ಆತ್ಮಹತ್ಯೆಗೆ ಯತ್ನ: ಸಿನಿಮೀಯ ರೀತಿಜೀವ ಉಳಿಸಿದ ಹೊಯ್ಸಳ ಸಿಬ್ಬಂದಿ
Team Udayavani, Mar 2, 2023, 2:16 PM IST
ಬೆಂಗಳೂರು: ಪುಲಕೇಶಿನಗರದಲ್ಲಿ ಕ್ರಿಮಿನಾಶಕ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯನ್ನು ಸಿನಿಮೀಯ ರೀತಿಯಲ್ಲಿ ಹೊಯ್ಸಳ ಪೊಲೀಸರು ರಕ್ಷಣೆ ಮಾಡಿ ಸಾಹಸ ಮೆರೆದಿದ್ದಾರೆ.
ಪುಲಕೇಶಿನಗರದಲ್ಲಿ ಸುಮಾರು 30 ವರ್ಷದ ಮಹಿಳೆಯೊಬ್ಬರು ಕೌಟುಂಬಿಕ ಸಮಸ್ಯೆ ಹೊಂದಿ ಮಾನಸಿಕವಾಗಿ ನೊಂದಿದ್ದರು. ಫೆ.26ರಂದು ರಾತ್ರಿ ಮನೆಯಲ್ಲಿ ಯಾರು ಇಲ್ಲದ ವೇಳೆ ಕ್ರಿಮಿನಾಶಕ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದರು. ಬಳಿಕ ಸಂಕಟ ತಾಳಲಾರದೇ ಚೀರಾಡಿದ್ದರು. ಮಹಿಳೆಯ ಕಿರುಚಾಟದ ಶಬ್ದ ಕೇಳಿದ ಸ್ಥಳೀಯರು ಮಹಿಳೆಯಿದ್ದ ಮನೆಗೆ ಹೋಗಲು ಯತ್ನಿಸಿದರೂ ಬಾಗಿಲು ಒಳಗಡೆಯಿಂದ ಲಾಕ್ ಆದ ಹಿನ್ನೆಲೆ ಸಾಧ್ಯವಾಗಿರಲಿಲ್ಲ.
ನಂತರ ಪುಲಕೇಶಿ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದರು. ಪುಲಕೇಶಿನಗರ ಠಾಣೆ ಇನ್ಸ್ಪೆಕ್ಟರ್ ವಿ.ಬಿ.ಕಿರಣ್ ಅವರು ಕರ್ತವ್ಯದಲ್ಲಿದ್ದ ಹೊಯ್ಸಳ ಗಸ್ತು ವಾಹನ ಸಿಬ್ಬಂದಿಗೆ ಸಂದೇಶ ರವಾನಿಸಿದ್ದರು. ಕೂಡಲೇ ಹೊಯ್ಸಳ ಸಿಬ್ಬಂದಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯ ಮನೆಗೆ ತೆರಳಿ ಬಾಗಿಲು ಒಡೆದು ಪೊಲೀಸ್ ವಾಹನದಲ್ಲೇ ಆಸ್ಪತ್ರೆಗೆ ಕರೆದೊಯ್ದಿದ್ದರು. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ದೊರೆತ ಹಿನ್ನೆಲೆಯಲ್ಲಿ ಸಾಯುವ ಹಂತ ತಲುಪಿದ್ದ ಮಹಿಳೆ ಪ್ರಾಣಪಾಯದಿಂದ ಪಾರಾಗಿದ್ದಾಳೆ.
ಹೊಯ್ಸಳ ಸಿಬ್ಬಂದಿಗೆ ಪ್ರಶಂಸನಾ ಪತ್ರ : ಕಾರ್ಯಾಚರಣೆಯಲ್ಲಿ ಭಾಗಿಯಾದ ಮೂವರು ಪೊಲೀಸ್ ಸಿಬ್ಬಂದಿ ಕಾರ್ಯವೈಖರಿಗೆ ಹಿರಿಯ ಅಧಿಕಾರಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ. ಇನ್ಸ್ಪೆಕ್ಟರ್ ವಿ.ಬಿ. ಕಿರಣ್, ಹೆಡ್ಕಾನ್ಸ್ಟೆàಬಲ್ ಸಿ.ಜಿ.ಪರಮೇಶ್ವರಪ್ಪ, ಸಬ್ ಇನ್ಸ್ಪೆಕ್ಟರ್ ದೊಡ್ಡ ಕೆ.ರೇವಣ್ಣ ಅವರಿಗೆ ಪೂರ್ವ ವಿಭಾಗದ ಡಿಸಿಪಿ ಡಾ.ಭೀಮಾ ಶಂಕರ್ ಗುಳೇದ್ ಅವರು ಪ್ರಶಂಸನಾ ಪತ್ರ ನೀಡಿ ಗೌರವಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ಯಾಂಪಸ್ ಸೆಲೆಕ್ಷನ್ ಆಗದ್ದಕ್ಕೆ ಯುವಕ 4ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ
Accused: ಕೊಲೆ ಯತ್ನ ಪ್ರಕರಣದ ಆರೋಪಿ 19 ವರ್ಷಗಳ ಬಳಿಕ ಹಾಸನದಲ್ಲಿ ಬಂಧನ
Arrested: ಜನರನ್ನು ಅಡ್ಡಗಟ್ಟಿ ಮೊಬೈಲ್ ಕಸಿಯುತ್ತಿದ್ದ ಇಬ್ಬರ ಬಂಧನ
Bengaluru: ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ; ಓರ್ವಸೆರೆ, ಇಬ್ಬರು ಮಹಿಳೆಯರ ರಕ್ಷಣೆ
Assault case: 10 ವರ್ಷಗಳಿಂದ ಕೋರ್ಟ್ಗೆ ಗೈರಾಗಿದ್ದ ಆರೋಪಿ ಸೆರೆ