್ರಿಯಿಂದಲೇ ರಾಷ್ಟ್ರೀಯ ಹೆದ್ದಾರಿಯ 500 ಮೀಟರ್‌ ವ್ಯಾಪ್ತಿಯಲ್ಲಿರುವ ಬಾರ್‌ಗಳಿಗೆ ಬೀಗ ಬಿದ್ದಿದೆ. ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿ ಬದಿಯಲ್ಲಿ ಬಾರ್‌ಗಳಿರುವುದರಿಂದ ರಸ್ತೆ ಅಪಘಾತಗಳು ಹೆಚ್ಚಾಗುತ್ತವೆ ಎನ್ನುವ ಕಾರಣಕ್ಕೆ ಸುಪ್ರೀಂಕೋರ್ಟ್‌ ಫೆಬ್ರವರಿಯಲ್ಲಿ ಹೆದ್ದಾರಿ ಪಕ್ಕದ ಬಾರ್‌ಗಳನ್ನು ಬಂದ್‌ ಮಾಡುವಂತೆ ಆದೇಶ ಹೊರಡಿಸಿತ್ತು. ಅದರ ಅನ್ವಯ ಈಗಾಗಲೇ ರಾಜ್ಯ ಅಬಕಾರಿ ಇಲಾಖೆ ರಾಷ್ಟ್ರೀಯ ಹೆದ್ದಾರಿಯಲ್ಲಿ 500 ಮೀಟರ್‌ ವ್ಯಾಪ್ತಿಯೊಳಗಿರುವ ಎಲ್ಲ ಬಾರ್‌ಗಳನ್ನು ಸ್ಥಳಾಂತರಿಸುವಂತೆ ನೊಟೀಸ್‌ ನೀಡಿದೆ.

ಶುಕ್ರವಾರ ಮಧ್ಯರಾತ್ರಿ ವೇಳೆಗೆ ಬಾರ್‌ಗಳನ್ನು ಸ್ಥಳಾಂತರಿಸದಿದ್ದರೆ, ಅಂತಹ ಬಾರ್‌ಗಳ ಪರವಾನಿಗೆ ನವೀಕರಣ ಮಾಡದಿರಲು ಇಲಾಖೆ ನಿರ್ಧರಿಸಿದೆ. ಸುಪ್ರೀಂಕೋರ್ಟ್‌ ಆದೇಶದನ್ವಯ ಸುಮಾರು 6,018 ಬಾರ್‌ಗಳು ಬಾಗಿಲು ಹಾಕುವ ಸ್ಥಿತಿ ನಿರ್ಮಾಣವಾಗಿದೆ. ಸುಪ್ರೀಂ ಕೋರ್ಟ್‌ ಆದೇಶದ ಬಳಿಕ ರಾಜ್ಯ ಸರಕಾರ ಆದೇಶ ಪುನರ್‌ ಪರಿಶೀಲನೆಗೆ ಅರ್ಜಿ ಸಲ್ಲಿಸಿದ್ದು, ಜುಲೈ ಮೊದಲ ವಾರದಲ್ಲಿ ವಿಚಾರಣೆಗೆ ಬರುವ ಸಾಧ್ಯತೆ ಇದೆ. ಈ  ನಡುವೆ ರಾಜ್ಯ ಸರಕಾರ ರಾಷ್ಟ್ರೀಯ ಹೆದ್ದಾರಿಯನ್ನು ಡಿ ನೋಟಿಫೈ ಮಾಡಿ, ನಗರ ಸ್ಥಳೀಯ ಸಂಸ್ಥೆಗಳ ರಸ್ತೆಯನ್ನಾಗಿ ಪರಿವರ್ತಿಸಲು ಕೇಂದ್ರ ಸರಕಾರಕ್ಕೆ ಮನವಿ ಮಾಡಿಕೊಂಡಿದೆ. ರಾಜ್ಯದಲ್ಲಿ 854 ಕಿಲೋಮೀಟರ್‌ ರಾಷ್ಟ್ರೀಯ ಹೆದ್ದಾರಿ ಇದ್ದು, ಸುಮಾರು 1,500 ಬಾರ್‌ಗಳು 500 ಮೀಟರ್‌ ವ್ಯಾಪ್ತಿಯಲ್ಲಿ ಬರುತ್ತವೆ. ಕೇಂದ್ರ ಸರಕಾರ ರಾಷ್ಟ್ರೀಯ ಹೆದ್ದಾರಿಯನ್ನು ಸ್ಥಳೀಯ ನಗರ ರಸ್ತೆಗಳಾಗಿ ಪರಿವರ್ತಿಸಲು ಇನ್ನೂ ತೀರ್ಮಾನ ತೆಗೆದುಕೊಳ್ಳದ ಹಿನ್ನೆಲೆಯಲ್ಲಿ ಎಲ್ಲ ಬಾರ್‌ಗಳಿಗೂ ಬಾರ್‌ ಮಾಲಕರು ಬೀಗ ಹಾಕುವುದು ಅನಿವಾರ್ಯವಾಗಿದೆ.

ಇದಲ್ಲದೇ ರಾಜ್ಯ ಹೆದ್ದಾರಿ ವ್ಯಾಪ್ತಿಯಲ್ಲಿ ಸುಮಾರು 3 ಸಾವಿರ ಬಾರ್‌ಗಳಿದ್ದು, ರಾಜ್ಯ ಸರಕಾರ ನಗರ ವ್ಯಾಪ್ತಿಯಲ್ಲಿ ಬರುವ ರಾಜ್ಯ ಹೆದ್ದಾರಿಗಳನ್ನು ನಗರ ಸ್ಥಳೀಯ ರಸ್ತೆಗಳಾಗಿ ಪರಿವರ್ತಿಸಿರುವುದರಿಂದ ಸುಮಾರು 3 ಸಾವಿರ ಬಾರ್‌ ಮಾಲಕರು ನಿಟ್ಟುಸಿರು ಬಿಡುವಂತಾಗಿದೆ. ಆದರೆ, ಗ್ರಾಮೀಣ ಪ್ರದೇಶದಲ್ಲಿ ಪಂಚಾಯತ್‌ ವ್ಯಾಪ್ತಿಯಲ್ಲಿ 220 ಮೀಟರ್‌ ವ್ಯಾಪ್ತಿಯ ಬಾರ್‌ಗಳು ಬಂದ್‌ ಮಾಡಬೇಕಿದೆ.

ಕೇಂದ್ರದತ್ತ ರಾಜ್ಯದ ಚಿತ್ತ
ಹೆದ್ದಾರಿ ಬದಿಯಿಂದ 500 ಮೀಟರ್‌ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿರುವ ಸುಪ್ರೀಂಕೋರ್ಟ್‌ನ ಆದೇಶದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರದ ಮುಂದಿನ ಕ್ರಮದ ಬಗ್ಗೆ ರಾಜ್ಯ ಸರಕಾರ ಎದುರು ನೋಡುತ್ತಿದೆ. ಕೇಂದ್ರ ಹೆದ್ದಾರಿ ಮತ್ತು ಭೂ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರ ಬರೆದು, ಈ ವಿಚಾರದಲ್ಲಿ ಮಧ್ಯಪ್ರವೇಶಿಸಿ ಗೊಂದಲ ಬಗೆಹರಿಸುವಂತೆ ಕೋರಿದ್ದಾರೆ. ಆದರೆ ಇದು ಕರ್ನಾಟಕದ ಸಮಸ್ಯೆ ಮಾತ್ರವಲ್ಲ, ಇಡೀ ದೇಶದ ಸಮಸ್ಯೆ. ಹೀಗಾಗಿ ಏಕರೂಪದ ನೀತಿ ರೂಪಿಸಬೇಕಿದೆ. ಇದಕ್ಕೆ ಸ್ವಲ್ಪ ಕಾಲಾವಕಾಶ ಬೇಕು. ಅಲ್ಲಿವರೆಗೆ ಸುಪ್ರೀಂಕೋರ್ಟ್‌ ಆದೇಶ ಪಾಲನೆ ಅನಿವಾರ್ಯ ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ ಎಂದು ಹೇಳಲಾಗಿದೆ.

ಬಾರ್‌ ವ್ಯವಹಾರ
– 6,018 – ಹೆದ್ದಾರಿಗಳಲ್ಲಿರುವ ಬಾರ್‌ಗಳ ಸಂಖ್ಯೆ
– 54 – ರಾಜ್ಯದಲ್ಲಿನ ರಾಷ್ಟ್ರೀಯ ಹೆದ್ದಾರಿಯ ಉದ್ದ
– 1,500 – 500 ಮೀಟರ್‌ ವ್ಯಾಪ್ತಿಗೆ ಬರುವ ಬಾರ್‌ಗಳು
– 3,000 – ರಾಜ್ಯ ಹೆದ್ದಾರಿಯಲ್ಲಿನ ಬಾರ್‌ಗಳು

ಮಹಾತ್ಮಾ ಗಾಂಧಿ ರಸ್ತೆಯಲ್ಲೂ ಬಾರ್‌ಗೆ ಬೀಗ
ಬೆಂಗಳೂರು:
ರಾಜಧಾನಿ ಬೆಂಗಳೂರಿನ ಪ್ರತಿಷ್ಠಿತ ರಸ್ತೆಗಳಾದ ಎಂ.ಜಿ.ರಸ್ತೆ ಹಾಗೂ ಬ್ರಿಗೇಡ್‌ ರಸ್ತೆಗಳ ಭಾಗಗಳಲ್ಲಿ ಶುಕ್ರವಾರ ಮಧ್ಯರಾತ್ರಿಯಿಂದಲೇ ಮಾರಾಟ ಸ್ಥಗಿತಗೊಳ್ಳಲಿದೆ. ಎಂ.ಜಿ. ರಸ್ತೆ ಕೂಡ ದಾಖಲೆಗಳಲ್ಲಿ ಹೆದ್ದಾರಿ ಎಂದೇ ಪರಿಗಣಿಸಿರುವುದರಿಂದ ಅನಿವಾರ್ಯವಾಗಿ ಬಂದ್‌ ಮಾಡಬೇಕಿದೆ. ಇಲ್ಲಿನ 138 ಬಾರ್‌, ಪಬ್‌ಗಳು ಸ್ಥಗಿತಗೊಳ್ಳಲಿವೆ.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.