ಶನಿವಾರದ ರಾಶಿ ಫಲ… : ಇಲ್ಲಿದೆ ನಿಮ್ಮ ರಾಶಿಯ ಗ್ರಹ ಗತಿ
Team Udayavani, Aug 13, 2022, 7:12 AM IST
ಮೇಷ: ಅಧಿಕಾರ. ಸುಖಮಯ ಅಸ್ತಿತ್ವ. ಶಾರೀರಿಕ ಬಲ. ವಯಸ್ಸು ವೃದ್ಧಿ. ನಿರೀಕ್ಷಿತ ಧನಾರ್ಜನೆ. ಸಹೋದರಾದಿ ವರ್ಗದವರಿಗೆ ಅಭಿವೃದ್ಧಿ. ದಾಂಪತ್ಯ ಸುಖದಲ್ಲಿ ಅಭಿವೃದ್ಧಿ. ಮಕ್ಕಳ ವಿಚಾರದಲ್ಲಿ ಸಾಹಸ ಪ್ರವೃತ್ತಿ. ಉದ್ಯೋಗ ವಿಚಾರದಲ್ಲಿ ಉನ್ನತಿ.
ವೃಷಭ: ಶಾರೀರಿಕ ಮಾನಸಿಕ ಆರೋಗ್ಯ ಸ್ಥಿರ. ಗೌರವದಿಂದ ಕೂಡಿದ ಧನಾರ್ಜನೆ. ಸಹೋದರ ವರ್ಗದವರಿಗೂ ಉನ್ನತ ಸ್ಥಾನ ಸುಖ. ಸಾಂಸಾರಿಕ ಸುಖ ತೃಪ್ತಿದಾಯಕ. ಮಕ್ಕಳ ವಿಚಾರದಲ್ಲಿ ಮನೋರಂಜನೆ. ವ್ಯವಹಾರಸ್ಥರಿಗೆ, ಉದ್ಯೋಗಸ್ಥರಿಗೆ ಗೌರವ.
ಮಿಥುನ: ದೈಹಿಕ ಆರೋಗ್ಯ ಸ್ಥಿರ. ಹಣಕಾಸಿನ ವಿಚಾರದಲ್ಲಿ ಅಜಾಗ್ರತೆ ಸಲ್ಲದು. ಸಹೋದರಾದಿ ವರ್ಗದವರೂ ಸಾಹಸ ಪ್ರವೃತ್ತಿ ಮಾಡದಿರಿ. ದಾಂಪತ್ಯ ಸುಖ ತೃಪ್ತಿ. ಮಕ್ಕಳ ವಿಚಾರದಲ್ಲಿ ಸಂತೋಷ. ಉದ್ಯೋಗ ವ್ಯವಹಾರದಲ್ಲಿ ಸ್ಥಿರತೆ.
ಕರ್ಕ: ಆರೋಗ್ಯದಲ್ಲಿ ಅಭಿವೃದ್ಧಿ. ಮನಃಸಂತೋಷ. ಉತ್ತಮ ಧನಾರ್ಜನೆ. ಸಹೋದರಾದಿ ಸುಖ. ದಾಂಪತ್ಯದಲ್ಲಿ ಅನುರಾಗ ಪ್ರಯಾಣ. ಮಕ್ಕಳ ವಿಚಾರದಲ್ಲಿ ಸಂತೋಷ. ಉದ್ಯೋಗ ವ್ಯವಹಾರದಲ್ಲಿ ಸ್ಥಿರತೆ.
ಸಿಂಹ: ಆರೋಗ್ಯದ ಬಗ್ಗೆ ಗಮನಿಸಿ. ಅನಿರೀಕ್ಷಿತ ಧನಾಗಮನ. ಬಂಧುಗಳಿಂದ ಸಹಾಯ. ದಾಂಪತ್ಯದಲ್ಲಿ ಚರ್ಚೆಗೆ ಅವಕಾಶ ನೀಡದಿರಿ. ಮಕ್ಕಳ ವಿಚಾರದಲ್ಲಿ ಪ್ರಗತಿ. ಉದ್ಯೋಗ ಕಾರ್ಯಕ್ಷೇತ್ರದಲ್ಲಿ ಕಾರ್ಯಸಾಧಿಸಿದ ತೃಪ್ತಿ.
ಕನ್ಯಾ: ಆರೋಗ್ಯ ಸ್ಥಿರ. ಹಣಕಾಸಿನ ವಿಚಾರದಲ್ಲಿ ಪ್ರಗತಿ ಇದ್ದರೂ ಸಾಹಸ ಸಲ್ಲದು. ಬಂಧುಗಳಿಂದ ಸಹಾಯ ನಿರೀಕ್ಷೆ ಬೇಡ. ದಾಂಪತ್ಯ ಸುಖ ತೃಪ್ತಿದಾಯಕ. ಉದ್ಯೋಗ ಕಾರ್ಯಕ್ಷೇತ್ರದಲ್ಲಿ ಉತ್ತಮ ಬದಲಾವಣೆ ಅಭಿವೃದ್ಧಿ.
ತುಲಾ: ನಾನಾ ರೀತಿಯ ಚಟುವಟಿಕೆಗಳಿಂದ ಕೂಡಿದ ದಿನ. ಉದ್ಯೋಗ ವ್ಯವಹಾರಗಳಲ್ಲಿ ಗೌರವಾದಿ ಪ್ರಾಪ್ತಿ. ನೂತನ ಮಿತ್ರರ ಸಮಾಗಮ. ಪರಸ್ಪರ ಪ್ರೋತ್ಸಾಹ ಸಹಕಾರ. ಉತ್ತಮ ಧನಾರ್ಜನೆ. ದಾಂಪತ್ಯದಲ್ಲಿ ಸಣ್ಣ ವಿಷಯಗಳ ಚರ್ಚೆ.
ವೃಶ್ಚಿಕ: ಆರೋಗ್ಯದ ಬಗ್ಗೆ ಉದಾಸೀನತೆ ಸಲ್ಲದು. ದೈಹಿಕ ಶ್ರಮ ಅಧಿಕವಾದ್ದರಿಂದ ದೇಹಾಯಾಸ ತೋರೀತು. ದೀರ್ಘ ಪ್ರಯಾಣ ಸಂಭವ. ಮನೆಯಲ್ಲಿ ಸಂತಸದ ವಾತಾವರಣ. ವಿದ್ಯಾರ್ಥಿಗಳಿಗೆ ಅಧಿಕ ಪರಿಶ್ರಮದಿಂದ ನಿರàಕ್ಷಿತ ಸ್ಥಾನ ಸುಖ.
ಧನು: ನಿರೀಕ್ಷೆಗೂ ಮೀರಿದ ಧನಾರ್ಜನೆ. ಉತ್ತಮ ವಾಕ್ಚತುರತೆಯಿಂದ ಕಾರ್ಯಸಾಧನೆ. ಗುರುಹಿರಿಯರ ಆರೋಗ್ಯ ವೃದ್ಧಿ. ವಿದ್ಯಾರ್ಥಿಗಳಿಗೆ ಸಣ್ಣ ಪ್ರಯಾಣ ಸಂಭವ. ಹೆಚ್ಚಿನ ಬದಲಾವಣೆಗೆ ಅವಕಾಶ. ದಾಂಪತ್ಯ ತೃಪ್ತಿ.
ಮಕರ: ದೇಶ ವಿದೇಶದ ವ್ಯವಹಾರಗಳಲ್ಲಿ ಪ್ರಗತಿ. ದೀರ್ಘ ಸಂಚಾರ ಸಂಭವ, ಗೌರವಾದಿ ಪ್ರಾಪ್ತಿ. ಕೌಟುಂಬಿಕ ಸುಖ ವೃದ್ಧಿ. ಗೃಹೋಪಕರಣ ವಸ್ತುಗಳಿಗೆ ಖರ್ಚು. ಅಧ್ಯಯನಶೀಲರಿಗೆ ವಿಪುಲ ಅವಕಾಶ.
ಕುಂಭ: ಉತ್ತಮ ದೈಹಿಕ ಆರೋಗ್ಯ. ಧನಾರ್ಜನೆಗೆ ಸರಿಸಮವಾದ ಖರ್ಚು. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ದಾಂಪತ್ಯದಲ್ಲಿ ಹೆಚ್ಚಿದ ಸಂತೋಷ. ವಿದ್ಯಾರ್ಥಿಗಳಿಗೆ ಹೆಚ್ಚಿದ ಜವಾಬ್ದಾರಿ. ಗುರುಹಿರಿಯರ ಉತ್ತಮ ಪ್ರೋತ್ಸಾಹ, ಮಾರ್ಗದರ್ಶನ. ದೂರದ ಉದ್ಯೋಗದಲ್ಲಿ ಮುನ್ನಡೆ.
ಮೀನ: ಮನೆಯಲ್ಲಿ ಸಂತಸದ ವಾತಾವರಣ. ದೇವತಾ ಕಾರ್ಯಗಳಲ್ಲಿ ಆಸಕ್ತಿ. ದೂರದ ಮಿತ್ರರ ಭೇಟಿ. ವಿದ್ಯಾರ್ಥಿಗಳಿಗೆ ಗುರುಗಳ ಸಹಕಾರ ಮಾರ್ಗದರ್ಶನದ ಸುಖ. ಬಹಳ ಸಮಯದಿಂದ ವಿಳಂಬಿತ ಕಾರ್ಯಗಳಲ್ಲಿ ಪ್ರಗತಿ. ದಾಂಪತ್ಯ ಸುಖ ವೃದ್ಧಿ. ಪರರಿಗೆ ಸಹಾಯಹಸ್ತ ಚಾಚುವಾಗ ಪೂರ್ವಾಪರ ವಿಚಾರ ಮಾಡಿ ನಿರ್ಣಯಿಸಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Bangaluru cafe ಸ್ಫೋಟದ ಸಂಚುಕೋರ ಎನ್ಐಎ ಬಲೆಗೆ: ಯಾರಿದು ಷರೀಫ್?
Lok Sabha Election: ಬಿಜೆಪಿ-ಜೆಡಿಎಸ್ “ಜಂಟಿ ಸಮರಾಭ್ಯಾಸ’
Congress; ಕೋಲಾರಕ್ಕೆ ಗೌತಮ್ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!
Politics: ಟಿಕೆಟ್ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು