ಕೋವಿಡ್ ಜತೆ ಕಾಡುವ ಬಿಸಿಲ ಬೇಗೆ

ಬಿಸಿಲ ಝಳಕ್ಕೆ ಬೆಂಗಳೂರಿಗರು ಹೈರಾಣ

Team Udayavani, Mar 29, 2021, 11:31 AM IST

Untitled-1

ಬೆಂಗಳೂರು: ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ ಪ್ರಖರತೆಗೆ ಉದ್ಯಾನ ನಗರಿಯ ಜನ ಹೈರಾಣಾಗುತ್ತಿದ್ದಾರೆ. ಹವಾಮಾನ ಇಲಾಖೆ ಪ್ರಕಾರ ನಗರದಲ್ಲಿ ತಾಪಮಾನ 34, 35 ಡಿಗ್ರಿ ಸೆಲ್ಸಿಯಸ್‌ ಗಡಿ ದಾಟುತ್ತಿದೆ.

ಶಿವರಾತ್ರಿ ಮುಗಿಯುತ್ತಿದ್ದಂತೆ ಬಿಸಿಲಿನ ಶಾಖ ಎಲ್ಲರಿಗೂ ತಟ್ಟುತ್ತಿದೆ. ಈ ಮಧ್ಯೆಕೋವಿಡ್ ಹಾವಳಿ ಶುರುವಾಗಿದ್ದು, ಇವೆರಡರಿಂದ ಜನ ಹೊರಬರಲು ಹಿಂದೇಟುಹಾಕುತ್ತಿದ್ದಾರೆ. ಫೆಬ್ರವರಿ ತಿಂಗಳಿಗೆಹೋಲಿಸಿದರೆ, ಮಾರ್ಚ್‌ ತಿಂಗಳಲ್ಲಿ ತಾಪಮಾನ ಹೆಚ್ಚಾಗಿದ್ದು, ಧಗೆಗೆ ಧರೆ ಕಾದ ಹೆಂಚಾಗಿದೆ. ಮುಂದಿನ ಮೂರು ತಿಂಗಳು ಬಿಸಿಲಿನ ಪ್ರಖರತೆ ಮತ್ತಷ್ಟು ಹೆಚ್ಚುವ ಮುನ್ಸೂಚನೆ ಇದ್ದು, ಈ ಅವಧಿಯಲ್ಲಿ ಕನಿಷ್ಠ2ರಿಂದ 3 ಡಿಗ್ರಿ ಸೆಲ್ಸಿಯಸ್‌ ಏರಿಕೆ ಆಗುವನಿರೀಕ್ಷೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಅಭಿವೃದ್ಧಿ ನೆಪದಲ್ಲಿ ನಗರದಲ್ಲಿದ್ದ ಮರಗಳ ಮಾರಣಹೋಮದಿಂದಾಗಿ ಉದ್ಯಾನ ನಗರಿಬೆಂಗಳೂರು ಈಗ “ಬಿಸಿಲ ನಗರಿಯಾಗಿಮಾರ್ಪಡುತ್ತಿದೆ. ಅಲ್ಲಲ್ಲಿ ಜನರ ಕಣ್ಣಿಗೆತಾಗುತ್ತಿದ್ದ ಒಂದೆರಡು ಮರಗಳನ್ನೂ ಸ್ಮಾರ್ಟ್‌ಸಿಟಿ, ನಗರ ಪಾಲಿಕೆ, ಅಭಿವೃದ್ಧಿ ಕಾಮಗಾರಿನೆಪದಲ್ಲಿ ತೆರವುಗೊಳಿಸಿದೆ ಎಂದು ಪರಿಸರ ಪ್ರೇಮಿಗಳು ಆರೋಪಿಸುತ್ತಾರೆ.

ಒಂದೆಡೆ ಕೋವಿಡ್ ಎರಡನೇ ಅಲೆ.ಮತ್ತೂಂದೆಡೆ ಬಿಸಿಲಿನ ಝಳ. ಇದರಿಂದ ನಗರದ ಜನ, ಮಧ್ಯಾಹ್ನ ಮನೆಯಿಂದ ಹೊರಬರಲು ಹಿಂದೇಟು ಹಾಕುತ್ತಿದ್ದಾರೆ.ಯಾವುದೇ ಕೆಲಸವಿದ್ದರೂ, 12 ಗಂಟೆಯೊಳಗೆ ಮಾಡಿ ಮುಗಿಸಲು ಯೋಜಿಸುತ್ತಾರೆ. ನಿತ್ಯಹಲವು ಕೆಲಸಗಳಿಗೆ ಸರ್ಕಾರಿ ಕಚೇರಿಗಳತ್ತಹೆಜ್ಜೆ ಹಾಕುತ್ತಿದ್ದ ನಾಗರಿಕರ ಸಂಖ್ಯೆ ಕೊಂಚಇಳಿಮುಖವಾಗುತ್ತಿದೆ ಎಂದು ಸರ್ಕಾರಿಕಚೇರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಬಿಳಿಸಲಿಂದಾಗಿ ಮಧ್ಯಾಹ್ನದ ವೇಳೆಗೆ ಆರ್‌.ಸಿ.ಸಿ. ಮೇಲ್ಚಾವಣಿ ಬೆಂಕಿಯಂತಾಗುತ್ತಿವೆ. ದಗೆಯಿಂದ ಮುಕ್ತಿ ಪಡೆಯಲು ಜನರು ದಿನಕ್ಕೆ ಎರಡು ಬಾರಿಸ್ನಾನ ಮಾಡುವಂತಾಗಿದೆ ಎಂದು ಪೀಣ್ಯ ನಿವಾಸಿ ಬಿ.ರಮೇಶ್‌ ಹೇಳಿದ್ದಾರೆ.

ಝಳದಿಂದ ಪಾರಾಗಲು ತಜ್ಞರ ಸಲಹೆಗಳು :

  • ದ್ರವ ರೂಪದ ಆಹಾರ ಸೇವನೆ. ಇದರಿಂದ ಬೆವರಿನ ಪ್ರಮಾಣ ಹೆಚ್ಚಾಗಿ ದೇಹದ ಉಷ್ಣತೆ ಸಹಜಸ್ಥಿತಿ ತಲುಪುತ್ತದೆ.
  • ದೇಹದಲ್ಲಿ ಉಷ್ಣತೆ ಪ್ರಮಾಣ ಹೆಚ್ಚಾದರೆ ತಕ್ಷಣ ವೈದ್ಯರನ್ನು ಭೇಟಿ ಮಾಡಬೇಕು. ತಲೆ ಸುತ್ತುವುದು, ವಾಕರಿಕೆ ಅಥವಾ ವಾಂತಿ ಸಾಧ್ಯತೆ
  • ಟೀ, ಕಾಫಿ ಹಾಗೂ ಮದ್ಯಪಾನ ಮಾಡಬಾರದು. ಈ ಪದಾರ್ಥಗಳ ಸೇವನೆಯಿಂದ ದೇಹದಲ್ಲಿನ ನೀರಿನ ಅಂಶವು ತ್ವರಿತವಾಗಿ ಹೊರಗೆ ಬರುತ್ತದೆ. ಇದರಿಂದ ಉಷ್ಣತೆ ಪ್ರಮಾಣ ಹೆಚ್ಚಾಗುತ್ತದೆ.
  • ಬಿಸಿಲಿನಲ್ಲಿ ಹೊರಗೆ ತೆರಳುವಾಗ ಕನ್ನಡಕ (ಸನ್‌ ಗ್ಲಾಸ್‌) ಧರಿಸಬೇಕು. ಹೆಚ್ಚು ತೆಳುವಾದ ಕಾಟನ್‌ ಉಡುಪು ಧರಿಸಬೇಕು. ಗಾಳಿಯಾಡುವಂತಹ ಪಾದರಕ್ಷೆ ಧರಿಸಬೇಕು.
  • ಬಿಸಿಲಿನಲ್ಲಿ ಕೆಲಸ ಮಾಡುವವರು(ಕಾರ್ಮಿಕರು) ಹೆಚ್ಚು (ನಾಲ್ಕು ಲೀ. ಕಾಯಿಸಿ ಆರಿಸಿದ ನೀರು) ನೀರು ಕುಡಿದು, ವಿಶ್ರಾಂತಿ ಪಡೆಯಬೇಕು.

ಬಿಸಿಲಿನ ತಾಪ ಹೆಚ್ಚಾಗುತ್ತಿರುವುದರಿಂದ ದೇಹದಲ್ಲಿ ನೀರಿನಂಶ ಕಡಿಮೆ ಆಗದಂತೆ ಹೆಚ್ಚು ಶುದ್ಧ ನೀರು ಸೇವಿಸಬೇಕು. ನಿಶ್ಯಕ್ತಿ ಕಾಣಿಸಿಕೊಂಡರೆ ಕೂಡಲೇ ವೈದ್ಯರ ಬಳಿ ತೆರಳಿ ಚಿಕಿತ್ಸೆ ಪಡೆಯಬೇಕು. ಆದಷ್ಟು ಮಕ್ಕಳನ್ನು ಬಿಸಿಲಿನಲ್ಲಿ ಆಟವಾಡಲು ಬಿಡಬಾರದು. ●ಡಾ.ಟಿ.ಎ.ವೀರಭದ್ರಯ್ಯ, ಆರೋಗ್ಯ ಇಲಾಖೆ ಉಪನಿರ್ದೇಶಕ

ಬಿಸಿಲಿನ ತಾಪಮಾನ ಹೆಚ್ಚಾಗಿದ್ದು, ಕಾಯಿಸಿಆರಿಸಿದ ನೀರು ಕುಡಿಯಬೇಕು.ಸಾಂಕ್ರಾಮಿಕ ರೋಗಗಳು ಬರದಂತೆಎಚ್ಚರಿಕೆ ವಹಿಸಬೇಕು. ದೇಹದಲ್ಲಿನೀರಿನಂಶ ಕಡಿಮೆಯಾಗದಿರಲು ಪ್ರತಿಯೊಬ್ಬರು ನಾಲ್ಕು ಲೀಟರ್‌ ನೀರು ಕುಡಿಯಬೇಕು. ●ಡಾ.ಜಿ.ಎ.ಶ್ರೀನಿವಾಸ್‌ ಗೂಳೂರು, ನಗರ ಡಿಎಚ್‌ಒ

-ವಿಕಾಸ್‌ ಆರ್‌.

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.