ಉನ್ನತ ಸ್ಥಾನಕ್ಕೇರಲು ಪ್ರಾಮಾಣಿಕತೆ ಜತೆಗೆ ಮಾನವೀಯತೆ ಮುಖ್ಯ


Team Udayavani, Feb 25, 2017, 12:14 PM IST

unnata-staana.jpg

ಬೆಂಗಳೂರು: ಯಾವುದೇ ಉನ್ನತ ಸ್ಥಾನಕ್ಕೇರಲು ಪರಿಶ್ರಮ, ಪ್ರಾಮಾಣಿಕತೆ ಮತ್ತು ಮಾನವೀಯತೆ ಅತಿ ಮುಖ್ಯ ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ)ದ ಅಧ್ಯಕ್ಷ ನ್ಯಾಯಮೂರ್ತಿ ಎಚ್‌.ಎಲ್‌.ದತ್ತು ಅಭಿಪ್ರಾಯಪಟ್ಟರು. 

ಎನ್‌ಎಚ್‌ಆರ್‌ಸಿ ಮತ್ತು ವಿಶ್ವವಿದ್ಯಾಲಯ ಕಾನೂನು ಕಾಲೇಜು ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಬೆಂಗಳೂರು ವಿವಿಯ ಪ್ರೊ.ಕೆ. ವೆಂಕಟಗಿರಿಗೌಡ ಸಭಾಂಗಭದಲ್ಲಿ ಆಯೋಜಿಸಲಾಗಿದ್ದ ಮೂರು ದಿನಗಳ “ಅಖೀಲ ಭಾರತ ಅಣಕು ನ್ಯಾಯಾಲಯ ಸ್ಪರ್ಧೆ-2017′ ಉದ್ಘಾಟಿಸಿ ಮಾತನಾಡಿದ ಅವರು, ಧನಾತ್ಮಕ ಆಲೋಚನೆ, ಆತ್ಮವಿಶ್ವಾಸ ಮತ್ತು ನಿರಂತರ ಪ್ರಯತ್ನದಿಂದ ಏನು ಬೇಕಾದರೂ ಸಾಧಿಸಲು ಸಾಧ್ಯ ಎಂದು ಹೇಳಿದರು.

ಆತ್ಮವಿಶ್ವಾಸ ಅತಿ ಮುಖ್ಯ: ವಕೀಲ ವೃತ್ತಿಗೆ ಬರುವವರಿಗೆ ಆತ್ಮವಿಶ್ವಾಸ ಅತ್ಯಂತ ಮುಖ್ಯ. ಗ್ರಾಮೀಣ ಭಾಗದ ಮಕ್ಕಳು ತಮಗೆ ಇಂಗ್ಲಿಷ್‌ ಬರುವುದಿಲ್ಲ ಎಂಬ ಕೀಳರಿಮೆ ಬೆಳೆಸಿಕೊಳ್ಳಬಾರದು. ಇಂಗ್ಲಿಷ್‌ ಭಾಷೆಯಲ್ಲಿ ಅಧ್ಯಯನ ಮಾಡಿದವರನ್ನೂ ಮೀರಿ ಬೆಳೆಯುವ ಪ್ರಯತ್ನ, ವಿಶ್ವಾಸ ಇರಬೇಕು ಎಂದು ಸಲಹೆ ನೀಡಿದರು. ನಾನು ಹೈಸ್ಕೂಲ್‌ನಲ್ಲಿ ಓದುವಾಗ ನಮ್ಮ ಗುರುಗಳು ಹೇಳಿಕೊಟ್ಟ ಪಾಠ. ಹಾಗೆ ದೊಡ್ಡ ಗುರಿಯನ್ನಿಟ್ಟುಕೊಂಡು ತಲುಪಿದ್ದೇನೆ. ಪರಿಶ್ರಮ, ಪ್ರಮಾಣಿಕತೆ ಮತ್ತು ಮಾನವೀಯ ಗುಣಗಳಿಂದ ಉನ್ನತ ಸ್ಥಾನಕ್ಕೇರಲು ಸಾಧ್ಯ ಎಂದರು.

ಉತ್ತಮ ವೇದಿಕೆ: ಅಣಕು ನ್ಯಾಯಾಲಯ ಸ್ಪರ್ಧೆಗಳು ಕಾನೂನು ಪದವಿ ಮುಗಿಸಿದ ಅಥವಾ ವೃತ್ತಿ ರಂಗ ಪ್ರವೇಶಕ್ಕೆ ಹೊರಟ ವಿದ್ಯಾರ್ಥಿಗಳಿಗೆ ಉತ್ತಮ ಅಭ್ಯಾಸ ವೇದಿಕೆ. ಇಲ್ಲಿ ನೀವು ತೋರಿಸುವ ಸಮರ್ಥವಾದ ಮಂಡನೆ, ತೀರ್ಪು ನೀಡುವ ಸಾಮರ್ಥ್ಯ, ಪಾಂಡಿತ್ಯ ಮುಂದಿನ ವೃತ್ತಿ ಜೀವನದಕ್ಕೆ ಬುನಾದಿಯಾಗಲಿದೆ ಎಂದು ಹೇಳಿದರು.

ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥಶೆಟ್ಟಿ ಮಾತನಾಡಿ, ಸಮಾಜದ ಪ್ರತಿಯೊಬ್ಬ ವ್ಯಕ್ತಿಗೂ ಕಾನೂನಿನ ಅರಿವು ಇರಬೇಕು. ಕಾನೂನು ವಿದ್ಯಾಭ್ಯಾಸ ಮುಗಿಸಿದ ಪ್ರತಿಯೊಬ್ಬ ವಿದ್ಯಾರ್ಥಿಯೂ ತಾವು ತಿಳಿದುಕೊಂಡಿರುವ ಕಾನೂನಿನ ವಿಚಾರಗಳನ್ನು ಕೇವಲ ತಮ್ಮ ವೃತ್ತಿ, ಜೀವನಕ್ಕೆ ಸೀಮಿತವಾಗಿಡದೆ. ಸಾಮಾನ್ಯ ವ್ಯಕ್ತಿಗೂ ತಲುಪಿಸುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು. 

ಕಾನೂನು ವಿದ್ಯಾರ್ಥಿಗಳಿಗೆ ಉತ್ತಮ ಸಂವಹನ ಕಲೆ, ಪಾಂಡಿತ್ಯದಿಂದ ಎಲ್ಲರನ್ನು ತಮ್ಮತ್ತ ಸೆಳೆಯುವ ಗುಣಗಳು ಅತಿ ಮುಖ್ಯ. ಇದರಿಂದ ತಮ್ಮ ಜೀವನದಲ್ಲಿ ಉತ್ತಮ ಬೆಳವಣಿಗೆ ಸಾಧ್ಯ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಬೆಂಗಳೂರು ವಿವಿ ಹಂಗಾಮಿ ಕುಲಪತಿ ಪ್ರೊ.ಜಗದೀಶ್‌ ಪ್ರಕಾಶ್‌, ಗದಗ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ವಿಶ್ವವಿದ್ಯಾಲಯದ ಕುಲಸಚಿವ ಡಾ.ಸುರೇಶ್‌ ನಾಡಗೌಡರ್‌, ಡಾ.ವಿ. ಸುದೇಶ್‌, ಕೆ.ಎನ್‌.ಭಾರ್ಗವ್‌ ಮತ್ತಿತರರು ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.