ಜ್ಯುವೆಲ್ಲರಿ ಪಕ್ಕದಲ್ಲಿ ಬಾಡಿಗೆಗೆ ಮನೆ ಪಡೆದು ಗೋಡೆ ಕೊರೆದು 5 ಕೆ.ಜಿ. ಚಿನ್ನ ಕಳ್ಳತನ!


Team Udayavani, Apr 21, 2022, 10:09 AM IST

2gold

ಬೆಂಗಳೂರು: ಜೆ.ಪಿ. ನಗರ 1ನೇ ಹಂತದಲ್ಲಿರುವ ಪ್ರಿಯದರ್ಶಿನಿ ಜ್ಯುವೆಲ್ಲರಿ ಅಂಗಡಿ ಗೋಡೆ ಕೊರೆದ ದುಷ್ಕರ್ಮಿಗಳು ಬರೋಬ್ಬರಿ 2.50 ಕೋಟಿ ರೂ. ಮೌಲ್ಯದ 5 ಕೆ.ಜಿ. ಚಿನ್ನಾಭರಣ ದೋಚಿರುವ ಘಟನೆ ನಡೆದಿದೆ.

ಜೆ.ಪಿ. ನಗರದ ಶಾಕಾಂಬರಿ ನಗರದ ನಿವಾಸಿ ರಾಜು ದೇವಾಡಿಗ ಕೊಟ್ಟ ದೂರಿನ ಆಧಾರದ ಮೇಲೆ ಜೆ.ಪಿ. ನಗರ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದು, ತಲೆಮರೆಸಿಕೊಂಡಿರುವ ದೆಹಲಿ ಮೂಲದ ಇಬ್ಬರು ಆರೋಪಿಗಳಿಗೆ ಶೋಧ ಕಾರ್ಯ ಆರಂಭಿಸಿದ್ದಾರೆ.

ರಾಜು ದೇವಾಡಿಗ 2010ರಲ್ಲಿ ಶಾಕಾಂಬರಿ ನಗರದಲ್ಲಿ ತಮ್ಮ ಸ್ವಂತ ಕಟ್ಟಡದ 2ನೇ ಮಹಡಿಯಲ್ಲಿ ಪ್ರಿಯದರ್ಶಿನಿ ಜ್ಯುವೆಲ್ಲರಿ ಆರಂಭಿಸಿದ್ದರು. ಪ್ರತಿದಿನ ರಾತ್ರಿ 9 ಗಂಟೆಯವರೆಗೆ ವ್ಯಾಪಾರ ಮಾಡಿಕೊಂಡು ಚಿನ್ನಾಭರಣಗಳನ್ನು ಲಾಕರ್‌ಗಳಲ್ಲಿ ಇಟ್ಟು ಅಂಗಡಿಗೆ ಬೀಗ ಹಾಕಿಕೊಂಡು ಹೋಗುತ್ತಿದ್ದರು. ದೆಹಲಿ ಮೂಲದ ಇಬ್ಬರು ಒಂದು ತಿಂಗಳ ಹಿಂದೆ ಆರೋಪಿಗಳು ಇಲ್ಲಿ ಮನೆ ಬಾಡಿಗೆಗೆ ಪಡೆದಿದ್ದರು. ನಂತರ ಪ್ರಿಯದರ್ಶಿನಿ ಜ್ಯುವೆಲ್ಲರಿಗೆ ಕನ್ನ ಹಾಕಲು ಸಂಚು ರೂಪಿಸಿದ್ದರು. ಅದರಂತೆ ಕಳೆದ 2 ವಾರಗಳಿಂದ ಚಿನ್ನದಂಗಡಿಗೆ ಹೊಂದಿಕೊಂಡಿರುವ ಗೋಡೆಯನ್ನು ಮನೆಯೊಳಗಿನಿಂದ ಕಬ್ಬಿಣದ ಚೂಪಾದ ವಸ್ತು ಹಾಗೂ ಹಾರೆಯಿಂದ ಹಂತ-ಹಂತವಾಗಿ ಕೊರೆಯಲು ಆರಂಭಿಸಿದ್ದರು. ಏ.17ರಂದು ರಾಜು ಜ್ಯುವೆಲ್ಲರ್ಸ್‌ನಲ್ಲಿ ವ್ಯಾಪಾರ ಮುಗಿಸಿ ಚಿನ್ನಾಭರಣಗಳನ್ನು ಕಬ್ಬಿಣದ ಲಾಕರ್‌ನಲ್ಲಿ ಇಟ್ಟು ಹೋಗಿದ್ದರು. ಇತ್ತ ಗೋಡೆ ಕೊರೆದು ಜ್ಯುವೆಲ್ಲರಿಯೊಳಗೆ ನುಗ್ಗಿದ ಆರೋಪಿಗಳು, ಮೊದಲಿಗೆ ಅಲ್ಲಿದ್ದ ಸಿಸಿ ಕ್ಯಾಮೆರಾ ಸಂಪರ್ಕ ಕಡಿತಗೊಳಿಸಿದ್ದರು. ನಂತರ 2.50 ಕೋಟಿ ರೂ. ಮೌಲ್ಯದ 5 ಕೆ.ಜಿ. ಚಿನ್ನಾಭರಣವನ್ನು ದೋಚಿದ್ದಾರೆ ಎಂದು ದೂರು ನೀಡಿದ್ದಾರೆ.

ಇದನ್ನೂ ಓದಿ:ದನದ ಜತೆ ಕೋಳಿ, ನಾಯಿಮರಿ ಕದ್ದೊಯ್ದ ದುರುಳರು!; ಕಾರ್ಕಳದಲ್ಲಿ ನಡೆದ ಘಟನೆ

ಹಿಂದೆಯೂ ವಿಫಲ ಯತ್ನ

2015ರಲ್ಲೂ ಪ್ರಿಯದರ್ಶಿನಿ ಜ್ಯುವೆಲ್ಲರಿ ಅಂಗಡಿಯಲ್ಲಿ ಕಳ್ಳತನಕ್ಕೆ ವಿಫಲ ಯತ್ನ ನಡೆದಿತ್ತು. ತಡರಾತ್ರಿ 3 ಗಂಟೆಗೆ ಜ್ಯುವೆಲ್ಲರಿ ಪಕ್ಕದಲ್ಲಿ ಮೋರಿ ಮೂಲಕ ಗೋಡೆ ಕೊರೆದು ಚಿನ್ನದ ಅಂಗಡಿಗೆ ಪ್ರವೇಶಿಸಲು ಕಳ್ಳರು ಯತ್ನಿಸಿದ್ದರು. ಗೋಡೆ ಕೊರೆಯುತ್ತಿದ್ದ ಶಬ್ದ ಕೇಳಿಸಿಕೊಂಡಿದ್ದ ಸ್ಥಳೀಯರು ಪೊಲೀಸರಿಗೆ ಮಾಹಿತಿ ಕೊಟ್ಟಿದ್ದರು. ಜೆ.ಪಿ. ನಗರ ಪೊಲೀಸರು ಸ್ಥಳಕ್ಕೆ ಧಾವಿಸಿ ಮೂವರನ್ನು ಬಂಧಿಸಿದ್ದರು.

ಮನೆ ಮಾಲೀಕರಿಗೆ ನಕಲಿ ವಿಳಾಸ

ಏ.18ರಂದು ಬೆಳಗ್ಗೆ 10 ಗಂಟೆಗೆ ರಾಜು ಜ್ಯುವೆಲ್ಲರಿ ತೆರೆದಾಗ ಕಳ್ಳತನವಾದ ಸಂಗತಿ ಬೆಳಕಿಗೆ ಬಂದಿದೆ. ಕೂಡಲೇ ರಾಜು ಜೆ.ಪಿ. ನಗರ ಠಾಣೆಗೆ ಈ ಕುರಿತು ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಬೆರಳಚ್ಚು ಹಾಗೂ ಶ್ವಾನದಳದ ತಂಡದೊಂದಿಗೆ ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದ್ದಾರೆ. ಆರೋಪಿಗಳು ಬಾಡಿಗೆಗೆ ಪಡೆದಿದ್ದ ಮನೆ ಮಾಲೀಕರ ಬಳಿ ಆರೋಪಿಗಳು ಕೊಟ್ಟ ದಾಖಲೆಗಳನ್ನು ಪರಿಶೀಲಿಸಿದಾಗ ನಕಲಿ ದಾಖಲೆ ಕೊಟ್ಟಿರುವುದು ಪತ್ತೆಯಾಗಿದೆ. ಬಾಡಿಗೆಗೆ ಪಡೆದಿದ್ದ ಮನೆಯ ಮಾಲೀಕರಿಗೆ ದೆಹಲಿ ಹಾಗೂ ಉತ್ತರಾಖಂಡ್‌ನ‌ ವಿಳಾಸದ ನಕಲಿ ಆಧಾರ್‌ ಕಾರ್ಡ್‌ ನೀಡಿದ್ದರು. ಒಂದು ತಿಂಗಳಿನಿಂದ ಅಂಗಡಿಯಲ್ಲಿರುವ ಚಿನ್ನಾಭರಣ ಸೇರಿ ಇನ್ನಿತರ ಮಾಹಿತಿಯನ್ನು ಕಲೆ ಹಾಕಿದ್ದರು. ಖದೀಮರ ಬಂಧನಕ್ಕೆ ದಕ್ಷಿಣ ವಿಭಾಗದ ಡಿಸಿಪಿ ಹರೀಶ್‌ ಪಾಂಡೆ ವಿಶೇಷ 3 ತಂಡ ರಚನೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.