ಹುಬ್ಬಳ್ಳಿ ಸೆಂಟ್ರಲ್‌ನಲ್ಲಿ ಯಾರೇ ಗೆದ್ರೂ ಇತಿಹಾಸ


Team Udayavani, May 3, 2018, 6:00 AM IST

Hubli-Dharwad-Central-Assem.jpg

ರಾಜ್ಯದ ಪ್ರತಿಷ್ಠಿತ ವಿಧಾನಸಭಾ ಕ್ಷೇತ್ರಗಳಲ್ಲಿ ಒಂದಾಗಿರುವ ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಯಾರೇ ಗೆದ್ದರೂ ಇತಿಹಾಸ. ಸತತ ಐದು ಬಾರಿ ಗೆದ್ದ ದಾಖಲೆ ಹೊಂದಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ ಅವರು ಈ ಬಾರಿ ಆರನೇ ಗೆಲುವಿಗೆ ಬೆವರಿಳಿಸಬೇಕಾಗಿದೆ. 

ನಾಡಿಗೆ ಇಬ್ಬರು ಮುಖ್ಯಮಂತ್ರಿಗಳನ್ನು ನೀಡಿದ ಕೀರ್ತಿ ಈ ಕ್ಷೇತ್ರದ್ದು. ಕ್ಷೇತ್ರ ಪುನರ್‌ ವಿಂಗಡಣೆಗೆ ಮುನ್ನ ಇದು ಹುಬ್ಬಳ್ಳಿ ಗ್ರಾಮೀಣ ಕ್ಷೇತ್ರವಾಗಿತ್ತು. ಇದೇ ಕ್ಷೇತ್ರದಿಂದ ಆಯ್ಕೆಯಾದ ಎಸ್‌.ಆರ್‌.ಬೊಮ್ಮಾಯಿ ಹಾಗೂ ಜಗದೀಶ ಶೆಟ್ಟರ್‌ ಮುಖ್ಯಮಂತ್ರಿ ಆಗಿದ್ದರು. ಕ್ಷೇತ್ರದ ವಿಶೇಷವೆಂದರೆ ಮರು ಆಯ್ಕೆಗೆ ಮನ್ನಣೆ ನೀಡುತ್ತ ಬಂದಿರುವುದು. 1957ರಿಂದ 2013ರವರೆಗಿನ ಚುನಾವಣೆಗಳಲ್ಲಿ ಕೇವಲ ನಾಲ್ಕು ಮಂದಿಯಷ್ಟೇ ಈ ಕ್ಷೇತ್ರವನ್ನು ವಿಧಾನಸಭೆಯಲ್ಲಿ ಪ್ರತಿನಿಧಿಸಿದ್ದಾರೆ. ಒಬ್ಬರು ಐದು ಬಾರಿ, ಇಬ್ಬರು ಮೂರು ಬಾರಿ ಹಾಗೂ ಒಬ್ಬರು ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. 

ತ್ರಿಕೋನ ಸ್ಪರ್ಧೆ: ಕ್ಷೇತ್ರದಲ್ಲಿ ಒಟ್ಟು 2,33,884 ಮತದಾರರಿದ್ದಾರೆ. ಈ ಪೈಕಿ 1,17,255 ಪುರು ಷರು ಹಾಗೂ 1,16,629 ಮಂದಿ ಮಹಿಳೆಯರು. ಜಗದೀಶ ಶೆಟ್ಟರ್‌ ಬಿಜೆಪಿಯಿಂದ ಸ್ಪರ್ಧಿಸಿದ್ದರೆ, ಕಾಂಗ್ರೆಸ್‌ನಿಂದ ಡಾ|ಮಹೇಶ ನಾಲವಾಡ, ಜೆಡಿಎಸ್‌ನಿಂದ ರಾಜಣ್ಣಾ ಕೊರವಿ, ಆಮ್‌ಆದ್ಮಿ ಪಕ್ಷದಿಂದ ಸಂತೋಷ ನರಗುಂದ ಸೇರಿದಂತೆ ಒಟ್ಟು 26 ಅಭ್ಯರ್ಥಿಗಳು ಕಣದಲ್ಲಿದ್ದಾರೆ.  ಈ ಬಾರಿ ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಡುವೆ ಪೈಪೋಟಿ ತೀವ್ರವಾಗಿದೆ. ಗೆಲುವಿಗಾಗಿ ಮೂರೂ ಪಕ್ಷಗಳ ಅಭ್ಯರ್ಥಿಗಳು ಕಸರತ್ತು ನಡೆಸಿದ್ದಾರೆ. ಅಬ್ಬರದ ಪ್ರಚಾರಕ್ಕಿಂತಲೂ ಮನೆ-ಮನೆ ಭೇಟಿ, ಪಾದಯಾತ್ರೆ, ವಾರ್ಡ್‌ ವಾಸ್ತವ್ಯ ತಂತ್ರಗಳಿಗೆ ಮೊರೆ ಹೋಗಿದ್ದಾರೆ. 

ಅದೃಷ್ಟ ನಿರೀಕ್ಷೆ: ಶೆಟ್ಟರ್‌ ಆರನೇ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. 1994ರಲ್ಲಿ ಎಸ್‌.ಆರ್‌. ಬೊಮ್ಮಾಯಿ ಅವರನ್ನು ಸೋಲಿಸಿ ವಿಧಾನಸಭೆ ಪ್ರವೇಶಿಸಿದ್ದ ಅವರು ಈ ಕ್ಷೇತ್ರದಿಂದ ಅತಿ ಹೆಚ್ಚು ಬಾರಿ ಆಯ್ಕೆಯಾದ ದಾಖಲೆ ಬರೆದಿದ್ದಾರೆ. ಅದಕ್ಕೂ ಮುನ್ನ ಎಂ.ಆರ್‌. ಪಾಟೀಲರು ಮೂರು ಬಾರಿ ಹಾಗೂ ಎಸ್‌.ಆರ್‌.ಬೊಮ್ಮಾಯಿ ಒಟ್ಟಾರೆ ಮೂರು ಬಾರಿ ಚುನಾಯಿತರಾಗಿದ್ದರು. 

2ನೇ ಬಾರಿಗೆ ಯತ್ನ: ಕಾಂಗ್ರೆಸ್‌ ಅಭ್ಯರ್ಥಿ ಡಾ|ಮಹೇಶ ನಾಲವಾಡ ಅವರು ಎರಡನೇ ಬಾರಿಗೆ ಶೆಟ್ಟರ್‌ ಜತೆ ಮುಖಾಮುಖೀ ಆಗಿದ್ದಾರೆ. ಕಳೆದ ಚುನಾವಣೆಯಲ್ಲಿ ಅವರು ಮೊದಲ ಪ್ರಯತ್ನದಲ್ಲೇ ಸುಮಾರು 40,447 ಮತಗಳನ್ನು ಪಡೆದು  ಪೈಪೋಟಿ ನೀಡಿ ಗಮನ ಸೆಳೆದಿದ್ದರು.

ನಿರ್ಣಾಯಕ ಅಂಶವೇನು?
ಈ ಕ್ಷೇತ್ರದಲ್ಲಿ  ಸ್ಪರ್ಧಿಸಿರುವ ಪ್ರಮುಖ 3 ಪಕ್ಷಗಳ ಅಭ್ಯರ್ಥಿ ಗಳು ಲಿಂಗಾಯಿತ ಸಮುದಾಯಕ್ಕೆ ಸೇರಿದವರು. ಹಾಗಾಗಿ ಈ ಸಮುದಾಯದ ಮತಗಳು ಹಂಚಿ ಹೋದರೂ ಮುಸ್ಲಿಮರು, ಬ್ರಾಹ್ಮ ಣರು ಹಾಗೂ ಸಹಸ್ರರ್ಜುನ ಸೋಮವಂಶ ಕ್ಷತ್ರೀಯ (ಎಸ್‌ಎಸ್‌ಕೆ) ಸಮಾಜದ ಮತದಾರರು ಯಾರನ್ನು ಬೆಂಬಲಿಸುತ್ತಾರೋ ಅವರಿಗೆ ಗೆಲುವು ಖಾತ್ರಿ. 

25 ವರ್ಷಗಳಲ್ಲಿ ಕೈಗೊಂಡ  ಅಭಿವೃದ್ಧಿ ಕಾರ್ಯಗಳೇ ಶ್ರೀರಕ್ಷೆ. ಮತದಾರರ ಋಣ ತೀರಿಸುವ ಕೆಲಸ ಮಾಡಿದ್ದೇನೆ. ಆರನೇ ಬಾರಿಗೂ ಜನ ನನ್ನ ಕೈ ಹಿಡಿಯಲಿದ್ದಾರೆ. 
– ಜಗದೀಶ ಶೆಟ್ಟರ, ಬಿಜೆಪಿ ಅಭ್ಯರ್ಥಿ

ಶೆಟ್ಟರ ಅವರನ್ನು 5 ಬಾರಿ ಆಯ್ಕೆ ಮಾಡಿದರೂ ಅಭಿವೃದ್ಧಿ ಆಗದಿರುವ ಬಗ್ಗೆ ಜನರ ಆಕ್ರೋಶವಿದೆ. ಜತೆಗೆ ಸಿದ್ದರಾಮಯ್ಯ ಸರ್ಕಾರ ನೀಡಿದ ಜನಪರ ಯೋಜನೆಗಳ‌ ನೆರವು ನನ್ನನ್ನು ಗೆಲ್ಲಿಸಲಿದೆ. 
– ಮಹೇಶ ನಾಲವಾಡ, ಕಾಂಗ್ರೆಸ್‌ ಅಭ್ಯರ್ಥಿ

ಶೆಟ್ಟರ ಅವರು ಅಭಿವೃದ್ಧಿ ಕಾರ್ಯ ಮಾಡಿಲ್ಲ. ಕಾಂಗ್ರೆಸ್‌ ಅಭ್ಯರ್ಥಿ ಡಾ|ಮಹೇಶ ಕಳೆದ ವಿಧಾನಸಭೆ ಚುನಾವಣೆ ಬಳಿಕ ಜನತೆ ಸಂಪರ್ಕ ಹೊಂದಿಲ್ಲ. ಈ ಹಿನ್ನೆಲೆಯಲ್ಲಿ ಜನ ನನ್ನ ಕೈಹಿಡಿಯಲಿದ್ದಾರೆ
– ರಾಜಣ್ಣಾ ಕೊರವಿ, ಜೆಡಿಎಸ್‌ ಅಭ್ಯರ್ಥಿ

ಜಾತಿವಾರು
ಗಾಯತರು: 75,000
ಬ್ರಾಹ್ಮಣರು:26,000
ಎಸ್‌ಎಸ್‌ಕೆ:20,000
ಮರಾಠರು:5,000
ಮುಸ್ಲಿಮರು:35,000
ಎಸ್ಸಿ-ಎಸ್ಟಿ:28,000
ಕ್ರಿಶ್ಚಿಯನ್‌ರು:15,000
ಜೈನರು:5,000

– ಅಮರೇಗೌಡ ಗೋನವಾರ 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.