ಅತಿ ಔಷಧಕ್ಕೆ ಹೋಮಿಯೋಪತಿ ಪರಿಹಾರ


Team Udayavani, Aug 4, 2019, 3:08 AM IST

ati-oushada

ಬೆಂಗಳೂರು: ಇತ್ತೀಚಿನ ವರ್ಷಗಳಲ್ಲಿ ಅತಿ ಔಷಧ ಸೇವನೆ ಸಮಸ್ಯೆಯಿಂದ ಸಾಕಷ್ಟು ಜನ ಬಳಲುತ್ತಿದ್ದಾರೆ. ಅದಕ್ಕೆ ಸೂಕ್ತ ಪರಿಹಾರ ಹೋಮಿಯೋಪತಿಯಲ್ಲಿದೆ ಎಂದು ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆ ತಿಳಿಸಿದರು. ಜಯನಗರದ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಶನಿವಾರ ನಡೆದ “ವಿಶ್ವ ಹೋಮಿಯೋಪತಿ ದಿನಾಚರಣೆ’ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

ರೋಗ ವಾಸಿಯಾಗುತ್ತದೆ ಎಂಬ ನಂಬಿಕೆಯೇ ರೋಗಿಯ ಅರ್ಧದಷ್ಟು ರೋಗವನ್ನು ಗುಣಪಡಿಸುತ್ತದೆ ಎಂದು ಹೋಮಿಯೋಪತಿ ಹೇಳುತ್ತದೆ. ಇಲ್ಲಿ ರೋಗಿಯನ್ನು ಆತ್ಮೀಯವಾಗಿ ಕಾಣುವ ಮೂಲಕ ನಂಬಿಕೆ ಮೂಡಿಸಲಾಗುತ್ತದೆ. ಇತ್ತೀಚಿನ ವರ್ಷಗಳಲ್ಲಿ ಅತಿ ಔಷಧ ಸೇವನೆ ಸಮಸ್ಯೆಯಿಂದ ಸಾಕಷ್ಟು ಜನ ಬಳಲುತ್ತಿದ್ದಾರೆ. ಅವರಿಗೆ ಸೂಕ್ತ ಪರಿಹಾರ ಹೋಮಿಯೋಪತಿಯಲ್ಲಿದ್ದು, ಒಂದು ಔಷಧವನ್ನು 100 ಭಾಗ ಮಾಡಿ ಇಲ್ಲಿ ಬಳಸಿ ಪರಿಹಾರಕಂಡುಕೊಳ್ಳಲಾಗುತ್ತದೆ ಎಂದರು.

ವೈದ್ಯರು ಮತ್ತು ಅವರು ನೀಡುವ ಚಿಕಿತ್ಸೆಯಲ್ಲಿ ನಂಬಿಕೆ ಅತಿ ಮುಖ್ಯ ಪಾತ್ರವಹಿಸುತ್ತದೆ. ಇಂದಿಗೂ ಸಾಕಷ್ಟು ಜನರು ಚಿಕಿತ್ಸೆಯಲ್ಲಿ ನಂಬಿಕೆಯ ಇಟ್ಟುಕೊಳ್ಳದೆ ರೋಗಿಗಳಾಗಿಯೇ ಉಳಿದಿದ್ದಾರೆ. ಅನೇಕರು ಧರ್ಮಸ್ಥಳಕ್ಕೆ ಬಂದು ನನ್ನ ಬಳಿ ಪರಿಹಾರ ಸೂಚಿಸಿ ಎನ್ನುತ್ತಾರೆ. ಅವರಿಗೆ ಮಂಜನಾಥ ಸ್ವಾಮಿಯ ತೀರ್ಥ ನೀಡಿ ಇದರ ಜತೆ ವೈದ್ಯರು ಕೊಟ್ಟಿರುವ ಅದೇ ಔಷಧವನ್ನು ತೆಗೆದುಕೊಳ್ಳಲು ಹೇಳುತ್ತೇನೆ. ಬಹುತೇಕರು ಮರಳಿ ಬಂದು ನಮಗೆ ವಾಸಿಯಾಗಿದೆ ಎಂದು ಹೇಳುತ್ತಾರೆ. ತೀರ್ಥ ಸೇವಿಸುವಾಗ ಅವರಲ್ಲಿ ಇದ್ದ ರೋಗ ವಾಸಿಯಾಗುತ್ತದೆ ಎಂಬ ನಂಬಿಕೆ ಅರ್ಧ ರೋಗವನ್ನು ವಾಸಿ ಮಾಡಿದರೆ ಔಷಧವು ಇನರ್ಧ ರೋಗವನ್ನು ವಾಸಿ ಮಾಡುತ್ತದೆ ಎಂದು ತಿಳಿಸಿದರು.

ಧರ್ಮದ ಸ್ಥಾನ ಅರ್ಥ ಆಕ್ರಮಿಸಿದೆ: ಆಧುನಿಕ ಜೀವನಶೈಲಿ ಆರೋಗ್ಯ ಸಮಸ್ಯೆಗಳಿಗೆ ಮೂಲಕಾರಣವಾಗಿದ್ದು, ಇಲ್ಲಿ ಧರ್ಮದ ಸ್ಥಾನವನ್ನು ಅರ್ಥ (ಹಣ) ಆಕ್ರಮಿಸಿದೆ. ಪಂಚೇಂದ್ರಿಯಗಳು ಹತೋಟಿಯಲ್ಲಿರದಿದ್ದರೆ ಹಾಗೂ ಆಸೆ ಪೂರೈಸಿಕೊಳ್ಳಲು ಧರ್ಮದ ಮಾರ್ಗ ಮೀರಿದರೆ ರೋಗಗಳು ಕಟ್ಟಿಟ್ಟಬುತ್ತಿ. ಬದುಕಲು ಆರಿಸಿಕೊಳ್ಳುವ ಮಾರ್ಗಗಳು ಸರಿಯಾಗಿರಬೇಕು. ಉತ್ತಮ ಜೀವನಶೈಲಿ ಎಂದರೆ ಆಧುನಿಕ ಜೀವನದ ಆಕರ್ಷಣೆಗಳಿದ್ದರೂ ತಡೆದುಕೊಳ್ಳುವ ಸಂಸ್ಕಾರ ಕಲಿತುಕೊಳ್ಳಬೇಕು. ಇದಕ್ಕಾಗಿ ನಾವು ಕಲಿತ ವಿದ್ಯೆ ಹಾಗೂ ನಮ್ಮಲ್ಲಿರುವ ಬುದ್ಧಿಯನ್ನು ಸರಿಯಾಗಿ ಬಳಸಿಕೊಳ್ಳಬೇಕು ಎಂದು ತಿಳಿಸಿದರು.

ಪಂಚೇಂದ್ರಿಯಗಳನ್ನು ಹತೋಟಿಯಲ್ಲಿಟ್ಟುಕೊಂಡರೆ ಅನಾರೋಗ್ಯದ ಸಮಸ್ಯೆ ಮನುಷ್ಯನನ್ನು ಕಾಡಲು ಸಾಧ್ಯವೇ ಇಲ್ಲ. ಆರೋಗ್ಯವನ್ನು ಕಳೆದುಕೊಂಡವನು ಎಲ್ಲವನ್ನೂ ಕಳೆದುಕೊಂಡ ಹಾಗೆ. ಕಾಯಿಲೆಗಳ ಕುರಿತಂತೆ ಅಹಂಕಾರ, ಆಲಸ್ಯ, ತಿರಸ್ಕಾರ ಒಳ್ಳೆಯದಲ್ಲ ಎಂದ ಅವರು, ವ್ಯಸನಮುಕ್ತ ಜೀವನ ದೇಶೀಯ ಪದ್ಧತಿ ಆಹಾರ ಹಾಗೂ ಸನ್ಮಾರ್ಗದ ನಡವಳಿಕೆಗಳು ಮನುಷ್ಯನ ಉತ್ತಮ ಆರೋಗ್ಯಕ್ಕೆ ಸಹಕಾರಿಯಾಲಿವೆ ಎಂದು ಹೇಳಿದರು.

ಕರ್ನಾಟಕ ಹೋಮಿಯೋಪತಿ ಮಂಡಳಿ ಅಧ್ಯಕ್ಷ ನಾಡೋಜ, ಡಾ.ಬಿ.ಟಿ.ರುದ್ರೇಶ್‌ ಮಾತನಾಡಿ, ಮನುಷ್ಯನ ಜೀವನದಲ್ಲಿ ಕಾರ್ಯಕ್ಷೇತ್ರ, ಕುಟುಂಬ ಪ್ರಮುಖ ಪಾತ್ರವಹಿಸುತ್ತವೆ. ಅವುಗಳ ವ್ಯತ್ಯಾಸದಿಂದ ರೋಗಗಳು ಆರಂಭವಾಗುತ್ತವೆ. ಪ್ರಸ್ತುತ 86 ರಾಷ್ಟ್ರಗಳಲ್ಲಿ ಹೋಮಿಯೋಪತಿ ವೈದ್ಯ ಪದ್ಧತಿ ಅನುಸರಿಸಲಾಗುತ್ತಿದೆ. 30 ಲಕ್ಷ ಹೋಮಿಯೋಪತಿ ವೈದ್ಯರು ಕಾರ್ಯನಿರ್ವಹಿಸುತ್ತಿದ್ದಾರೆ.

ದೇಶದಲ್ಲಿ 240 ಹೋಮಿಯೋಪತಿ ವೈದ್ಯ ಕಾಲೇಜುಗಳಿವೆ. ಕೇಂದ್ರ ಸರ್ಕಾರದ 2020ರಲ್ಲಿ ಎಲ್ಲರಿಗೂ ಸಂಪೂರ್ಣ ಎಂಬ ಉದ್ದೇಶ ಹೊಂದಿದ್ದು, ಹೋಮಿಯೋಪತಿ ಹೊರತುಪಡಿಸಿ ಅದು ಯಶಸ್ವಿಯಾಗುವುದಿಲ್ಲ ಎಂದರು. ರಾಜೀವ್‌ಗಾಂಧಿ ವಿಶ್ವವಿದ್ಯಾಲಯ ಕುಲಪತಿ ಡಾ.ಎಸ್‌.ಸಚ್ಚಿದಾನಂದ, ಪರೀಕ್ಷಾಂಗ ವಿಭಾಗದ ಕುಲಸಚಿವ ಡಾ.ಲಿಂಗೇಗೌಡ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.