ಹಿಂದಿ ಇನ್ನೂ ಹಾಗೇ ಇದೆ ಮೆರೆ ದೋಸ್ತ್!


Team Udayavani, Aug 29, 2017, 11:51 AM IST

metro-hindi-(2).jpg

ಬೆಂಗಳೂರು: “ನಮ್ಮ ಮೆಟ್ರೋ’ ನಿಲ್ದಾಣಗಳಲ್ಲಿರುವ ಹಿಂದಿ ತೆರವಿಗೆ ಸಂಬಂಧಿಸಿದಂತೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿ ತಿಂಗಳು ಕಳೆದರೂ, ಬಿಎಂಆರ್‌ಸಿ “ಕ್ಯಾರೆ’ ಎನ್ನುತ್ತಿಲ್ಲ. ಬಹುತೇಕ ಎಲ್ಲ ಕಡೆಗಳಲ್ಲಿ ಈಗಲೂ “ಹಿಂದಿ’ ರಾರಾಜಿಸುತ್ತಿದೆ. ಈ ಹಿನ್ನೆಲೆಯಲ್ಲಿ ಮತ್ತೂಂದು ಸುತ್ತಿನ ಹೋರಾಟಕ್ಕೆ ಕನ್ನಡಪರ ಸಂಘಟನೆಗಳು ಚಿಂತನೆ ನಡೆಸಿವೆ.

ಹಿಂದಿ ಬಳಕೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ನಾಡಿನ ಜನರ ಭಾವನೆ ಮತ್ತು ಸಾಂಸ್ಕೃತಿಕ ಆಶೋತ್ತರಗಳನ್ನು ಗೌರವಿಸುವುದು ಸರ್ಕಾರದ ಕರ್ತವ್ಯ. ಈ ಹಿನ್ನೆಲೆಯಲ್ಲಿ ರಾಜ್ಯದ ಅಧಿಕೃತ ಭಾಷಾ ನೀತಿ ಕನ್ನಡ ಮತ್ತು ಇಂಗ್ಲಿಷ್‌ ಅನ್ನು ಬಳಸಬೇಕು. ಹಿಂದಿ ಭಾಷೆ ಮತ್ತು ಲಿಪಿ ಬಳಕೆ ಮಾಡದೆ, ಮರುವಿನ್ಯಾಸಗೊಳಿಸಬೇಕು ಎಂದು ಮುಖ್ಯಮಂತ್ರಿ ಜುಲೈ ಕೊನೆಯ ವಾರದಲ್ಲಿ ಬಿಎಂಆರ್‌ಸಿಗೆ ಸೂಚನೆ ನೀಡಿದ್ದರು.

ಮೆಟ್ರೋ ನಿಲ್ದಾಣಗಳಲ್ಲಿ ಹಿಂದಿ ಬಳಕೆಗೆ ಸಂಬಂಧಿಸಿದಂತೆ ಕೇಂದ್ರಕ್ಕೆ ಬರೆದ ಪತ್ರದಲ್ಲೂ ಮುಖ್ಯಮಂತ್ರಿ ಇದನ್ನು ಸ್ಪಷ್ಟಪಡಿಸಿದ್ದಾರೆ. ಆದರೆ, ಇದುವರೆಗೆ ಮೂರ್‍ನಾಲ್ಕು ನಿಲ್ದಾಣಗಳಲ್ಲಿ ಮಾತ್ರ ಹಿಂದಿ ತೆರವಾಗಿದ್ದು, ಉಳಿದೆಡೆ ಯಥಾಸ್ಥಿತಿ ಮುಂದುವರಿದಿದೆ. 

ಎಲ್ಲೆಲ್ಲಿ ತೆರವಾಗಿದೆ?
ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸೇರಿದಂತೆ ಕನ್ನಡಪರ ಸಂಘಟನೆಗಳ ನಿರಂತರ ಹೋರಾಟದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಮೆಟ್ರೋ ನಿಲ್ದಾಣಗಳಲ್ಲಿ ಹಿಂದಿಯೇತರ ಫ‌ಲಕಗಳ ಮರುವಿನ್ಯಾಸಕ್ಕೆ ಬಿಎಂಆರ್‌ಸಿಗೆ ಸೂಚನೆ ನೀಡಿದ್ದರು. ಇದಾಗಿ ಒಂದು ತಿಂಗಳಾಗಿದೆ. ಈ ಅವಧಿಯಲ್ಲಿ ಕೇವಲ ಬೈಯಪ್ಪನಹಳ್ಳಿ, ಟ್ರಿನಿಟಿ ವೃತ್ತ, ಎಂ.ಜಿ. ರಸ್ತೆ, ಚಿಕ್ಕಪೇಟೆ, ಕೆ.ಆರ್‌. ಮಾರುಕಟ್ಟೆಯ ಮೆಟ್ರೋ ನಿಲ್ದಾಣಗಳಿಗೆ ಮಾತ್ರ ಹಿಂದಿಯಿಂದ ಮುಕ್ತಿ ಸಿಕ್ಕಿದೆ. 

ಮಹಾಕವಿ ಕುವೆಂಪು ರಸ್ತೆ, ಶ್ರೀರಾಮಪುರ, ರಾಜಾಜಿನಗರ ಸೇರಿದಂತೆ ಅನೇಕ ನಿಲ್ದಾಣಗಳಲ್ಲಿ ಈಗಲೂ ಹಿಂದಿ ಎಂದಿನಂತಿದೆ. ಮುಖ್ಯಮಂತ್ರಿ ಸೂಚನೆ ನೀಡಿದ ತಕ್ಷಣ ತೋರಿದ ಉತ್ಸಾಹವನ್ನು ಈಗ ಬಿಎಂಆರ್‌ಸಿ ತೋರಿಸುತ್ತಿಲ್ಲ. ನೆಪಮಾತ್ರಕ್ಕೆ ಮೂರ್‍ನಾಲ್ಕು ನಿಲ್ದಾಣಗಳಲ್ಲಿ ಹಿಂದಿ ತೆರವು ಮಾಡಲಾಗಿದೆ. ನಂತರದಲ್ಲಿ ಅದನ್ನು ಮರೆತಂತಿದೆ. ಈ ಬಗ್ಗೆ ಕೇಳಿದರೆ, ಸ್ವಲ್ಪ ಸಮಯ ಹಿಡಿಯುತ್ತದೆ. ಹಂತ-ಹಂತವಾಗಿ ತೆರವುಗೊಳಿಸಲಾಗುವುದು ಎಂಬ ಸಮಜಾಯಿಷಿ ನೀಡಲಾಗುತ್ತದೆ.

ಆದರೆ ಫ‌ಲಕಗಳ ಮರುವಿನ್ಯಾಸಕ್ಕೆ ವಿಳಂಬವಾದರೂ, ಧ್ವನಿ ಆಧಾರಿತ ಹಿಂದಿ ಪ್ರಕಟಣೆಗಳನ್ನು ಕೆಲವೇ ನಿಮಿಷಗಳಲ್ಲಿ ಸ್ಥಗಿತಗೊಳಿಸಬಹುದು. ಸಾಧನದಲ್ಲಿ “ಹಿಂದಿ’ಯನ್ನು ಡಿಸೇಬಲ್‌ ಮಾಡಿದರೆ ಸಾಕು. ಆದರೆ, ಈ ನಿಟ್ಟಿನಲ್ಲಿ ನಿಗಮ ಮನಸ್ಸು ಮಾಡುತ್ತಿಲ್ಲ. ಉದ್ದೇಶಪೂರ್ವಕವಾಗಿ ವಿಳಂಬ ಮಾಡಲಾಗುತ್ತಿದೆ ಎಂದು ಬನವಾಸಿ ಬಳಗದ ಅರುಣ್‌ ಜಾವಗಲ್‌ ಆರೋಪಿಸಿದ್ದಾರೆ. 

ಕರವೇ ರಿಯಾಲಿಟಿ ಚೆಕ್‌
ಮುಖ್ಯಮಂತ್ರಿ ಸೂಚನೆ ನಂತರವೂ ಹಿಂದಿ ತೆರವು ಸಮರ್ಪಕವಾಗಿ ಆಗದಿರುವುದು ಗಮನಕ್ಕೆ ಬಂದಿದೆ. ಆದ್ದರಿಂದ ಮೂರ್‍ನಾಲ್ಕು ದಿನಗಳಲ್ಲಿ ಆಯಾ ವಿಧಾನಸಭೆ ಕ್ಷೇತ್ರಗಳಲ್ಲಿ ಇರುವ ಕರವೇ ಕಾರ್ಯಕರ್ತರು ಎಲ್ಲ ನಿಲ್ದಾಣಗಳಿಗೆ ತೆರಳಿ, ರಿಯಾಲಿಟಿ ಚೆಕ್‌ ನಡೆಸಲಿದ್ದಾರೆ. ನಂತರ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, ಅವರ ಗಮನಕ್ಕೆತರಲಾಗುವುದು. ಇದಕ್ಕೂ ಸ್ಪಂದನೆ ದೊರೆಯದಿದ್ದರೆ ಹಿಂದಿ ವಿರುದ್ಧದ ಹೋರಾಟಕ್ಕೆ ಕರೆ ನೀಡಲಾಗುವುದು. ಒಟ್ಟಾರೆ ಸಂಪೂರ್ಣ ಹಿಂದಿ ತೆರವುಗೊಳಿಸುವವರೆಗೂ ಬಿಡುವುದಿಲ್ಲ ಎಂದು ವೇದಿಕೆ ಅಧ್ಯಕ್ಷ ಟಿ.ಎ. ನಾರಾಯಣಗೌಡ ತಿಳಿಸಿದ್ದಾರೆ.  

ಹಿಂದಿ ತೆರವಾಗುವವರೆಗೂ ಬಿಡಲ್ಲ
ಸಂಪೂರ್ಣ ಹಿಂದೆ ತೆರವಾಗದಿರುವ ಕುರಿತು ಪ್ರತಿಕ್ರಿಯಿಸಿದ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್‌.ಜಿ. ಸಿದ್ದರಾಮಯ್ಯ, “ಯಾವುದನ್ನೂ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವವರೆಗೂ ನಾನು ಬಿಡುವುದಿಲ್ಲ. ಇದು ಮೆಟ್ರೋ ನಿಲ್ದಾಣಗಳಲ್ಲಿ ಹಿಂದಿ ಹೇರಿಕೆಗೂ ಅನ್ವಯಿಸುತ್ತದೆ. ಅದೇನೇ ಇರಲಿ, ತಾಂತ್ರಿಕ ತೊಂದರೆಗಳಿಂದ ಮೆಟ್ರೋದಲ್ಲಿನ ಹಿಂದಿ ತೆರವಿಗೆ ತಡವಾಗಿರಬಹುದು. ಹಂತ-ಹಂತವಾಗಿ ತೆರವುಗೊಳಿಸುತ್ತಾರೆ ಎಂಬ ಭರವಸೆ ಇದೆ’ ಎಂದರು.

ಈಗಾಗಲೇ ಮೆಟ್ರೋ ನಿಗಮಕ್ಕೆ ಭೇಟಿ ನೀಡಿ, ರಾಜ್ಯದ ಅಧಿಕೃತ ಭಾಷಾ ನೀತಿ ಅನ್ವಯ ಕನ್ನಡ ಮತ್ತು ಇಂಗ್ಲಿಷ್‌ ಮಾತ್ರ ಬಳಸಬೇಕು. ಹಿಂದಿಯಿಂದಮುಕ್ತಿ ನೀಡಬೇಕು. ಇಲ್ಲದಿದ್ದರೆ, ಹಕ್ಕುಚ್ಯುತಿ ಮಂಡನೆಗೆ ಶಿಫಾರಸು ಮಾಡುವುದಾಗಿಯೂ ಎಚ್ಚರಿಸಲಾಗಿದೆ. ಈ ಮಧ್ಯೆ ಮುಖ್ಯಮಂತ್ರಿ ಕೂಡ ಸೂಚನೆ ನೀಡಿದ್ದಾರೆ. ಈಗ ಬಿಎಂಆರ್‌ಸಿಗೆ ಮತ್ತೆ ಎಚ್ಚರಿಕೆ ಪತ್ರ ಬರೆಯುವುದಾಗಿ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.