ಹೊಟ್ಟೆ ಪಕ್ಷ ,ಏರೋಪ್ಲೇನ್‌ ಚಿಹ್ನೆ..ಅವರೇ ರಂಗಸ್ವಾಮಿ..!”


Team Udayavani, May 6, 2018, 7:30 AM IST

hotte-paksha.jpg

ಹೊಟ್ಟೆ ಪಕ್ಷದ ರಂಗಸ್ವಾಮಿ’ ಈ ಹೆಸರು ರಾಷ್ಟ್ರ ರಾಜಕಾರಣದಲ್ಲೂ ಚಿರಪರಿಚಿತ. ಹಾಗೆಂದು ಇವರು ವಿಧಾನಸಭೆ, ಲೋಕಸಭೆ ಸದಸ್ಯರಾಗಲಿ ಅಥವಾ ಖ್ಯಾತಿವೆತ್ತ ರಾಜಕಾರಣಿ ಅಲ್ಲ. ರಾಜಕಾರಣಿಗಳ ಜತೆ ನಂಟೂ ಇರಲಿಲ್ಲ. ಆದರೂ ಖ್ಯಾತಿ ಹೊಂದಿರುವ ಎಲ್ಲ ರಾಜಕಾರಣಿಗಳಿಗೂ ಇವರು ಗೊತ್ತಿತ್ತು. ಅದೇ ಹೊಟ್ಟೆ ಪಕ್ಷದ ರಂಗಸ್ವಾಮಿ ತಾಕತ್ತು.ಚುನಾವಣೆಗೆ ಸ್ಪರ್ಧಿಸುವುದರಲ್ಲಿ ಗಿನ್ನಿಸ್‌ ರೆಕಾರ್ಡ್‌ ಸೃಷ್ಟಿಸಿದ್ದ ಹೊಟ್ಟೆ ಪಕ್ಷದ ರಂಗಸ್ವಾಮಿ ಹೆಸರೇ ಹೇಳುವಂತೆ ಹೊಟ್ಟೆಪಕ್ಷದ ಸಂಸ್ಥಾಪಕ, ನಾಯಕ, ಕಾರ್ಯಕರ್ತ ಎಲ್ಲರೂ ಅವರೇ ಆಗಿದ್ದರು.

ಚುನಾವಣೆಗೆ ಸ್ಪರ್ಧಿಸಲು ಟಿಕೆಟ್‌ ಕೋರಿ ರಾಜಕೀಯ ಪಕ್ಷಗಳಿಗೆ ಅರ್ಜಿ ಹಾಕಿ ಹಾಕಿ ಬೇಸರಗೊಂಡು ತಮ್ಮದೇ ಆದ ಪಕ್ಷ ಕಟ್ಟಿದ್ದರು. ಆದರೆ ನೋಂದಣಿ ಮಾಡಿಸಿರಲಿಲ್ಲ. ಆದರೂ ಹೊಟ್ಟೆ ಪಕ್ಷ ಇತರೆ ರಾಜಕೀಯ ಪಕ್ಷಗಳಂತೆ ಜನಪ್ರಿಯವಾಗಿತ್ತು. ಪ್ರಾರಂಭದಲ್ಲಿ ಆನೆ, ನಂತರ ಬಿಲ್ಲುಬಾಣ ಆ ನಂತರ ಏರೋಪ್ಲೇನ್‌ ಚಿಹ್ನೆಯಡಿ ಸತತವಾಗಿ ಚುನಾವಣೆಗೆ ಸ್ಪರ್ಧಿಸುತ್ತಿದ್ದರು.

1978ರಲ್ಲಿ ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿಯವರು ಚಿಕ್ಕಮಗಳೂರು ಲೋಕಸಭೆ ಉಪ ಚುನಾವಣೆಗೆ ಸ್ಪರ್ಧಿಸಿದಾಗ ಅವರ ವಿರುದ್ಧವೂ ಸ್ಪರ್ಧಿಸಿದ್ದರು. ಅಷ್ಟೇ ಅಲ್ಲ, ರಾಜೀವ್‌ಗಾಂಧಿ, ಪಿ.ವಿ.ನರಸಿಂಹರಾವ್‌ ವಿರುದ್ಧವೂ ಸ್ಪರ್ಧೆ ಮಾಡಿದ್ದರು. ಒಟ್ಟು 86 ಬಾರಿ ಸ್ಪರ್ಧಿಸಿ ಗಿನ್ನಿಸ್‌ ದಾಖಲೆ ಮಾಡಿದ್ದರು.

ಹಾಗೆಂದು ಇವರೇನು ಕೋಟ್ಯಾಧಿಪತಿಗಳಲ್ಲ. ಇವರು ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಪ್ರಮಾಣಪತ್ರದಲ್ಲಿ 15 ಲಕ್ಷ ರೂ. ಮೌಲ್ಯದ ಕಟ್ಟಡ ಹೊರತುಪಡಿಸಿದರೆ ಬೇರೇನೂ ಇರಲಿಲ್ಲ. 

ಒಂದೆರಡು ಜತೆ ಬಟ್ಟೆ ಒಳಗೊಂಡ ಬ್ಯಾಗ್‌ ಕೈಯಲ್ಲೊಂದು ತ್ರಿಶೂಲ ಕಾಣಿಸಿತು ಎಂದರೆ ಅದು ಹೊಟ್ಟೆ ಪಕ್ಷದ ರಂಗಸ್ವಾಮಿ ಅಲ್ಲಿದ್ದಾರೆ ಎಂದರ್ಥ.

ತ್ರಿಶೂಲ ಹಿಡಿದು ವಿಧಾನಸೌಧಕ್ಕೆ ಪ್ರವೇಶಿಸಿ ಸಚಿವರು ಹಾಗೂ ಅಧಿಕಾರಿಗಳ ಭೇಟಿ ಮಾಡಿ ಜನರ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿ ಮನವಿ ಅರ್ಪಿಸುತ್ತಿದ್ದರು. ಸಚಿವರು ಸಹ ಮನವಿ ಸ್ವೀಕರಿಸಿ ಸಾಗ ಹಾಕುತ್ತಿದ್ದರು. 

ಒಮ್ಮೆ ಖುದ್ದು ಇಂದಿರಾಗಾಂಧಿ, ರಾಜೀವ್‌ಗಾಂಧಿ, ಪಿ.ವಿ.ನರಸಿಂಹರಾವ್‌ ಕೇಳಿದ್ದೂ ಉಂಟು. “ಹು ಈಸ್‌ ದಿಸ್‌ ರಂಗಸ್ವಾಮಿ’ ಎಂದು. ಹಸಿದ ಹೊಟ್ಟೆಗೆ ಊಟ ಕೊಡಬೇಕೆಂಬುದೇ ಇವರ ಘೋಷವಾಕ್ಯ. ಚುನಾವಣೆಗೆ ನಿಂತಾಗಲೆಲ್ಲ 1 ರೂ.ಗೆ ಅಕ್ಕಿ ಕೊಟ್ಟು ಗಮನ ಸೆಳೆಯುತ್ತಿದ್ದರು. 
 
ಚುನಾವಣೆಗೆ ಸ್ಪರ್ಧಿಸುವುದು ಬಿಟ್ಟ ನಂತರ ಕೆಲಕಾಲ ಆರ್‌ಟಿಐ ಅರ್ಜಿ ಹಾಕಿ ಪ್ರಭಾವಿಗಳ ಆಸ್ತಿ, ಅವ್ಯವಹಾರ, ಅಕ್ರಮಗಳ ಬಗ್ಗೆ ಮಾಹಿತಿ ಪಡೆದು ಹೋರಾಟ ಮಾಡುತ್ತಿದ್ದರು.1967 ರಲ್ಲಿ  ಮೊದಲ ಬಾರಿಗೆ ಆಗಿನ ರೈಲ್ವೆ ಸಚಿವರೂ ಆಗಿದ್ದ ಕೆಂಗಲ್‌ ಹನುಮಂತಯ್ಯ ವಿರುದ್ಧ ಲೋಕಸಭೆ ಚುನಾವಣೆಗೆ ಮೊದಲ ಬಾರಿಗೆ ಸ್ಪರ್ಧಿಸಿದ್ದ ರಂಗಸ್ವಾಮಿ ನಂತರ ಪ್ರತಿ ಚುನಾವಣೆಯಲ್ಲೂ ಸ್ಪರ್ಧಿಸುತ್ತಿದ್ದರು. 

2006ರಲ್ಲಿ ಅಯೋಧ್ಯೆಯ ಕಿಷ್ಕಿಂದ ಆಶ್ರಮ ಸೇರಿ ಸ್ವಾಮಿ ರಂಗನಾಥಪುರಿ ಆಗಿದ್ದರು. 74ನೇ ವಯಸ್ಸಿನಲ್ಲಿ 2007 ರಲ್ಲಿ ಕೇರಳದಲ್ಲಿ ನಿಧನರಾದರು. 

ರಂಗಸ್ವಾಮಿಯವರಿಗೆ ಮೂವರು ಮಕ್ಕಳು. ಆಪೈಕಿ  ಅವರ ಪುತ್ರ ರಾಜೇಂದ್ರ ಪ್ರಸಾದ್‌ ಸಹ ತಂದೆಯ ಹಾದಿಯಲ್ಲೇ ಸಾಗಲು ಪ್ರಯತ್ನಿಸಿ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ವಿರುದ್ಧ ಕನಕಪುರ ಉಪ ಚುನಾವಣೆಯಲ್ಲಿ ಸ್ಪರ್ಧಿಸಿ 17,250 ಮತ ಪಡೆದಿದ್ದರು. ನಂತರ ಕೊಪ್ಪಳ, ಹೊಸಪೇಟೆ, ಬೆಂಗಳೂರು ಹೀಗೆ ನಾಲ್ಕು ಬಾರಿ ಚುನಾವಣೆಗೆ ಸ್ಪರ್ಧಿಸಿ ಸುಸ್ತಾದರು. ಈಗಲೂ ತಮ್ಮ ತಂದೆಯ ಸಾಹಸದ ಬಗ್ಗೆ ಹೆಮ್ಮೆ ಪಡುವ ರಾಜೇಂದ್ರಪ್ರಸಾದ್‌ ತಂದೆಯ ಜತೆ ಚುನಾವಣೆ ಪ್ರಚಾರದಲ್ಲಿ ಪಾಲ್ಗೊಳ್ಳುತ್ತಿದ್ದ ಬಗ್ಗೆ ಸ್ಮರಿಸುತ್ತಾರೆ. 

ಆಯ್ತು ಹೋಗಿ ಬನ್ನಿ ಮಹಾಸ್ವಾಮಿ…
ಹಲವಾರು ಮುಖ್ಯಮಂತ್ರಿಗಳಿಗೂ ರಂಗಸ್ವಾಮಿ ಪರಿಚಯ. ನೇರವಾಗಿ ವಿಧಾನಸೌಧಕ್ಕೆ ಬಂದು ಮುಖ್ಯಮಂತ್ರಿಗಳ ಕಚೇರಿಗೆ ಹೋಗಿ ಮನವಿ ಕೊಡುತ್ತಿದ್ದರು. ಜೆ.ಎಚ್‌.ಪಟೇಲ್‌ ಅವರು ಮುಖ್ಯಮಂತ್ರಿಯಾಗಿದ್ದಾಗ ಒಮ್ಮೆ ತ್ರಿಶೂಲದೊಂದಿಗೆ ರಂಗಸ್ವಾಮಿ ಪ್ರತ್ಯಕ್ಷರಾಗಿ ಜನರ ಸಮಸ್ಯೆಗಳ ಬಗ್ಗೆ ಮನವಿ ನೀಡಿದರು. ಮುಗುಳ್ನಕ್ಕು ಆಯ್ತು ಹೋಗಿ ಬನ್ನಿ ಮಹಾಸ್ವಾಮಿ ಎಂದು ಜೆ.ಎಚ್‌.ಪಟೇಲ್‌ ಹೇಳಿದ್ದರು.

– ಎಸ್‌.ಲಕ್ಷ್ಮಿನಾರಾಯಣ

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.