ದಿಶಾ ಬಂಧನ ಖಂಡಿಸಿ ಗೃಹ ಸಚಿವರಿಗೆ ಹಲವು ಸಂಘಟನೆಗಳ ನಿಯೋಗ ಮನವಿ
Team Udayavani, Feb 19, 2021, 6:46 PM IST
ಬೆಂಗಳೂರು : ಟೂಲ್ ಕಿಟ್ ಪ್ರಕರಣದಡಿ ಪರಿಸರ ಹೋರಾಟಗಾರ್ತಿ ದಿಶಾ ರವಿ ಅವರ ಅಕ್ರಮ ಬಂಧನ ಹಾಗೂ ದಿಶಾ ಕೊಲೆಗೆ ಟ್ವಿಟರ್ ಮೂಲಕ ಕರೆ ಕೊಟ್ಟ ಹರಿಯಾಣ ಸಚಿವ ಅನಿಲ್ ವಿಜ್ ವಿರುದ್ದ ಎಫ್ಐಆರ್ ದಾಖಲಿಸಲು ಪೊಲೀಸರಿಗೆ ಆದೇಶ ನೀಡಬೇಕೆಂದು ಒತ್ತಾಯಿಸಿ ಹಲವು ಸಂಘಟನೆಗಳ ನಿಯೋಗ ಇಂದು (ಫೆ.19) ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿತು.
ದೆಹಲಿಯ ಪೊಲೀಸರು ನಮ್ಮ ರಾಜ್ಯದ ಪೊಲೀಸರಿಗೆ ತಿಳಿಸದೆ ದಿಶಾ ಅವರ ಬಂಧನ ಮಾಡಿದೆ. ಅವರ ವಕೀಲರ ಜತೆ ಸಮಾಲೋಚಿಸಲು ಅವಕಾಶ ನೀಡದೆ, ಇಲ್ಲಿನ ಮ್ಯಾಜಿಸ್ಟ್ರೇಟ್ ಮುಂದೆ ಹಾಜರು ಪಡಿಸದಿರುವುದು ಖಂಡನೀಯ. ದಿಶಾ ರವಿ ಬಂಧನ ಖಂಡಿಸಿ ಸಾರ್ವಜನಿಕರು ಫೆ. 15 ರಂದು ಬೆಂಗಳೂರು ಪೊಲೀಸರಿಗೆ ಮನವಿ ಸಲ್ಲಿಸಿದ್ದರು. ಆದರೆ ಇಲ್ಲಿಯ ತನಕ ಯಾವುದೆ ಕ್ರಮ ತೆಗೆದುಕೊಂಡಿಲ್ಲ ಎಂದು ನಿಯೋಗದಲ್ಲಿದ್ದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮನವಿ ಸ್ವೀಕರಿಸಿದ ಗೃಹ ಸಚಿವರು, ಎರಡು ದಿನಗಳಲ್ಲಿ ರಾಜ್ಯದ ಅಡ್ವೋಕೇಟ್ ಜನರಲ್ ಹಾಗು ಪೊಲೀಸ್ ಇಲಾಖೆಯ ಸಭೆ ಕರೆದು ಈ ವಿಷಯ ಚರ್ಚಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ.
ಇನ್ನು ನಿಯೋಗದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ, ನಮ್ಮೂರ ಭೂಮಿ ನಮಗಿರಲಿ ವೇದಿಕೆ, ಅಖಿಲ ಭಾರತ ವಿಧ್ಯಾರ್ಥಿ ಸಂಘಟನೆ , ಅಖಿಲಾ ಭಾರತ ಪ್ರಗತಿಪರ ಮಹಿಳಾ ಸಂಘಟನೆ, ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್-ಕರ್ನಾಟಕ, ದ್ವೇಷದ ಮಾತಿನ ವಿರುದ್ದ ಜನಾಂದೋಲನ, ಆಲ್ ಇಂಡಿಯ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ ಹಾಗು ವಕೀಲರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!