ರಾಜಧಾನಿ ರೋಡಲ್ಲೆಲ್ಲಾ ಗುಂಡಿ


Team Udayavani, Jun 4, 2018, 12:10 PM IST

rajadhani.jpg

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಹಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಗೆ ಪ್ರಮುಖ ರಸ್ತೆಗಳು ಗುಂಡಿಮಯವಾಗಿದ್ದು, ವಾಹನ ಸವಾರರು ಆತಂಕದಿಂದ ವಾಹನ ಚಾಲನೆ ಮಾಡುವಂತಾಗಿದೆ.

ನಗರದಲ್ಲಿ ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಮುಂಗಾರು ಪೂರ್ವ ಮಳೆಗೆ ಪ್ರಮುಖ ರಸ್ತೆಗಳಲ್ಲಿ ಗುಂಡಿಗಳು ಸೃಷ್ಟಿಯಾಗಿವೆ. ಈ ಹಿಂದೆ ಪಾಲಿಕೆ ಅಧಿಕಾರಿಗಳು ವೈಜ್ಞಾನಿಕವಾಗಿ ಗುಂಡಿಗಳನ್ನು ದುರಸ್ತಿಗೊಳಿಸದ ಪರಿಣಾಮ ಅಪಘಾತಗಳು ಸಂಭವಿಸುವ ಆತಂಕ ಎದುರಾಗಿದೆ. 

ಕಳೆದ ವರ್ಷ ನಗರದಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಬಹುತೇಕ ರಸ್ತೆಗಳಲ್ಲಿ ಗುಂಡಿಗಳು ಕಾಣಿಸಿಕೊಂಡಿದ್ದವು. ಗುಂಡಿಗಳ ಕಾರಣದಿಂದಲೇ ಮೂವರು ಅಮಾಯಕರು ಪ್ರಾಣ ಕಳೆದುಕೊಂಡಿದ್ದರು. ಆ ನಂತರವೂ ಪಾಲಿಕೆ ಅಧಿಕಾರಿಗಳು ಎಚ್ಚೆತ್ತುಕೊಳ್ಳದ ಹಿನ್ನೆಲೆಯಲ್ಲಿ ಗುಂಡಿಗಳ ಸಂಖ್ಯೆ ಹೆಚ್ಚುತ್ತಿದ್ದು, ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. 

ಕಳಪೆ ಕಾಮಗಾರಿ, ಅವೈಜ್ಞಾನಿಕ ರಸ್ತೆ ನಿರ್ವಹಣೆ ಹಾಗೂ ವಿವಿಧ ಉದ್ದೇಶಗಳಿಗಾಗಿ ರಸ್ತೆ ಅಗೆದು ನಂತರದಲ್ಲಿ ದುರಸ್ತಿಗೊಳಿಸದ ಹಿನ್ನೆಲೆಯಲ್ಲಿ ರಸ್ತೆಗಳಲ್ಲಿ ಭಾರಿ ಗಾತ್ರದ ಗುಂಡಿಗಳು ಸೃಷ್ಟಿಯಾಗಿವೆ. ಆರ್ಟಿರಿಯಲ್‌, ಸಬ್‌ ಆರ್ಟಿರಿಯಲ್‌ ಹಾಗೂ ವಾರ್ಡ್‌ ರಸ್ತೆಗಳ ಹೀಗೆ ಎಲ್ಲ ಕಡೆಗಳಲ್ಲಿ ಗುಂಡಿಗಳಿದ್ದು ಮಳೆ ನೀರು ಗುಂಡಿಗಳಲ್ಲಿ ತುಂಬುವುದರಿಂದ ವಾಹನ ಸವಾರರಿಗೆ ಗುಂಡಿ ಇರುವಿಕೆ ತಿಳಿಯದೆ ಅಪಘಾತ ಸಂಭವಿಸುವ ಸಾಧ್ಯತೆಯಿದೆ. 

ಸಾವಿರಾರು ಗುಂಡಿ: ಮಳೆಗಾಲ ಆರಂಭವಾಗುವ ಮೊದಲೇ ಬಿಬಿಎಂಪಿ ವ್ಯಾಪ್ತಿಯಲ್ಲಿ ಸುಮಾರು 8 ಸಾವಿರಕ್ಕೂ ಹೆಚ್ಚು ರಸ್ತೆ ಗುಂಡಿಗಳು ಸೃಷ್ಟಿಯಾಗಿದ್ದು, ಶೇ.50ಕ್ಕಿಂತ ಹೆಚ್ಚಿನ ಗುಂಡಿಗಳು ಮಾತ್ರ ದುರಸ್ತಿಯಾಗಿವೆ. 15 ದಿನಗಳ ಹಿಂದೆ ಪಾಲಿಕೆ ಅಧಿಕಾರಿಗಳು ಆಯುಕ್ತರಿಗೆ ವರದಿ ಸಲ್ಲಿಸಿದಾಗ ನಗರದಲ್ಲಿ 4 ಸಾವಿರ ಗುಂಡಿಗಳಿವೆ ಎಂದು ತಿಳಿಸಿದ್ದರು. ಆದರೆ, ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಗುಂಡಿಗಳ ಸಂಖ್ಯೆ ಹೆಚ್ಚುತ್ತಿದೆ. 

ಬಿಬಿಎಂಪಿ ವತಿಯಿಂದ ರಸ್ತೆ ನಿರ್ಮಾಣ ಗುತ್ತಿಗೆ ಪಡೆದವರು ಮೂರು ವರ್ಷಗಳು ನಿರ್ವಹಣೆ ನೋಡಿಕೊಳ್ಳಬೇಕು. ಆದರೆ, ಪಾಲಿಕೆಯ ವ್ಯಾಪ್ತಿಯಲ್ಲಿ ಗುತ್ತಿಗೆದಾರರು ಸಮರ್ಪಕವಾಗಿ ರಸ್ತೆ ಗುಂಡಿಗಳನ್ನು ಮುಚ್ಚುತ್ತಿಲ್ಲ. ಪರಿಣಾಮ ಜನರು ತೊಂದರೆ ಅನುಭವಿಸುವಂತಾಗಿದೆ. ಇದರೊಂದಿಗೆ ಹಲವು ಕಡೆಗಳಲ್ಲಿ ಕಳೆದ ಎರಡು ಮೂರು ತಿಂಗಳಲ್ಲಿ ಡಾಂಬರೀಕರಣ ಮಾಡಿರುವ ರಸ್ತೆಗಳಲ್ಲಿ ಗುಂಡಿಗಳು ಕಾಣಿಸಿಕೊಂಡಿವೆ.

ಈಡೇರದ ವೈಟ್‌ಟಾಪಿಂಗ್‌ ಉದ್ದೇಶ: ನಗರದಲ್ಲಿ ರಸ್ತೆಗಳ ಗುಂಡಿಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಬಿಬಿಎಂಪಿ ವ್ಯಾಪ್ತಿಯ ಪ್ರಮುಖ ರಸ್ತೆಗಳಲ್ಲಿ ವೈಟ್‌ಟಾಪಿಂಗ್‌ ಕಾಮಗಾರಿ ಕೈಗೆತ್ತಿಕೊಂಡಿದೆ. ಅದರಂತೆ ನಗರದ ಪ್ರಮುಖ 29 ರಸ್ತೆ ಮತ್ತು 6 ಜಂಕ್ಷನ್‌ಗಳು ಸೇರಿ

ಒಟ್ಟು 93.47 ಕಿ.ಮೀ ಉದ್ದದ ರಸ್ತೆಗಳನ್ನು 972.69 ಕೊಟಿ ರು. ವೆಚ್ಚದಲ್ಲಿ ವೈಟ್‌ಟಾಪಿಂಗ್‌ಗೊಳಿಸಲು ಟೆಂಡರ್‌ ನೀಡಿದ್ದು, ಮೊದಲ ಹಂತದಲ್ಲಿ 36 ಕಿ.ಮೀ. ವ್ಯಾಪ್ತಿಯಲ್ಲಿ ಕಾಮಗಾರಿ ನಡೆಯುತ್ತಿದೆ. ಆದರೆ, ಈವರೆಗೆ ಕೇವಲ 10 ಕಿಲೋ ಮೀಟರ್‌ಗಳಷ್ಟು ಕಾಮಗಾರಿ ಮಾತ್ರ ಮುಗಿದಿದ್ದು, ವೈಟ್‌ಟಾಪಿಂಗ್‌ ಯೋಜನೆ ಉದ್ದೇಶವೇ ಈಡೇರದಂತಾಗಿದೆ. 

ಗುಂಡಿಗಳು ಎಲ್ಲೆಲ್ಲಿ: ಡಾ.ರಾಜ್‌ಕುಮಾರ್‌ ಮುಖ್ಯರಸ್ತೆ, ಬಿಎಚ್‌ಇಎಲ್‌, ನಾಯಂಡಹಳ್ಳಿ, ಗೂಡ್‌ಶೆಡ್‌ ರಸ್ತೆ, ಅವೆನ್ಯೂ ರಸ್ತೆ, ಎಸ್‌ಜೆಪಿ ರಸ್ತೆ, ಹಳೇ ತಾಲೂಕು ರಸ್ತೆ, ವಿಜಯ ನಗರ, ಕೆ.ಆರ್‌.ಮಾರುಕಟ್ಟೆ, ಬಾಣಸವಾಡಿ, ಬಿಎಚ್‌ಇಲ್‌ ರಸ್ತೆ, ಹಳೆ ಮದ್ರಾಸ್‌ ರಸ್ತೆ, ಎಂ.ಜಿ.ರಸ್ತೆ, ಟ್ರಿನಿಟಿ ವೃತ್ತ, ಹಲಸೂರು, ಇಂದಿರಾ ನಗರ ಸೇರಿದಂತೆ ಹಲವಾರು ಕಡೆಗಳಲ್ಲಿ ಗುಂಡಿಗಳು ಸೃಷ್ಟಿಯಾಗಿವೆ.

* ವೆಂ.ಸುನೀಲ್‌ಕುಮಾರ್‌ 

ಟಾಪ್ ನ್ಯೂಸ್

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

15

ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.