ಹೊಸೂರು ಪಾದಚಾರಿ ಮೇಲ್ಸೇತುವೆ ಸಂಚಾರಕ್ಕೆ ಮುಕ್ತ
Team Udayavani, Nov 16, 2018, 11:38 AM IST
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಖಾಸಗಿ ಸಹಭಾಗಿತ್ವದಲ್ಲಿ ಹೊಸೂರು -ಲಷ್ಕರ್ ರಸ್ತೆ ಮತ್ತು ತಾವರೆಕೆರೆ ರಸ್ತೆ ಕೂಡುವ ಸ್ಥಳದಲ್ಲಿ ಸುಮಾರು 2.10 ಕೋಟಿ ರೂ.ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಪಾದಚಾರಿ ಮೇಲ್ಸೇತುವೆಯನ್ನು ಗುರುವಾರ ಸಾರ್ವಜನಿಕ ಸಂಚಾರಕ್ಕೆ ಮುಕ್ತ ಗೊಳಿಸಲಾಯಿತು.
ಹೊಸೂರು-ಲಷ್ಕರ್ ರಸ್ತೆ ಹೆಚ್ಚಿನ ಜನದಟ್ಟಣೆಯಿಂದ ಕೂಡಿದ್ದು, ರಸ್ತೆ ದಾಟಲು ಪಾದಚಾರಿಗಳು ಹರಸಾಹಸ ಪಡುತ್ತಿದ್ದರು. ಸಮಸ್ಯೆ ಮನಗಂಡ ಬಿಬಿಎಂಪಿ, ಹೊಸೂರು-ಲಷ್ಕರ್ ರಸ್ತೆ ಮತ್ತು ತಾವರೆಕೆ ರಸ್ತೆ ಕೂಡುವ ಪ್ರದೇಶದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಮೇಲ್ಸೇತುವೆ ನಿರ್ಮಿಸಿದೆ.
ಪಾದಚಾರಿ ಮೇಲ್ಸೇತುವೆಯು 60 ಮೀ. ಉದ್ದ, 3.50 ಮೀ. ಅಗಲ, 3 ಮೀ. ಎತ್ತರವಿದೆ. ಮಕ್ಕಳು, ಮಹಿಳೆಯರು ಮತ್ತು ವೃದ್ಧರಿಗಾಗಿ ಎರಡು ಲಿಫ್ಟ್ಗಳಿದ್ದು, ಇದರಲ್ಲಿ ಒಂದು ಹದಿನಾರು ಮಂದಿಯನ್ನು ಮತ್ತೂಂದು ಹತ್ತು ಮಂದಿಯನ್ನು ಹೊತ್ತೂಯ್ಯುವ ಸಾಮರ್ಥ ಹೊಂದಿದೆ.
ಪ್ರತಿ ನಿತ್ಯ ಸುಮಾರು ಎರಡು ಸಾವಿರ ಮಂದಿ ಪಾದಚಾರಿ ಮಾರ್ಗವನ್ನು ಬಳಸಿಕೊಳ್ಳುವ ನಿರೀಕ್ಷೆ ಇದೆ ಎಂದು ಪಾಲಿಕೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಮೇಯರ್ ಗಂಗಾಬಿಕೆ ಮಲ್ಲಿಕಾರ್ಜುನ್, ಮಾಜಿ ಸಚಿವ ರಾಮಲಿಂಗಾ ರೆಡ್ಡಿ, ಮಾಜಿ ಮೇಯರ್ ಮಂಜುನಾಥ ರೆಡ್ಡಿ ಹಾಗೂ ಪಾಲಿಕೆ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಬಿಬಿಎಂಪಿಗೆ 48 ಕೋಟಿ ರೂ.: ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಬಿಬಿಎಂಪಿಗೆ 48 ಕೋಟಿ ರೂ. ನೀಡಲು ಸರ್ಕಾರದ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಗುರುವಾರ ನಡೆದ ಸಮನ್ವಯ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಜಲ ಮಂಡಳಿಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ